ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಡಿಕೇರಿ | ಅಪಘಾತ: ಬೈಕ್ ಸವಾರ ಸಾವು

Published 14 ಅಕ್ಟೋಬರ್ 2023, 5:24 IST
Last Updated 14 ಅಕ್ಟೋಬರ್ 2023, 5:24 IST
ಅಕ್ಷರ ಗಾತ್ರ

ಮಡಿಕೇರಿ: ಇಲ್ಲಿನ ಮಡಿಕೇರಿ– ಸುಂಟಿಕೊಪ್ಪ ಹೆದ್ದಾರಿಯಲ್ಲಿ ಶುಕ್ರವಾರ ಕ್ಯಾಂಟರ್‌, ಕಾರು ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೈಸೂರು ಜಿಲ್ಲೆಯ ಕೆ.ಆರ್.ನಗರದ ಭೈರವ (30) ಎಂಬುವವರು ಮೃತಪಟ್ಟಿದ್ದಾರೆ.

ಇವರು ಮಡಿಕೇರಿಯಿಂದ ಕೆ.ಆರ್.ನಗರದ ಕಡೆಗೆ ಪಲ್ಸರ್ ಬೈಕ್‌ನಲ್ಲಿ ತೆರಳುತ್ತಿದ್ದಾಗ ಮುಂದೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಪಕ್ಕಕ್ಕೆ ಬಿದ್ದಿದ್ದಾರೆ. ಆಗ ಎದುರಿನಿಂದ ಬರುತ್ತಿದ್ದ ಕ್ಯಾಂಟರ್‌ನ ಹಿಂದಿನ ಚಕ್ರ ಇವರ ಮೇಲೆ ಹರಿದಿದೆ. ಇದರಿಂದ ತೀವ್ರವಾಗಿ ಗಾಯಗೊಂಡ ಭೈರವ ಅವರು ಸ್ಥಳದಲ್ಲೇ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.

ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT