ಚಿಕ್ಕತ್ತೂರು ಗ್ರಾಮದ ಮಹಾದೇವ್ ಎಂಬುವವರ ಪುತ್ರ ಶಿವಶಂಕರ್ (22) ಮೃತಪಟ್ಟವರು. ಶಿವಶಂಕರ್ ತನ್ನ ಬೈಕ್ನಲ್ಲಿ ಮನೆಗೆ ತೆರಳುತ್ತಿರುವ ವೇಳೆ ಮುಂಭಾಗದಲ್ಲಿ ಚಲಿಸುತ್ತಿದ್ದ ಟ್ರ್ಯಾಕ್ಟರ್ಗೆ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದ ಪರಿಣಾಮ ತಲೆಯ ಭಾಗಕ್ಕೆ ಗಂಭೀರವಾದ ಗಾಯ ಉಂಟಾಗಿ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಗ್ರಾಮಾಂತರ ಸಂಚಾರ ಪೊಲೀಸ್ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದರು. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.