ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಮವಾರಪೇಟೆ: ಆಷಾಢ ಮಾಸದ ಕೊನೆಯ ಶುಕ್ರವಾರ ವಿಶೇಷ ಪೂಜೆ

Published 14 ಜುಲೈ 2023, 13:34 IST
Last Updated 14 ಜುಲೈ 2023, 13:34 IST
ಅಕ್ಷರ ಗಾತ್ರ

ಸೋಮವಾರಪೇಟೆ: ಆಷಾಢ ಮಾಸದ ಕೊನೆ ಶುಕ್ರವಾರ ಸೋಮೇಶ್ವರ ದೇವಾಲಯ ಹಾಗೂ ರಾಮ ಮಂದಿರಗಳಲ್ಲಿ ವಿಶೇಷ ಪೂಜೆ ನಡೆಯಿತು.

ಇಲ್ಲಿನ ವಾಹನ ಚಾಲಕರು ಮತ್ತು ಮಾಲೀಕರ ಸಂಘದ ಚಾಮುಂಡೇಶ್ವರಿ ಬಳಗದಿಂದ ಮೊದಲನೇ ವರ್ಷದ ಆಷಾಢದ ಕೊನೆಯ ಶುಕ್ರವಾರದ ವಿಶೇಷ ಪೂಜೆ ಹಾಗೂ ಅನ್ನ ಸಂತರ್ಪಣೆ ನಡೆಯಿತು.

ಪಟ್ಟಣದ ವಾಹನ ನಿಲ್ದಾಣದಲ್ಲಿ ಚಾಮುಂಡೇಶ್ವರಿಯ ವಿಶೇಷ ಪೂಜಾ ಕಾರ್ಯಕ್ರಮಕ್ಕೆ ಉದ್ಯಮಿ ಗಿರಿಶ್ ಮಲ್ಲಪ್ಪ ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿದರು. ದೇವಿಗೆ ಅರ್ಚನೆಯೊಂದಿಗೆ ಮಹಾಮಂಗಳಾರತಿ ನಂತರ ಪ್ರಸಾದ ವಿನಿಯೋಗ ನಡೆಯಿತು.

ಈ ಸಂದರ್ಭ ವಾಹನ ಚಾಲಕರು, ಮಾಲೀಕರ ಸಂಘದ ಅಧ್ಯಕ್ಷ ಕೆ.ಜಿ.ಸುರೇಶ್, ಉಪಾಧ್ಯಕ್ಷ ಬಾಲಕೃಷ್ಣ ಪೂಜಾರಿ, ಹಿಂದೂ ಜಾಗರಣ ವೇದಿಕೆ ಸಂಚಾಲಕ ಸುಭಾಷ್ ತಿಮ್ಮಯ್ಯ, ಚಾಮುಂಡೇಶ್ವರಿ ಬಳಗದ ಸಂಚಾಲಕ ರೋಹಿತ್ ಪೂಜಾರಿ, ಪ್ರಮುಖರಾದ ಹೆಚ್.ಎಸ್. ಗಂಗಾ, ಕಾಶಿಗೋಪಾಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT