ಅಂತರರಾಷ್ಟ್ರೀಯ ಶಾವೊಲಿನ್ ಕುಂಗ್-ಫು ಕರಾಟೆ ಶಾಲೆಯಿಂದ ನಡೆಸಲಾದ ಕರಾಟೆ ಪರೀಕ್ಷೆಯಲ್ಲಿ 47 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಶಾಲೆಯ ಮುಖ್ಯ ಶಿಕ್ಷಕ ಕುದುಪಜೆ ಕವನ್ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಪದಕ ಮತ್ತು ವಿವಿಧ ರೀತಿಯ ಕರಾಟೆ ಬೆಲ್ಟ್ಗಳನ್ನು ವಿತರಿಸಿದರು. ಕರಾಟೆ ಶಾಲೆಯ ಭಾರತದ ಮುಖ್ಯ ತರಬೇತುದಾರ ದೇವರಾಜ್, ಕರ್ನಾಟಕ ತರಬೇತುದಾರ ಹಾಗೂ ರಾಜರಾಜೇಶ್ವರಿ ಪ್ರೌಢಶಾಲೆಯ ಕರಾಟೆ ಶಿಕ್ಷಕ ನಾಟೋಳಂಡ ನಂಜುಂಡ, ಜಿಲ್ಲಾ ತರಬೇತುದಾರರಾದ ವೇಣು ಮತ್ತು ಸತೀಶ್ ಹಾಜರಿದ್ದರು.