<p><strong>ಸೋಮವಾರಪೇಟೆ:</strong> ‘ನಿಸ್ವಾರ್ಥ ಸಮಾಜ ಸೇವೆಯಿಂದ ಮಾತ್ರ ನಮ್ಮ ಜೀವನ ಸಾರ್ಥಕವಾಗುತ್ತದೆ’ ಎಂದು ರೋಟರಿ ಜಿಲ್ಲಾ ರಾಜ್ಯಪಾಲ ವಿಕ್ರಮ್ ದತ್ತ ಅಭಿಪ್ರಾಯಪಟ್ಟರು.</p>.<p>ಸ್ಥಳೀಯ ರೋಟರಿ ಭವನದಲ್ಲಿ ಈಚೆಗೆ ಗವರ್ನರ್ ಭೇಟಿ ಕಾರ್ಯಕ್ರಮದಲ್ಲಿ ಮಾತನಾಡಿ,‘ಸ್ಥಳೀಯ ರೋಟರಿ ಸಂಸ್ಥೆ ಸಾಕಷ್ಟು ವಾರ್ಷಿಕ ಸಮಾಜಮುಖಿ ಕಾರ್ಯಕ್ರಮ ಮಾಡಿಕೊಂಡು ಬರುತ್ತಿದೆ. ಈ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದೆ. ಅನೇಕ ಜನಪರ ಕಾರ್ಯ ಮಾಡುತ್ತಾ ಇತರ ಕ್ಲಬ್ಗಳಿಗೆ ಮಾದರಿಯಾಗಿದೆ. ರೋಟರಿ ಮಾಜಿ ಅಧ್ಯಕ್ಷರು ಸಂಸ್ಥೆ ಏಳಿಗೆಗಾಗಿ ಶ್ರಮಿಸಿರುವುದು ಶ್ಲಾಘನೀಯ’ ಎಂದು ಹೇಳಿದರು.</p>.<p>‘ತಾವು ಸಂಪಾದಿಸಿದ ಹಣದಲ್ಲಿ ಸ್ವಲ್ಪ ಭಾಗವಾದರೂ, ಅವಶ್ಯಕತೆ ಇರುವವರಿಗೆ ನೀಡಬೇಕು. ಈ ನಿಟ್ಟಿನಲ್ಲಿ ಇಲ್ಲಿನ ಅನೇಕರು ರೋಟರಿ ಫೌಂಡೇಶನ್ಗೆ ಪ್ರತಿವರ್ಷ ದೇಣಿಗೆ ನೀಡುತ್ತಿರುವುದು ಸಂತೋಷದ ವಿಷಯ’ ಎಂದು ಪ್ರಶಂಸೆ ವ್ಯಕ್ತಪಡಿಸಿದರು.</p>.<p>ರೋಟರಿ ಹಿಲ್ಸ್ ಅಧ್ಯಕ್ಷ ಜೆ.ಕೆ. ಪೊನ್ನಪ್ಪ ಮಾತನಾಡಿ, ‘ರೋಟರಿ ಸದಸ್ಯರ ಸಹಕಾರದಿಂದ ಅನೇಕ ಜನಪರ ಯೋಜನೆ ಮಾಡಿದ್ದೇವೆ. ರೋಟರಿಯಲ್ಲಿ ಕೆಲಸ ಮಾಡುವುದೇ ನಮಗೆ ಹೆಮ್ಮೆಯ ವಿಷಯವಾಗಿದ್ದು, ಸಮಾಜಸೇವೆ ಮಾಡುವುದು ರೋಟರಿ ಉತ್ತಮ ವೇದಿಕೆಯಾಗಿದೆ’ ಎಂದು ಹೇಳಿದರು.</p>.<p>ವೇದಿಕೆಯಲ್ಲಿ ಸಹಾಯಕ ರಾಜ್ಯಪಾಲ ಡಾ. ಹರಿ.ಎ.ಶೆಟ್ಟಿ, ವಲಯ ಸೇನಾನಿ ಎಂ.ಎಂ.ಪ್ರಕಾಶ್ ಕುಮಾರ್,ಕಾರ್ಯದರ್ಶಿ ಕೆ.ಡಿ.ಬಿದ್ದಪ್ಪ, ನಿಯೋಜಿತ ಅಧ್ಯಕ್ಷರಾದ ವೀಣಾ ಮನೋಹರ್ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೋಮವಾರಪೇಟೆ:</strong> ‘ನಿಸ್ವಾರ್ಥ ಸಮಾಜ ಸೇವೆಯಿಂದ ಮಾತ್ರ ನಮ್ಮ ಜೀವನ ಸಾರ್ಥಕವಾಗುತ್ತದೆ’ ಎಂದು ರೋಟರಿ ಜಿಲ್ಲಾ ರಾಜ್ಯಪಾಲ ವಿಕ್ರಮ್ ದತ್ತ ಅಭಿಪ್ರಾಯಪಟ್ಟರು.</p>.<p>ಸ್ಥಳೀಯ ರೋಟರಿ ಭವನದಲ್ಲಿ ಈಚೆಗೆ ಗವರ್ನರ್ ಭೇಟಿ ಕಾರ್ಯಕ್ರಮದಲ್ಲಿ ಮಾತನಾಡಿ,‘ಸ್ಥಳೀಯ ರೋಟರಿ ಸಂಸ್ಥೆ ಸಾಕಷ್ಟು ವಾರ್ಷಿಕ ಸಮಾಜಮುಖಿ ಕಾರ್ಯಕ್ರಮ ಮಾಡಿಕೊಂಡು ಬರುತ್ತಿದೆ. ಈ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದೆ. ಅನೇಕ ಜನಪರ ಕಾರ್ಯ ಮಾಡುತ್ತಾ ಇತರ ಕ್ಲಬ್ಗಳಿಗೆ ಮಾದರಿಯಾಗಿದೆ. ರೋಟರಿ ಮಾಜಿ ಅಧ್ಯಕ್ಷರು ಸಂಸ್ಥೆ ಏಳಿಗೆಗಾಗಿ ಶ್ರಮಿಸಿರುವುದು ಶ್ಲಾಘನೀಯ’ ಎಂದು ಹೇಳಿದರು.</p>.<p>‘ತಾವು ಸಂಪಾದಿಸಿದ ಹಣದಲ್ಲಿ ಸ್ವಲ್ಪ ಭಾಗವಾದರೂ, ಅವಶ್ಯಕತೆ ಇರುವವರಿಗೆ ನೀಡಬೇಕು. ಈ ನಿಟ್ಟಿನಲ್ಲಿ ಇಲ್ಲಿನ ಅನೇಕರು ರೋಟರಿ ಫೌಂಡೇಶನ್ಗೆ ಪ್ರತಿವರ್ಷ ದೇಣಿಗೆ ನೀಡುತ್ತಿರುವುದು ಸಂತೋಷದ ವಿಷಯ’ ಎಂದು ಪ್ರಶಂಸೆ ವ್ಯಕ್ತಪಡಿಸಿದರು.</p>.<p>ರೋಟರಿ ಹಿಲ್ಸ್ ಅಧ್ಯಕ್ಷ ಜೆ.ಕೆ. ಪೊನ್ನಪ್ಪ ಮಾತನಾಡಿ, ‘ರೋಟರಿ ಸದಸ್ಯರ ಸಹಕಾರದಿಂದ ಅನೇಕ ಜನಪರ ಯೋಜನೆ ಮಾಡಿದ್ದೇವೆ. ರೋಟರಿಯಲ್ಲಿ ಕೆಲಸ ಮಾಡುವುದೇ ನಮಗೆ ಹೆಮ್ಮೆಯ ವಿಷಯವಾಗಿದ್ದು, ಸಮಾಜಸೇವೆ ಮಾಡುವುದು ರೋಟರಿ ಉತ್ತಮ ವೇದಿಕೆಯಾಗಿದೆ’ ಎಂದು ಹೇಳಿದರು.</p>.<p>ವೇದಿಕೆಯಲ್ಲಿ ಸಹಾಯಕ ರಾಜ್ಯಪಾಲ ಡಾ. ಹರಿ.ಎ.ಶೆಟ್ಟಿ, ವಲಯ ಸೇನಾನಿ ಎಂ.ಎಂ.ಪ್ರಕಾಶ್ ಕುಮಾರ್,ಕಾರ್ಯದರ್ಶಿ ಕೆ.ಡಿ.ಬಿದ್ದಪ್ಪ, ನಿಯೋಜಿತ ಅಧ್ಯಕ್ಷರಾದ ವೀಣಾ ಮನೋಹರ್ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>