<p><strong>ಸೋಮವಾರಪೇಟೆ</strong>: ತಾಲ್ಲೂಕಿನ ಶಾಂತಳ್ಳಿ ಹೋಬಳಿ ಬೆಟ್ಟದಳ್ಳಿ ಭಾಗದಲ್ಲಿ ಮಾನ್ಸೂನ್ ಮಡ್ವೆಂಚರ್ ಡ್ರೈವ್-2024 ಮಡ್ವೆಂಚರ್ ಡ್ರೈವ್ ರ್ಯಾಲಿ ಪರಿಸರವಾದಿಗಳ ವಿರೋಧದ ನಡುವೆಯೂ ಶನಿವಾರ ಯಶಸ್ವಿಯಾಗಿ ನಡೆಯಿತು.</p>.<p>ರಾಜ್ಯ, ನೆರೆಯ ಕೇರಳ, ತಮಿಳುನಾಡಿನಿಂದಲೂ ಆಗಮಿಸಿದ್ದ ಜೀಪ್ಗಳು ಕೆಸರುಮಯ ರಸ್ತೆಯಲ್ಲಿ ಸಾಗಿ ಸಾಹಸಮಯ ಚಾಲನೆ ಸವಾಲನ್ನು ಸಮರ್ಥವಾಗಿ ಎದುರಿಸಿದವು. ಇದಕ್ಕೂ ಮುನ್ನ ಶಾಂತಳ್ಳಿ ಕುಮಾರಲಿಂಗೇಶ್ವರ ದೇವಾಲಯದ ಮುಂಭಾಗ ಡ್ರೈವ್ಗೆ ಬಿಜೆಪಿ ಪ್ರಮುಖ ಎಸ್.ಜಿ. ಮೇದಪ್ಪ ಚಾಲನೆ ನೀಡಿದರು.</p>.<p>ನಂತರ ಮಾತನಾಡಿ, ‘ತಾಲ್ಲೂಕಿನಲ್ಲಿ ಪ್ರವಾಸೋದ್ಯಮ ಬೆಳವಣಿಗೆಗೆ ಹೆಚ್ಚಿನ ಯೋಜನೆಗಳ ಅಗತ್ಯವಿದೆ. ಪರಿಸರಕ್ಕೆ ಪೂರಕವಾದ ಪ್ರವಾಸೋದ್ಯಮದಿಂದ ಅಭಿವೃದ್ಧಿ ನಿರೀಕ್ಷಿಸಬಹುದು’ ಎಂದರು.</p>.<p>ಕಾಂಗ್ರೆಸ್ ಜಿಲ್ಲಾ ಸಮಿತಿ ಉಪಾಧ್ಯಕ್ಷ ಕೆ.ಎಂ. ಲೋಕೇಶ್ ಮಾತನಾಡಿ, ‘ಗ್ರಾಮೀಣ ಭಾಗದ ರೈತರು ತಮ್ಮ ತೋಟ, ಗದ್ದೆಗಳಿಗೆ ತೆರಳಲು ರಸ್ತೆಯ ಸಮಸ್ಯೆ ಇದ್ದು, ಇಂತಹ ಸಾಹಸಮಯ ಚಾಲನೆಗಾಗಿ ರಸ್ತೆ ನಿರ್ಮಿಸುವುದರಿಂದ ಸ್ಥಳೀಯರಿಗೂ ಅನುಕೂಲವಾಗುತ್ತದೆ’ ಎಂದರು.</p>.<p> ಡ್ರೈವ್ನಲ್ಲಿ 80ಕ್ಕೂ ಅಧಿಕ ವಾಹನಗಳು ಭಾಗಿಯಾಗಿದ್ದವು. ಹಲವು ವಾಹನಗಳು ಕೆಸರಿನ ಹೊಂಡಗಳಲ್ಲಿ ಸಿಲುಕಿಕೊಂಡ ಸಂದರ್ಭ ಟ್ರ್ಯಾಕ್ಟರ್ಗಳ ಮೂಲಕ ಹೊರಗೆಳೆದು ಆಯೋಜಕರು ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.</p>.<p> ಭಾಗದ ಅರಣ್ಯ ಇಲಾಖೆಗೆ ಸೇರಿದ ಸ್ಥಳದ ಮೂಲಕ ಹಾದುಹೋಗಿದ್ದ ರಸ್ತೆಯಲ್ಲಿ ಸಾಹಸಮಯ ಚಾಲನೆಗೆ ಅರಣ್ಯಾಧಿಕಾರಿಗಳು ತಡೆಯೊಡ್ಡಿದರು. ಎರಡೂ ಬದಿಯಲ್ಲಿ ಸ್ಥಳೀಯರ ತೋಟ, ನಡುವೆ ಅರಣ್ಯ ಇಲಾಖೆಗೆ ಸೇರಿದ ಜಾಗವಿದ್ದ ಸ್ಥಳಗಳಲ್ಲಿ ಚಾಲನೆಗೆ ಅವಕಾಶ ನೀಡಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೋಮವಾರಪೇಟೆ</strong>: ತಾಲ್ಲೂಕಿನ ಶಾಂತಳ್ಳಿ ಹೋಬಳಿ ಬೆಟ್ಟದಳ್ಳಿ ಭಾಗದಲ್ಲಿ ಮಾನ್ಸೂನ್ ಮಡ್ವೆಂಚರ್ ಡ್ರೈವ್-2024 ಮಡ್ವೆಂಚರ್ ಡ್ರೈವ್ ರ್ಯಾಲಿ ಪರಿಸರವಾದಿಗಳ ವಿರೋಧದ ನಡುವೆಯೂ ಶನಿವಾರ ಯಶಸ್ವಿಯಾಗಿ ನಡೆಯಿತು.</p>.<p>ರಾಜ್ಯ, ನೆರೆಯ ಕೇರಳ, ತಮಿಳುನಾಡಿನಿಂದಲೂ ಆಗಮಿಸಿದ್ದ ಜೀಪ್ಗಳು ಕೆಸರುಮಯ ರಸ್ತೆಯಲ್ಲಿ ಸಾಗಿ ಸಾಹಸಮಯ ಚಾಲನೆ ಸವಾಲನ್ನು ಸಮರ್ಥವಾಗಿ ಎದುರಿಸಿದವು. ಇದಕ್ಕೂ ಮುನ್ನ ಶಾಂತಳ್ಳಿ ಕುಮಾರಲಿಂಗೇಶ್ವರ ದೇವಾಲಯದ ಮುಂಭಾಗ ಡ್ರೈವ್ಗೆ ಬಿಜೆಪಿ ಪ್ರಮುಖ ಎಸ್.ಜಿ. ಮೇದಪ್ಪ ಚಾಲನೆ ನೀಡಿದರು.</p>.<p>ನಂತರ ಮಾತನಾಡಿ, ‘ತಾಲ್ಲೂಕಿನಲ್ಲಿ ಪ್ರವಾಸೋದ್ಯಮ ಬೆಳವಣಿಗೆಗೆ ಹೆಚ್ಚಿನ ಯೋಜನೆಗಳ ಅಗತ್ಯವಿದೆ. ಪರಿಸರಕ್ಕೆ ಪೂರಕವಾದ ಪ್ರವಾಸೋದ್ಯಮದಿಂದ ಅಭಿವೃದ್ಧಿ ನಿರೀಕ್ಷಿಸಬಹುದು’ ಎಂದರು.</p>.<p>ಕಾಂಗ್ರೆಸ್ ಜಿಲ್ಲಾ ಸಮಿತಿ ಉಪಾಧ್ಯಕ್ಷ ಕೆ.ಎಂ. ಲೋಕೇಶ್ ಮಾತನಾಡಿ, ‘ಗ್ರಾಮೀಣ ಭಾಗದ ರೈತರು ತಮ್ಮ ತೋಟ, ಗದ್ದೆಗಳಿಗೆ ತೆರಳಲು ರಸ್ತೆಯ ಸಮಸ್ಯೆ ಇದ್ದು, ಇಂತಹ ಸಾಹಸಮಯ ಚಾಲನೆಗಾಗಿ ರಸ್ತೆ ನಿರ್ಮಿಸುವುದರಿಂದ ಸ್ಥಳೀಯರಿಗೂ ಅನುಕೂಲವಾಗುತ್ತದೆ’ ಎಂದರು.</p>.<p> ಡ್ರೈವ್ನಲ್ಲಿ 80ಕ್ಕೂ ಅಧಿಕ ವಾಹನಗಳು ಭಾಗಿಯಾಗಿದ್ದವು. ಹಲವು ವಾಹನಗಳು ಕೆಸರಿನ ಹೊಂಡಗಳಲ್ಲಿ ಸಿಲುಕಿಕೊಂಡ ಸಂದರ್ಭ ಟ್ರ್ಯಾಕ್ಟರ್ಗಳ ಮೂಲಕ ಹೊರಗೆಳೆದು ಆಯೋಜಕರು ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.</p>.<p> ಭಾಗದ ಅರಣ್ಯ ಇಲಾಖೆಗೆ ಸೇರಿದ ಸ್ಥಳದ ಮೂಲಕ ಹಾದುಹೋಗಿದ್ದ ರಸ್ತೆಯಲ್ಲಿ ಸಾಹಸಮಯ ಚಾಲನೆಗೆ ಅರಣ್ಯಾಧಿಕಾರಿಗಳು ತಡೆಯೊಡ್ಡಿದರು. ಎರಡೂ ಬದಿಯಲ್ಲಿ ಸ್ಥಳೀಯರ ತೋಟ, ನಡುವೆ ಅರಣ್ಯ ಇಲಾಖೆಗೆ ಸೇರಿದ ಜಾಗವಿದ್ದ ಸ್ಥಳಗಳಲ್ಲಿ ಚಾಲನೆಗೆ ಅವಕಾಶ ನೀಡಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>