ಪ್ರಸ್ತುತ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 3ನೇ ತರಗತಿ ಓದುತ್ತಿರುವ ದೀಕ್ಷಿತ್ ಓದಿನಲ್ಲೂ ಮುಂದು. ರವಿಕುಮಾರ್– ಅರ್ಪಿತಾ ದಂಪತಿಗೆ ಗಿರಣಿಯ ಬಗ್ಗೆ, ವಿದ್ಯುತ್ ಬಗ್ಗೆ ಏನೂ ತಿಳಿಯದ ಮಗನ ಸಾಹಸ ಹಾಗೂ ಸಮಯ ಪ್ರಜ್ಞೆ ಬಗ್ಗೆ ಬಹಳ ಹೆಮ್ಮೆ. ಬಾಲಕನ ಸಮಯಪ್ರಜ್ಞೆಯನ್ನು ಪರಿಗಣಿಸಿದ ಸರ್ಕಾರ ಆತನಿಗೆ 2021–22ನೇ ಸಾಲಿನಲ್ಲಿ ‘ಹೊಯ್ಸಳ ಶೌರ್ಯ ಪ್ರಶಸ್ತಿ’ ನೀಡಿ ಗೌರವಿಸಿತು.