<p>ಕುಶಾಲನಗರ: ಅಧಿಕಾರಿಗಳ ಗೈರು ಹಿನ್ನೆಲೆಯಲ್ಲಿ ಗುಡ್ಡೆಹೊಸೂರು ಗ್ರಾಮ ಪಂಚಾಯತಿಯ 2023-24ನೇ ಸಾಲಿನ ಗ್ರಾಮಸಭೆ ಮೊಡುಕುಗೊಳಿಸಿ ಮುಂದೂಡಲಾಯಿತು.</p>.<p>ಗ್ರಾಮಸಭೆ ಪಂಚಾಯತಿ ಅಧ್ಯಕ್ಷೆ ಪಿ.ಎಂ.ರುಕ್ಮಿಣಿ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿತ್ತು. ಸಭೆಗೆ ಅಧಿಕಾರಿಗಳ ಗೈರು ಬಗ್ಗೆ ಸಾರ್ವಜನಿಕರಿಂದ ತೀವ್ರ ಅಸಮಾಧಾನ ವ್ಯಕ್ತವಾಯಿತು.</p>.<p>ಎಲ್ಲಾ ಅಧಿಕಾರಿಗಳ ಉಪಸ್ಥಿತಿಯಲ್ಲಿ ಗ್ರಾಮಸಭೆ ನಡೆಯಬೇಕಿದೆ. ಇಲಾಖೆ ಅಧಿಕಾರಿಗಳ ಬದಲಿಗೆ ಗ್ರಾಮ ಪಂಚಾಯತಿ ಮೂಲಕ ಸಮಸ್ಯೆಗಳನ್ನು ಬಗೆಹರಿಸುವ ಜವಾಬ್ದಾರಿ ಪಂಚಾಯತಿ ಆಡಳಿತ ವಹಿಸಿಕೊಂಡಲ್ಲಿ ಮಾತ್ರ ಸಭೆ ಮುಂದುವರೆಸಿ. ಇಲ್ಲದಿದ್ದಲ್ಲಿ ಸಭೆ ಮುಂದೂಡಿ ಎಂದು ಗ್ರಾಮಸ್ಥರು ಆಗ್ರಹಿಸಿದ ಹಿನ್ನೆಲೆಯಲ್ಲಿ ಸಭೆ ಮುಂದೂಡಲಾಯಿತು.</p>.<p>ಈ ವೇಳೆ ಗುಡ್ಡೆಹೊಸೂರು- ರಸಲ್ ಪುರ ರಸ್ತೆ ಕಾಮಗಾರಿ ನಡೆಸುವಾಗ ರಸ್ತೆ ಬದಿ ವಿದ್ಯುತ್ ಕಂಬಗಳನ್ನು ತೆರವುಗೊಳಿಸಿಲ್ಲ. ಚರಂಡಿ ನಿರ್ಮಾಣ ಕೂಡ ಅವೈಜ್ಞಾನಿಕವಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.</p>.<p>ರಸ್ತೆ ಕಾಮಗಾರಿ ಪೂರ್ಣಗೊಂಡು ಮೂರು ವರ್ಷ ಕಳೆದಿದೆ. ಅಧಿಕಾರಿ ಬದಲಿಗೆ ಸಹಾಯಕರು ಸಭೆಯಲ್ಲಿ ಪಾಲ್ಗೊಂಡಲ್ಲಿ ಅವರಿಂದ ಸಮಸ್ಯೆ ನಿವಾರಣೆ ಸಾಧ್ಯವಿಲ್ಲ. ಆದ್ದರಿಂದ ಲೋಕೋಪಯೋಗಿ ಇಲಾಖೆ ಅಧಿಕಾರಿಯನ್ನು ಕಡ್ಡಾಯವಾಗಿ ಸಭೆಗೆ ಕರೆಸುವಂತೆ ಒತ್ತಾಯಿಸಿದರು.</p>.<p>ಸಹಾಯಕ ಎಂಜಿನಿಯರ್ ಅವರ ಸಹಾಯಕರಿಂದ ಗ್ರಾಮಸ್ಥರ ಪ್ರಶ್ನೆಗೆ ಸೂಕ್ತ ಉತ್ತರ ದೊರೆಯದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಸಭೆ ಮುಂದೂಡುವಂತೆ ಪಟ್ಟು ಹಿಡಿದರು.</p>.<p>ಅಧಿಕಾರಿಗಳ ಅನುಪಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮಸ್ಥರು ಕೂಡ ಸಭೆಯಲ್ಲಿ ಪಾಲ್ಗೊಳ್ಳಲು ಮುಂದಾಗುತ್ತಿಲ್ಲ. ಆದ್ದರಿಂದ ಅವರನ್ನು ಸಭೆಗೆ ಕರೆಸಿ ನಂತರ ಸಭೆ ಮುಂದುವರೆಸಲು ಗ್ರಾಮಸ್ಥರಾದ ಜಗ, ಶಶಿಕುಮಾರ್, ಸಂತೋಷ್, ಸಲಿ ಒತ್ತಾಯಿಸಿದರು.</p>.<p>ಸಭೆಯ ನೋಡಲ್ ಅಧಿಕಾರಿ ಬಿಇಒ ಕಚೇರಿಯ ಲೋಕೇಶ್, ‘ಸೋಮವಾರಪೇಟೆಯಲ್ಲಿ ರಾಜ್ಯಮಟ್ಟದ ಆಡಳಿತಾತ್ಮಕ ಸಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಹುತೇಕ ಅಧಿಕಾರಿಗಳು ಅಲ್ಲಿಗೆ ತೆರಳಿದ್ದಾರೆ. ಲೋಕೋಪಯೋಗಿ ಇಲಾಖೆ ಅಭಿಯಂತರರ ಸಹಾಯಕರು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದು ತಿಳಿಸಿದರು.</p>.<p>ಗ್ರಾಮಸಭೆಗಳಿಗೆ ತಾಲ್ಲೂಕು ಮಟ್ಟದ ಅಧಿಕಾರಿಗಳ ಹಾಜರಿಗೆ ಒತ್ತಾಯಿಸುವಂತಿಲ್ಲ. ಮುಂದೂಡಿದ ಸಭೆಗೂ ಅಧಿಕಾರಿಗಳು ಗೈರು ಹಾಜರಾದರೆ ಅಂತಹವರ ವಿರುದ್ಧ ಸಿಇಒಗೆ ದೂರು ಸಲ್ಲಿಸಬಹುದೇ ವಿನಾ ಯಾವುದೇ ರೀತಿಯ ಕ್ರಮಕೈಗೊಳ್ಳಲು ಗ್ರಾಪಂ ಆಡಳಿತ ಹಾಗೂ ಅಧಿಕಾರಿಗೆ ಅಧಿಕಾರವಿಲ್ಲ ಎಂದು<br /> ಗ್ರಾಪಂ ಪಿಡಿಒ ಸುಮೇಶ್ ಸಭೆಯ ಗಮನಕ್ಕೆ ತಂದರು. ಈ ಹಿನ್ನಲೆಯಲ್ಲಿ ಗ್ರಾಮಸಭೆ ಮುಂದೂಡಲಾಯಿತು.</p>.<p>ಗ್ರಾಪಂ ಉಪಾಧ್ಯಕ್ಷ ಪಟ್ಟುಮಾದಪ್ಪ, ಪಿಡಿಒ ಸುಮೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಶಾಲನಗರ: ಅಧಿಕಾರಿಗಳ ಗೈರು ಹಿನ್ನೆಲೆಯಲ್ಲಿ ಗುಡ್ಡೆಹೊಸೂರು ಗ್ರಾಮ ಪಂಚಾಯತಿಯ 2023-24ನೇ ಸಾಲಿನ ಗ್ರಾಮಸಭೆ ಮೊಡುಕುಗೊಳಿಸಿ ಮುಂದೂಡಲಾಯಿತು.</p>.<p>ಗ್ರಾಮಸಭೆ ಪಂಚಾಯತಿ ಅಧ್ಯಕ್ಷೆ ಪಿ.ಎಂ.ರುಕ್ಮಿಣಿ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿತ್ತು. ಸಭೆಗೆ ಅಧಿಕಾರಿಗಳ ಗೈರು ಬಗ್ಗೆ ಸಾರ್ವಜನಿಕರಿಂದ ತೀವ್ರ ಅಸಮಾಧಾನ ವ್ಯಕ್ತವಾಯಿತು.</p>.<p>ಎಲ್ಲಾ ಅಧಿಕಾರಿಗಳ ಉಪಸ್ಥಿತಿಯಲ್ಲಿ ಗ್ರಾಮಸಭೆ ನಡೆಯಬೇಕಿದೆ. ಇಲಾಖೆ ಅಧಿಕಾರಿಗಳ ಬದಲಿಗೆ ಗ್ರಾಮ ಪಂಚಾಯತಿ ಮೂಲಕ ಸಮಸ್ಯೆಗಳನ್ನು ಬಗೆಹರಿಸುವ ಜವಾಬ್ದಾರಿ ಪಂಚಾಯತಿ ಆಡಳಿತ ವಹಿಸಿಕೊಂಡಲ್ಲಿ ಮಾತ್ರ ಸಭೆ ಮುಂದುವರೆಸಿ. ಇಲ್ಲದಿದ್ದಲ್ಲಿ ಸಭೆ ಮುಂದೂಡಿ ಎಂದು ಗ್ರಾಮಸ್ಥರು ಆಗ್ರಹಿಸಿದ ಹಿನ್ನೆಲೆಯಲ್ಲಿ ಸಭೆ ಮುಂದೂಡಲಾಯಿತು.</p>.<p>ಈ ವೇಳೆ ಗುಡ್ಡೆಹೊಸೂರು- ರಸಲ್ ಪುರ ರಸ್ತೆ ಕಾಮಗಾರಿ ನಡೆಸುವಾಗ ರಸ್ತೆ ಬದಿ ವಿದ್ಯುತ್ ಕಂಬಗಳನ್ನು ತೆರವುಗೊಳಿಸಿಲ್ಲ. ಚರಂಡಿ ನಿರ್ಮಾಣ ಕೂಡ ಅವೈಜ್ಞಾನಿಕವಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.</p>.<p>ರಸ್ತೆ ಕಾಮಗಾರಿ ಪೂರ್ಣಗೊಂಡು ಮೂರು ವರ್ಷ ಕಳೆದಿದೆ. ಅಧಿಕಾರಿ ಬದಲಿಗೆ ಸಹಾಯಕರು ಸಭೆಯಲ್ಲಿ ಪಾಲ್ಗೊಂಡಲ್ಲಿ ಅವರಿಂದ ಸಮಸ್ಯೆ ನಿವಾರಣೆ ಸಾಧ್ಯವಿಲ್ಲ. ಆದ್ದರಿಂದ ಲೋಕೋಪಯೋಗಿ ಇಲಾಖೆ ಅಧಿಕಾರಿಯನ್ನು ಕಡ್ಡಾಯವಾಗಿ ಸಭೆಗೆ ಕರೆಸುವಂತೆ ಒತ್ತಾಯಿಸಿದರು.</p>.<p>ಸಹಾಯಕ ಎಂಜಿನಿಯರ್ ಅವರ ಸಹಾಯಕರಿಂದ ಗ್ರಾಮಸ್ಥರ ಪ್ರಶ್ನೆಗೆ ಸೂಕ್ತ ಉತ್ತರ ದೊರೆಯದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಸಭೆ ಮುಂದೂಡುವಂತೆ ಪಟ್ಟು ಹಿಡಿದರು.</p>.<p>ಅಧಿಕಾರಿಗಳ ಅನುಪಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮಸ್ಥರು ಕೂಡ ಸಭೆಯಲ್ಲಿ ಪಾಲ್ಗೊಳ್ಳಲು ಮುಂದಾಗುತ್ತಿಲ್ಲ. ಆದ್ದರಿಂದ ಅವರನ್ನು ಸಭೆಗೆ ಕರೆಸಿ ನಂತರ ಸಭೆ ಮುಂದುವರೆಸಲು ಗ್ರಾಮಸ್ಥರಾದ ಜಗ, ಶಶಿಕುಮಾರ್, ಸಂತೋಷ್, ಸಲಿ ಒತ್ತಾಯಿಸಿದರು.</p>.<p>ಸಭೆಯ ನೋಡಲ್ ಅಧಿಕಾರಿ ಬಿಇಒ ಕಚೇರಿಯ ಲೋಕೇಶ್, ‘ಸೋಮವಾರಪೇಟೆಯಲ್ಲಿ ರಾಜ್ಯಮಟ್ಟದ ಆಡಳಿತಾತ್ಮಕ ಸಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಹುತೇಕ ಅಧಿಕಾರಿಗಳು ಅಲ್ಲಿಗೆ ತೆರಳಿದ್ದಾರೆ. ಲೋಕೋಪಯೋಗಿ ಇಲಾಖೆ ಅಭಿಯಂತರರ ಸಹಾಯಕರು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದು ತಿಳಿಸಿದರು.</p>.<p>ಗ್ರಾಮಸಭೆಗಳಿಗೆ ತಾಲ್ಲೂಕು ಮಟ್ಟದ ಅಧಿಕಾರಿಗಳ ಹಾಜರಿಗೆ ಒತ್ತಾಯಿಸುವಂತಿಲ್ಲ. ಮುಂದೂಡಿದ ಸಭೆಗೂ ಅಧಿಕಾರಿಗಳು ಗೈರು ಹಾಜರಾದರೆ ಅಂತಹವರ ವಿರುದ್ಧ ಸಿಇಒಗೆ ದೂರು ಸಲ್ಲಿಸಬಹುದೇ ವಿನಾ ಯಾವುದೇ ರೀತಿಯ ಕ್ರಮಕೈಗೊಳ್ಳಲು ಗ್ರಾಪಂ ಆಡಳಿತ ಹಾಗೂ ಅಧಿಕಾರಿಗೆ ಅಧಿಕಾರವಿಲ್ಲ ಎಂದು<br /> ಗ್ರಾಪಂ ಪಿಡಿಒ ಸುಮೇಶ್ ಸಭೆಯ ಗಮನಕ್ಕೆ ತಂದರು. ಈ ಹಿನ್ನಲೆಯಲ್ಲಿ ಗ್ರಾಮಸಭೆ ಮುಂದೂಡಲಾಯಿತು.</p>.<p>ಗ್ರಾಪಂ ಉಪಾಧ್ಯಕ್ಷ ಪಟ್ಟುಮಾದಪ್ಪ, ಪಿಡಿಒ ಸುಮೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>