ಮಡಿಕೇರಿ: ಇಲ್ಲಿನ ಮಡಿಕೇರಿ– ಸುಂಟಿಕೊಪ್ಪ ಹೆದ್ದಾರಿಯಲ್ಲಿ ಶುಕ್ರವಾರ ಕ್ಯಾಂಟರ್, ಕಾರು ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೈಸೂರು ಜಿಲ್ಲೆಯ ಕೆ.ಆರ್.ನಗರದ ಭೈರವ (30) ಎಂಬುವವರು ಮೃತಪಟ್ಟಿದ್ದಾರೆ.
ಇವರು ಮಡಿಕೇರಿಯಿಂದ ಕೆ.ಆರ್.ನಗರದ ಕಡೆಗೆ ಪಲ್ಸರ್ ಬೈಕ್ನಲ್ಲಿ ತೆರಳುತ್ತಿದ್ದಾಗ ಮುಂದೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಪಕ್ಕಕ್ಕೆ ಬಿದ್ದಿದ್ದಾರೆ. ಆಗ ಎದುರಿನಿಂದ ಬರುತ್ತಿದ್ದ ಕ್ಯಾಂಟರ್ನ ಹಿಂದಿನ ಚಕ್ರ ಇವರ ಮೇಲೆ ಹರಿದಿದೆ. ಇದರಿಂದ ತೀವ್ರವಾಗಿ ಗಾಯಗೊಂಡ ಭೈರವ ಅವರು ಸ್ಥಳದಲ್ಲೇ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.