<p><strong>ಮಡಿಕೇರಿ: </strong>ಆರ್ಟಿಸಿಯಲ್ಲಿ ಹೆಸರು ಬದಲಾವಣೆ ಮಾಡಲು ಹಣಕ್ಕೆ ಬೇಡಿಕೆಯಿಟ್ಟು, ಹಣ ಸ್ವೀಕರಿಸುತ್ತಿದ್ದ ಮರಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಸಹಾಯಕ ಎಚ್.ಎಸ್.ಮಣಿ ಎಸಿಬಿ ಬಲೆಗೆ ಬಿದ್ದಿದ್ದಾನೆ.</p>.<p>ಗೋವಿಂದರಾಜು ಎಂಬುವರು ಮೃತಪಟ್ಟಿದ್ದರಿಂದ ಅವರ ಹೆಸರನ್ನು ಆರ್.ಟಿ.ಸಿಯಿಂದ ತೆಗೆದು, ಅವರ ಪತ್ನಿ ಹೆಸರನ್ನು ಆರ್ಟಿಸಿಗೆ ಸೇರಿಸಿಕೊಡುವಂತೆ ಪಿರ್ಯಾದುದಾರರೊಬ್ಬರು ಸೂಕ್ತ ದಾಖಲಾತಿ ಜೊತೆಗೆ ಮಡಿಕೇರಿ ತಾಲ್ಲೂಕು ಕಚೇರಿಗೆ 2 ತಿಂಗಳ ಹಿಂದೆ ಅರ್ಜಿ ಸಲ್ಲಿಸಿದ್ದರು.</p>.<p>ಈ ಅರ್ಜಿಯು ಮರಗೋಡು ಗ್ರಾಮದ ಗ್ರಾಮ ಲೆಕ್ಕಿಗರ ಕಚೇರಿಗೆ ಬಂದಿತ್ತು. ಜ.13ರಂದು ಅರ್ಜಿ ಕುರಿತು ವಿಚಾರಿಸಲು ತೆರಳಿದಾಗ, ಗ್ರಾಮ ಸಹಾಯಕ ಎಚ್.ಎಸ್. ಮಣಿ ₹ 3 ಸಾವಿರ ಹಣ ಕೊಟ್ಟರೆ, ಕೆಲಸ ಮಾಡಿಕೊಡುವುದಾಗಿ ತಿಳಿಸಿದ್ದರು. ಮತ್ತೆ ಮೊಬೈಲ್ ಮೂಲಕ ಕರೆ ಮಾಡಿ ₹ 2,500 ಹಣ ನೀಡಿದರೆ, ಫೈಲ್ ಅನ್ನು ಮುಂದಿನ ಹಂತಕ್ಕೆ ಕಳುಹಿಸುವುದಾಗಿಯೂ ಹೇಳಿದ್ದರು. ಈ ಸಂಬಂಧ ಅಗತ್ಯ ದಾಖಲೆಗಳ ಜೊತೆಗೆ, ದೂರುದಾರರು ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದರು.</p>.<p>ಗುರುವಾರ ನಡೆದ ಎ.ಸಿ.ಬಿ ಕಾರ್ಯಾಚರಣೆಯಲ್ಲಿ ಲಂಚದ ಹಣದ ಸಮೇತ ಆರೋಪಿಯನ್ನು ಬಂಧಿಸಲಾಗಿದೆ. ಲಂಚದ ಹಣ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ: </strong>ಆರ್ಟಿಸಿಯಲ್ಲಿ ಹೆಸರು ಬದಲಾವಣೆ ಮಾಡಲು ಹಣಕ್ಕೆ ಬೇಡಿಕೆಯಿಟ್ಟು, ಹಣ ಸ್ವೀಕರಿಸುತ್ತಿದ್ದ ಮರಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಸಹಾಯಕ ಎಚ್.ಎಸ್.ಮಣಿ ಎಸಿಬಿ ಬಲೆಗೆ ಬಿದ್ದಿದ್ದಾನೆ.</p>.<p>ಗೋವಿಂದರಾಜು ಎಂಬುವರು ಮೃತಪಟ್ಟಿದ್ದರಿಂದ ಅವರ ಹೆಸರನ್ನು ಆರ್.ಟಿ.ಸಿಯಿಂದ ತೆಗೆದು, ಅವರ ಪತ್ನಿ ಹೆಸರನ್ನು ಆರ್ಟಿಸಿಗೆ ಸೇರಿಸಿಕೊಡುವಂತೆ ಪಿರ್ಯಾದುದಾರರೊಬ್ಬರು ಸೂಕ್ತ ದಾಖಲಾತಿ ಜೊತೆಗೆ ಮಡಿಕೇರಿ ತಾಲ್ಲೂಕು ಕಚೇರಿಗೆ 2 ತಿಂಗಳ ಹಿಂದೆ ಅರ್ಜಿ ಸಲ್ಲಿಸಿದ್ದರು.</p>.<p>ಈ ಅರ್ಜಿಯು ಮರಗೋಡು ಗ್ರಾಮದ ಗ್ರಾಮ ಲೆಕ್ಕಿಗರ ಕಚೇರಿಗೆ ಬಂದಿತ್ತು. ಜ.13ರಂದು ಅರ್ಜಿ ಕುರಿತು ವಿಚಾರಿಸಲು ತೆರಳಿದಾಗ, ಗ್ರಾಮ ಸಹಾಯಕ ಎಚ್.ಎಸ್. ಮಣಿ ₹ 3 ಸಾವಿರ ಹಣ ಕೊಟ್ಟರೆ, ಕೆಲಸ ಮಾಡಿಕೊಡುವುದಾಗಿ ತಿಳಿಸಿದ್ದರು. ಮತ್ತೆ ಮೊಬೈಲ್ ಮೂಲಕ ಕರೆ ಮಾಡಿ ₹ 2,500 ಹಣ ನೀಡಿದರೆ, ಫೈಲ್ ಅನ್ನು ಮುಂದಿನ ಹಂತಕ್ಕೆ ಕಳುಹಿಸುವುದಾಗಿಯೂ ಹೇಳಿದ್ದರು. ಈ ಸಂಬಂಧ ಅಗತ್ಯ ದಾಖಲೆಗಳ ಜೊತೆಗೆ, ದೂರುದಾರರು ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದರು.</p>.<p>ಗುರುವಾರ ನಡೆದ ಎ.ಸಿ.ಬಿ ಕಾರ್ಯಾಚರಣೆಯಲ್ಲಿ ಲಂಚದ ಹಣದ ಸಮೇತ ಆರೋಪಿಯನ್ನು ಬಂಧಿಸಲಾಗಿದೆ. ಲಂಚದ ಹಣ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>