<p><strong>ಸುಂಟಿಕೊಪ್ಪ:</strong> ಸಮೀಪದ ಕಂಬಿಬಾಣೆ ರಾಮ ಮತ್ತು ಚಾಮುಂಡೇಶ್ವರಿ ದೇವಸ್ಥಾನ ಸಮಿತಿಯಿಂದ 69ನೇ ವರ್ಷದ ದಸರಾ ಮತ್ತು ವಿಜಯದಶಮಿ ಉತ್ಸವವು ವಿಜೃಂಭಣೆಯಿಂದ ಶನಿವಾರ ರಾತ್ರಿ ನಡೆಯಿತು.</p>.<p>ದೇವಾಲಯದಲ್ಲಿ ವಿಶೇಷ ಪೂಜೆ, ಅಲಂಕಾರ ಪೂಜೆ ನಂತರ ವಿದ್ಯುತ್ ದೀಪಾಲಂಕೃತ ಭವ್ಯ ಮಂಟಪದೊಂದಿಗೆ ವಾದ್ಯಗೋಷ್ಠಿ, ನಾದಸ್ವರದೊಂದಿಗೆ ಭವ್ಯ ಶೋಭಯಾತ್ರೆ ನಡೆಯಿತು.</p>.<p>ಈ ಮದ್ಯೆ ಚಿಕ್ಲಿಹೊಳೆ ಜಲಾಶಯದ ಬಳಿಯ ಚಾಮುಂಡೇಶ್ವರಿ ದೇವಾಲಯದ ಡಿಜೆಯೊಂದಿಗೆ ಅಲಂಕೃತ ಮಂಟಪ ಇದರೊಂದಿಗೆ ಸೇರಿಕೊಂಡು ಮೆರವಣಿಗೆಗೆ ಇನ್ನಷ್ಟು ಮೆರುಗು ನೀಡಿತು.</p>.<p>ಕಂಬಿಬಾಣೆಯ ಎಲ್ಲ ಬೀದಿಗಳಲ್ಲಿ ಸಂಚರಿಸಿದ ಈ 2 ಮಂಟಪಗಳ ದೇವರಿಗೆ ಭಕ್ತರು ಪೂಜೆ ಸಲ್ಲಿಸಿ, ಹಣ್ಣು– ಕಾಯಿ ಅರ್ಪಿಸಿ ಸಂತೃಪ್ತ ಭಾವ ಮೆರೆದರು.</p>.<p>ಡಿಜೆಯ ಹಾಡಿಗೆ ಯುವಕ- ಯುವತಿಯರು ಕುಣಿದು ಕುಪ್ಪಳಿಸಿದರು. ಭಾನುವಾರ ಮುಂಜಾನೆಯವರೆಗೆ ನಡೆದ ಮೆರವಣಿಗೆಯಲ್ಲಿ ಸುತ್ತಮುತ್ತಲಿನ ಗ್ರಾಮಗಳ ನೂರಾರು ಜನ ಭಾಗವಹಿಸಿದ್ದರು.</p>.<p>ದೇವಾಲಯದ ವತಿಯಿಂದ ನೆರೆದಿದ್ದ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.</p>.<p>ಭಾನುವಾರ ಮುಂಜಾನೆ ರಾಮ ಮತ್ತು ಚಾಮುಂಡಿಗೆ ಮಹಾಪೂಜೆಯನ್ನು ಅರ್ಚಕ ಪ್ರಭಾಕರ್ ಕುದ್ಧಣ್ಣಯ್ಯ ಅವರು ನೆರವೇರಿಸುವ ಮೂಲಕ 10 ದಿನಗಳ ನವರಾತ್ರಿ ಉತ್ಸವ ಸಂಪನ್ನಗೊಂಡಿತು.</p>.<p>ದೇವಾಲಯದ ಡಾ.ಶಶಿಕಾಂತ್ ರೈ, ರವಿ, ಸಮಿತಿಯ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಂಟಿಕೊಪ್ಪ:</strong> ಸಮೀಪದ ಕಂಬಿಬಾಣೆ ರಾಮ ಮತ್ತು ಚಾಮುಂಡೇಶ್ವರಿ ದೇವಸ್ಥಾನ ಸಮಿತಿಯಿಂದ 69ನೇ ವರ್ಷದ ದಸರಾ ಮತ್ತು ವಿಜಯದಶಮಿ ಉತ್ಸವವು ವಿಜೃಂಭಣೆಯಿಂದ ಶನಿವಾರ ರಾತ್ರಿ ನಡೆಯಿತು.</p>.<p>ದೇವಾಲಯದಲ್ಲಿ ವಿಶೇಷ ಪೂಜೆ, ಅಲಂಕಾರ ಪೂಜೆ ನಂತರ ವಿದ್ಯುತ್ ದೀಪಾಲಂಕೃತ ಭವ್ಯ ಮಂಟಪದೊಂದಿಗೆ ವಾದ್ಯಗೋಷ್ಠಿ, ನಾದಸ್ವರದೊಂದಿಗೆ ಭವ್ಯ ಶೋಭಯಾತ್ರೆ ನಡೆಯಿತು.</p>.<p>ಈ ಮದ್ಯೆ ಚಿಕ್ಲಿಹೊಳೆ ಜಲಾಶಯದ ಬಳಿಯ ಚಾಮುಂಡೇಶ್ವರಿ ದೇವಾಲಯದ ಡಿಜೆಯೊಂದಿಗೆ ಅಲಂಕೃತ ಮಂಟಪ ಇದರೊಂದಿಗೆ ಸೇರಿಕೊಂಡು ಮೆರವಣಿಗೆಗೆ ಇನ್ನಷ್ಟು ಮೆರುಗು ನೀಡಿತು.</p>.<p>ಕಂಬಿಬಾಣೆಯ ಎಲ್ಲ ಬೀದಿಗಳಲ್ಲಿ ಸಂಚರಿಸಿದ ಈ 2 ಮಂಟಪಗಳ ದೇವರಿಗೆ ಭಕ್ತರು ಪೂಜೆ ಸಲ್ಲಿಸಿ, ಹಣ್ಣು– ಕಾಯಿ ಅರ್ಪಿಸಿ ಸಂತೃಪ್ತ ಭಾವ ಮೆರೆದರು.</p>.<p>ಡಿಜೆಯ ಹಾಡಿಗೆ ಯುವಕ- ಯುವತಿಯರು ಕುಣಿದು ಕುಪ್ಪಳಿಸಿದರು. ಭಾನುವಾರ ಮುಂಜಾನೆಯವರೆಗೆ ನಡೆದ ಮೆರವಣಿಗೆಯಲ್ಲಿ ಸುತ್ತಮುತ್ತಲಿನ ಗ್ರಾಮಗಳ ನೂರಾರು ಜನ ಭಾಗವಹಿಸಿದ್ದರು.</p>.<p>ದೇವಾಲಯದ ವತಿಯಿಂದ ನೆರೆದಿದ್ದ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.</p>.<p>ಭಾನುವಾರ ಮುಂಜಾನೆ ರಾಮ ಮತ್ತು ಚಾಮುಂಡಿಗೆ ಮಹಾಪೂಜೆಯನ್ನು ಅರ್ಚಕ ಪ್ರಭಾಕರ್ ಕುದ್ಧಣ್ಣಯ್ಯ ಅವರು ನೆರವೇರಿಸುವ ಮೂಲಕ 10 ದಿನಗಳ ನವರಾತ್ರಿ ಉತ್ಸವ ಸಂಪನ್ನಗೊಂಡಿತು.</p>.<p>ದೇವಾಲಯದ ಡಾ.ಶಶಿಕಾಂತ್ ರೈ, ರವಿ, ಸಮಿತಿಯ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>