<p><strong>ಸುಂಟಿಕೊಪ್ಪ</strong>: ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಇಲ್ಲಿನ ಅಯ್ಯಪ್ಪ ದೇವಾಲಯದ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಡಲಾಗಿ ಜಾಹೀರಾತು ಫಲಕ ಹಾಕಿರುವುದು ಬೃಹತ್ ವಾಹನಗಳಿಗೆ ಅಡ್ಡಿ ಉಂಟಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.</p>.<p>ಸುಂಟಿಕೊಪ್ಪ ಗ್ರಾಮ ಪಂಚಾಯಿತಿಯಿಂದ ಅನುಮತಿ ಪಡೆದ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ತಮ್ಮ ನಿರ್ಲಕ್ಷ್ಯದಿಂದ ವಾಹನಗಳಿಗೆ ಅಡ್ಡಿಯಾಗುವ ರೀತಿಯಲ್ಲಿ ಫಲಕ ಅಳವಡಿಸಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಈ ಬಗ್ಗೆ ಗ್ರಾಮ ಪಂಚಾಯಿತಿ ಪಿಡಿಒ ಮತ್ತು ಆಡಳಿತ ಮಂಡಳಿಯ ಗಮನಕ್ಕೆ ಬಂದಿದ್ದರೂ ಕೂಡ ಇದುವರೆಗೂ ತೆರವುಗೊಳಿಸುವಲ್ಲಿ ನಿರ್ಲಕ್ಷ್ಯ ತೋರಿದ್ದಾರೆ ಎಂದು ಅವರು ದೂರಿದ್ದಾರೆ.</p>.<p>ಈ ಬಗ್ಗೆ ಮಾಹಿತಿ ನೀಡಿದ ಗ್ರಾಮ ಪಂಚಾಯಿತಿ ಪಿಡಿಒ ಲೋಕೇಶ್, ‘ಗ್ರಾಮ ಪಂಚಾಯಿತಿಯಿಂದ ಯಾರಿಗೂ ತೊಂದರೆಯಾಗದಂತೆ ಫಲಕ ಅಳವಡಿಸಲಾಗುವುದು ಎಂದು ಅನುಮತಿ ಪಡೆದಿದ್ದಾರೆ. ಬೇಲಿಯ ಬದಿಯಲ್ಲಿ ನಾಮಪಲಕ ಅಳವಡಿಸಬೇಕಾಗಿತ್ತು. ಆದರೆ, ನಮ್ಮಗಳ ಗಮನಕ್ಕೆ ಬಾರದೆ ಈ ರೀತಿ ಅಡ್ಡವಾಗಿ ಅಳವಡಿಸಿರುವ ಬಗ್ಗೆ ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲೂ ಕೂಡ ಚರ್ಚೆ ನಡೆದಿದೆ. ಈ ಬಗ್ಗೆ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರ ಗಮನಕ್ಕೆ ತಂದು ಕೂಡಲೇ ತೆರವುಗೊಳಿಸುವುದಾಗಿ ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಂಟಿಕೊಪ್ಪ</strong>: ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಇಲ್ಲಿನ ಅಯ್ಯಪ್ಪ ದೇವಾಲಯದ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಡಲಾಗಿ ಜಾಹೀರಾತು ಫಲಕ ಹಾಕಿರುವುದು ಬೃಹತ್ ವಾಹನಗಳಿಗೆ ಅಡ್ಡಿ ಉಂಟಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.</p>.<p>ಸುಂಟಿಕೊಪ್ಪ ಗ್ರಾಮ ಪಂಚಾಯಿತಿಯಿಂದ ಅನುಮತಿ ಪಡೆದ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ತಮ್ಮ ನಿರ್ಲಕ್ಷ್ಯದಿಂದ ವಾಹನಗಳಿಗೆ ಅಡ್ಡಿಯಾಗುವ ರೀತಿಯಲ್ಲಿ ಫಲಕ ಅಳವಡಿಸಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಈ ಬಗ್ಗೆ ಗ್ರಾಮ ಪಂಚಾಯಿತಿ ಪಿಡಿಒ ಮತ್ತು ಆಡಳಿತ ಮಂಡಳಿಯ ಗಮನಕ್ಕೆ ಬಂದಿದ್ದರೂ ಕೂಡ ಇದುವರೆಗೂ ತೆರವುಗೊಳಿಸುವಲ್ಲಿ ನಿರ್ಲಕ್ಷ್ಯ ತೋರಿದ್ದಾರೆ ಎಂದು ಅವರು ದೂರಿದ್ದಾರೆ.</p>.<p>ಈ ಬಗ್ಗೆ ಮಾಹಿತಿ ನೀಡಿದ ಗ್ರಾಮ ಪಂಚಾಯಿತಿ ಪಿಡಿಒ ಲೋಕೇಶ್, ‘ಗ್ರಾಮ ಪಂಚಾಯಿತಿಯಿಂದ ಯಾರಿಗೂ ತೊಂದರೆಯಾಗದಂತೆ ಫಲಕ ಅಳವಡಿಸಲಾಗುವುದು ಎಂದು ಅನುಮತಿ ಪಡೆದಿದ್ದಾರೆ. ಬೇಲಿಯ ಬದಿಯಲ್ಲಿ ನಾಮಪಲಕ ಅಳವಡಿಸಬೇಕಾಗಿತ್ತು. ಆದರೆ, ನಮ್ಮಗಳ ಗಮನಕ್ಕೆ ಬಾರದೆ ಈ ರೀತಿ ಅಡ್ಡವಾಗಿ ಅಳವಡಿಸಿರುವ ಬಗ್ಗೆ ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲೂ ಕೂಡ ಚರ್ಚೆ ನಡೆದಿದೆ. ಈ ಬಗ್ಗೆ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರ ಗಮನಕ್ಕೆ ತಂದು ಕೂಡಲೇ ತೆರವುಗೊಳಿಸುವುದಾಗಿ ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>