<p><strong>ಮಡಿಕೇರಿ</strong>: ಕೊಡಗು ಜಿಲ್ಲೆಯಲ್ಲಿ ಮಳೆಗಾಲದ ಅತ್ಯಧಿಕ. ಈ ಸಮಯದಲ್ಲಿ ಶವಸಂಸ್ಕಾರ ಮಾಡಬೇಕಾದರೆ ಒಣಗಿದ ಕಟ್ಟಿಗೆಗಳ ಕೊರತೆ ಬಹುವಾಗಿ ಕಾಡುತ್ತದೆ. ಇದರಿಂದ ಶವಸಂಸ್ಕಾರಕ್ಕೆ ಜನರು ಇನ್ನಿಲ್ಲದ ಪಡಿಪಾಟೀಲು ಅನುಭವಿಸುತ್ತಿದ್ದು, ಸರ್ಕಾರ ಎಲ್ಲ ತಾಲ್ಲೂಕುಗಳಲ್ಲಿಯೂ ವಿದ್ಯುತ್ ಚಿತಾಗಾರಗಳನ್ನು ನಿರ್ಮಿಸಬೇಕು ಎಂದು ಬಹುಜನ ಸಮಾಜ ಪಾರ್ಟಿ (ಬಿಎಸ್ಪಿ) ಒತ್ತಾಯಿಸಿದೆ.</p>.<p>ಈ ಬೇಡಿಕೆಯ ಈಡೇರಿಕೆಗೆ ಹಾಗೂ ಕೊಡಗು ಜಿಲ್ಲೆಗೆ ಮೂಲಸೌಕರ್ಯ ಕಲ್ಪಿಸಲು ಒತ್ತಾಯಿಸಿ ಬಿಎಸ್ಪಿ ಕಾರ್ಯಕರ್ತರು ಬುಧವಾರ ಪಕ್ಷದ ಜಿಲ್ಲಾ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಅಣಕು ಶವಯಾತ್ರೆ ನಡೆಸಿದರು. ಜನರಲ್ ತಿಮ್ಮಯ್ಯ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಗಮನ ಸೆಳೆದರು.</p>.<p>ಈ ವೇಳೆ ಮಾತನಾಡಿದ ಬಿಎಸ್ಪಿ ಜಿಲ್ಲಾಧ್ಯಕ್ಷ ಆಟ್ರಂಗಡ ದಿವಿಲ್ಕುಮಾರ್, ‘ಜಿಲ್ಲೆಯುಲ್ಲಿ ಸಾಮಾನ್ಯವಾಗಿ ಕನಿಷ್ಠ ಎಂದರೂ 3ರಿಂದ 4 ತಿಂಗಳುಗಳ ಕಾಲ ಮಳೆಗಾಲ ಇದ್ದೇ ಇರುತ್ತದೆ. ಈ ಅವಧಿಯಲ್ಲಿ ಶವ ಸಂಸ್ಕಾರಕ್ಕೆ ಅಗತ್ಯವಾಗಿ ಬೇಕಾದ ಒಣಗಿದ ಕಟ್ಟಿಗೆಗಳು ಸಿಗದೇ ಜನರು ಪರದಾಡುತ್ತಾರೆ. ಇಂತಹದ್ದೊಂದು ಸಮಸ್ಯೆಯ ಕುರಿತು ಯಾವ ಜನಪ್ರತಿನಿಧಿಯೂ ಗಮನ ಹರಿಸಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ರೇವತಿರಾಜ್ ಮಾತನಾಡಿ, ‘ಕೊಡಗು ಜಿಲ್ಲೆಗೆ ಮುಖ್ಯವಾಗಿ ಮಳೆಗಾಲದಲ್ಲಿ ವಿದ್ಯುತ್ ಚಿತಾಗಾರದ ಅವಶ್ಯಕತೆ ಇದೆ. ಸರ್ಕಾರದಿಂದ ವಿದ್ಯುತ್ ಚಿತಾಗಾರ ಮಾಡಲು ಸಾಧ್ಯವಾಗುವುದಿಲ್ಲವೆಂದು ಲಿಖಿತರೂಪದಲ್ಲಿ ನೀಡದ್ದಲ್ಲಿ ಬಿಎಸ್ಪಿ ವತಿಯಿಂದ ಹಣ ಸಂಗ್ರಹಿಸಿ ನಿರ್ಮಿಸುತ್ತೇವೆ’ ಎಂದೂ ಸವಾಲೆಸೆದರು.</p>.<p>ಈ ವೇಳೆ ಪ್ರತಿಭಟನಾನಿರತರು ವಿದ್ಯುತ್ ಚಿತಾಗಾರ ನಿರ್ಮಾಣ ಮಾಡುವಂತೆ ಜಿಲ್ಲಾಡಳಿತ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.</p>.<p>ಪಕ್ಷದ ರಾಜ್ಯ ಕಾರ್ಯದರ್ಶಿಗಳಾದ ಎಂ.ಎಂ.ರಾಜು, ಅನಂತು, ಚೇತನ್, ಮೈಸೂರು ಜಿಲ್ಲಾ ಉಸ್ತುವಾರಿ ಚಂದ್ರಶೇಖರ್, ಮಹಿಳಾ ಹೋರಾಟ ಸಮಿತಿ ರಾಜ್ಯಾಧ್ಯಕ್ಷೆ ಸರಸ್ವತಿ ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ಕೊಡಗು ಜಿಲ್ಲೆಯಲ್ಲಿ ಮಳೆಗಾಲದ ಅತ್ಯಧಿಕ. ಈ ಸಮಯದಲ್ಲಿ ಶವಸಂಸ್ಕಾರ ಮಾಡಬೇಕಾದರೆ ಒಣಗಿದ ಕಟ್ಟಿಗೆಗಳ ಕೊರತೆ ಬಹುವಾಗಿ ಕಾಡುತ್ತದೆ. ಇದರಿಂದ ಶವಸಂಸ್ಕಾರಕ್ಕೆ ಜನರು ಇನ್ನಿಲ್ಲದ ಪಡಿಪಾಟೀಲು ಅನುಭವಿಸುತ್ತಿದ್ದು, ಸರ್ಕಾರ ಎಲ್ಲ ತಾಲ್ಲೂಕುಗಳಲ್ಲಿಯೂ ವಿದ್ಯುತ್ ಚಿತಾಗಾರಗಳನ್ನು ನಿರ್ಮಿಸಬೇಕು ಎಂದು ಬಹುಜನ ಸಮಾಜ ಪಾರ್ಟಿ (ಬಿಎಸ್ಪಿ) ಒತ್ತಾಯಿಸಿದೆ.</p>.<p>ಈ ಬೇಡಿಕೆಯ ಈಡೇರಿಕೆಗೆ ಹಾಗೂ ಕೊಡಗು ಜಿಲ್ಲೆಗೆ ಮೂಲಸೌಕರ್ಯ ಕಲ್ಪಿಸಲು ಒತ್ತಾಯಿಸಿ ಬಿಎಸ್ಪಿ ಕಾರ್ಯಕರ್ತರು ಬುಧವಾರ ಪಕ್ಷದ ಜಿಲ್ಲಾ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಅಣಕು ಶವಯಾತ್ರೆ ನಡೆಸಿದರು. ಜನರಲ್ ತಿಮ್ಮಯ್ಯ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಗಮನ ಸೆಳೆದರು.</p>.<p>ಈ ವೇಳೆ ಮಾತನಾಡಿದ ಬಿಎಸ್ಪಿ ಜಿಲ್ಲಾಧ್ಯಕ್ಷ ಆಟ್ರಂಗಡ ದಿವಿಲ್ಕುಮಾರ್, ‘ಜಿಲ್ಲೆಯುಲ್ಲಿ ಸಾಮಾನ್ಯವಾಗಿ ಕನಿಷ್ಠ ಎಂದರೂ 3ರಿಂದ 4 ತಿಂಗಳುಗಳ ಕಾಲ ಮಳೆಗಾಲ ಇದ್ದೇ ಇರುತ್ತದೆ. ಈ ಅವಧಿಯಲ್ಲಿ ಶವ ಸಂಸ್ಕಾರಕ್ಕೆ ಅಗತ್ಯವಾಗಿ ಬೇಕಾದ ಒಣಗಿದ ಕಟ್ಟಿಗೆಗಳು ಸಿಗದೇ ಜನರು ಪರದಾಡುತ್ತಾರೆ. ಇಂತಹದ್ದೊಂದು ಸಮಸ್ಯೆಯ ಕುರಿತು ಯಾವ ಜನಪ್ರತಿನಿಧಿಯೂ ಗಮನ ಹರಿಸಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ರೇವತಿರಾಜ್ ಮಾತನಾಡಿ, ‘ಕೊಡಗು ಜಿಲ್ಲೆಗೆ ಮುಖ್ಯವಾಗಿ ಮಳೆಗಾಲದಲ್ಲಿ ವಿದ್ಯುತ್ ಚಿತಾಗಾರದ ಅವಶ್ಯಕತೆ ಇದೆ. ಸರ್ಕಾರದಿಂದ ವಿದ್ಯುತ್ ಚಿತಾಗಾರ ಮಾಡಲು ಸಾಧ್ಯವಾಗುವುದಿಲ್ಲವೆಂದು ಲಿಖಿತರೂಪದಲ್ಲಿ ನೀಡದ್ದಲ್ಲಿ ಬಿಎಸ್ಪಿ ವತಿಯಿಂದ ಹಣ ಸಂಗ್ರಹಿಸಿ ನಿರ್ಮಿಸುತ್ತೇವೆ’ ಎಂದೂ ಸವಾಲೆಸೆದರು.</p>.<p>ಈ ವೇಳೆ ಪ್ರತಿಭಟನಾನಿರತರು ವಿದ್ಯುತ್ ಚಿತಾಗಾರ ನಿರ್ಮಾಣ ಮಾಡುವಂತೆ ಜಿಲ್ಲಾಡಳಿತ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.</p>.<p>ಪಕ್ಷದ ರಾಜ್ಯ ಕಾರ್ಯದರ್ಶಿಗಳಾದ ಎಂ.ಎಂ.ರಾಜು, ಅನಂತು, ಚೇತನ್, ಮೈಸೂರು ಜಿಲ್ಲಾ ಉಸ್ತುವಾರಿ ಚಂದ್ರಶೇಖರ್, ಮಹಿಳಾ ಹೋರಾಟ ಸಮಿತಿ ರಾಜ್ಯಾಧ್ಯಕ್ಷೆ ಸರಸ್ವತಿ ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>