ಮಡಿಕೇರಿ ತಾಲ್ಲೂಕಿನ ಕೆ. ನಿಡುಗಣೆ ಗ್ರಾಮದ ಸರ್ವೆ ನಂಬರ್ 1/50ರಲ್ಲಿ 4.60 ಎಕರೆ, ಕೆ. ನಿಡುಗಡೆ ಗ್ರಾಮದ ಸರ್ವೆ ನಂಬರ್ 1/13ರಲ್ಲಿ 11.80 ಎಕರೆ, ಕರ್ಣಂಗೇರಿ ಗ್ರಾಮದ ಸರ್ವೆ ನಂಬರ್ 178/1ರಲ್ಲಿ 4 ಎಕರೆ, ಗಾಳಿಬೀಡು ಗ್ರಾಮದ ಸರ್ವೆ ನಂಬರ್ 103ರಲ್ಲಿ 9.50 ಎಕರೆ, ಗಾಳಿಬೀಡು 99/3ರಲ್ಲಿ 7.50 ಎಕರೆ, ಗಾಳಿಬೀಡು ಗ್ರಾಮದ 100/3ರಲ್ಲಿ 7.40 ಎಕರೆ, ಸಂಪಾಜೆ ಹೋಬಳಿಯ ಮದೆ ಗ್ರಾಮದ 399ರಲ್ಲಿ 11.28 ಎಕರೆ, ಬಿಳಿಗೇರಿ ಗ್ರಾಮದ 347/3ರಲ್ಲಿ 1.88 ಎಕರೆ, ಸಂಪಾಜೆ ಹೋಬಳಿಯ ಬಿಳಿಗೇರಿ 347/3ರಲ್ಲಿ 1.50 ಎಕರೆ, ಸಂಪಾಜೆ 54/1ರಲ್ಲಿ 1.50 ಎಕರೆ, ಸೋಮವಾರಪೇಟೆ ತಾಲ್ಲೂಕಿನ ಸುಂಟಿಕೊಪ್ಪ ಹೋಬಳಿಯ ಜಂಬೂರು 13/1ರಲ್ಲಿ 50 ಎಕರೆ, ಕುಶಾಲನಗರದಲ್ಲಿ ಸರ್ವೆ ನಂಬರ್ 17ರಲ್ಲಿ 1 ಎಕರೆ ಸೇರಿ ಒಟ್ಟು 110 ಎಕರೆ ಪುನರ್ವಸತಿಗೆ ಗುರುತಿಸಲಾಗಿದೆ. ಪ್ರಥಮ ಹಂತದಲ್ಲಿ ಆಯ್ದ ಐದು ಕಡೆಗಳಲ್ಲಿ ನಿವೇಶನ ಅಳತೆ ಗುರುತು ಮಾಡುವ ಕಾರ್ಯವು ನಡೆಯಲಿದೆ ಎಂದು ಜಗದೀಶ್ ತಿಳಿಸಿದ್ದಾರೆ.