ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಮವಾರಪೇಟೆ: ಎಸಿಬಿ ಬಲೆಗೆ ಗೃಹರಕ್ಷಕ ದಳದ ಘಟಕಾಧಿಕಾರಿ

Last Updated 13 ಜನವರಿ 2021, 14:58 IST
ಅಕ್ಷರ ಗಾತ್ರ

ಸೋಮವಾರಪೇಟೆ: ಅಧೀನ ಸಿಬ್ಬಂದಿಯಿಂದಲೇ ₹ 1 ಸಾವಿರ ಲಂಚ ಪಡೆಯುತ್ತಿದ್ದ ಗೃಹರಕ್ಷಕ ದಳದ ಘಟಕಾಧಿಕಾರಿಯನ್ನು ಎಸಿಬಿ ಬುಧವಾರ ಬಂಧಿಸಿದೆ.

ಘಟಕಾಧಿಕಾರಿ ಮಾಟ್ನಳ್ಳಿ ಗ್ರಾಮದ ರುದ್ರಪ್ಪ ಬಂಧಿತ ಆರೋಪಿ.

ರುದ್ರಪ್ಪ ಅಧೀನದಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಪ್ರತಿ ತಿಂಗಳು ತಲಾ ₹ 1 ಸಾವಿರ ಲಂಚ ನೀಡಬೇಕಿತ್ತು. ಲಂಚ ನೀಡದಿದ್ದರೆ ಬೇರೆಡೆ ಎತ್ತಂಗಡಿ ಮಾಡುವ ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ. ಇದರಿಂದ ಬೇಸತ್ತ ಸಿಬ್ಬಂದಿ ಸುನಿಲ್ ಎಸಿಬಿಗೆ ದೂರು ನೀಡಿದ್ದರು.

ಖಾಸಗಿ ಬಸ್ ನಿಲ್ದಾಣದ ರಾಘವೇಂದ್ರ ಕ್ಯಾಂಟಿನ್ ಬಳಿ, ಲಂಚ ಪಡೆಯುತ್ತಿದ್ದ ಸಂದರ್ಭದಲ್ಲೇ ಅಧಿಕಾರಿಗಳು ರುದ್ರಪ್ಪನನ್ನು ವಶಕ್ಕೆ ಪಡೆದಿದ್ದಾರೆ. ಅರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT