ರುದ್ರಪ್ಪ ಅಧೀನದಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಪ್ರತಿ ತಿಂಗಳು ತಲಾ ₹ 1 ಸಾವಿರ ಲಂಚ ನೀಡಬೇಕಿತ್ತು. ಲಂಚ ನೀಡದಿದ್ದರೆ ಬೇರೆಡೆ ಎತ್ತಂಗಡಿ ಮಾಡುವ ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ. ಇದರಿಂದ ಬೇಸತ್ತ ಸಿಬ್ಬಂದಿ ಸುನಿಲ್ ಎಸಿಬಿಗೆ ದೂರು ನೀಡಿದ್ದರು.
ಖಾಸಗಿ ಬಸ್ ನಿಲ್ದಾಣದ ರಾಘವೇಂದ್ರ ಕ್ಯಾಂಟಿನ್ ಬಳಿ, ಲಂಚ ಪಡೆಯುತ್ತಿದ್ದ ಸಂದರ್ಭದಲ್ಲೇ ಅಧಿಕಾರಿಗಳು ರುದ್ರಪ್ಪನನ್ನು ವಶಕ್ಕೆ ಪಡೆದಿದ್ದಾರೆ. ಅರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.