<p><strong>ಮಡಿಕೇರಿ</strong>: ಕೊಡಗು ಜಿಲ್ಲೆಯ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿರುವ ಪೊನ್ನಂಪೇಟೆ ತಾಲ್ಲೂಕಿನ ಕೆ.ಬಾಡಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡಿಕಲ್ಲು ಅತ್ತೂರು ಕೊಲ್ಲಿ ಹಾಡಿಗೆ ಬಂದು ಪ್ರತಿಭಟನೆ ಆರಂಭಿಸಿರುವ ಜೇನುಕುರುಬ ಪಂಗಡಕ್ಕೆ ಸೇರಿದ 52 ಕುಟುಂಬಗಳ ಮನವೊಲಿಕೆ ಕಾರ್ಯ ವಿಫಲಗೊಂಡಿದೆ.</p>.<p>‘ಹಲವು ವರ್ಷಗಳ ಹಿಂದೆ ಈ ಪ್ರದೇಶದಿಂದ ಬಲವಂತವಾಗಿ ಒಕ್ಕಲೆಬ್ಬಿಸಲಾಗಿತ್ತು’ ಎಂದು ಹೇಳಿರುವ ನಾಗರಹೊಳೆ ಆದಿವಾಸಿ ಜಮ್ಮಾಪಾಳೆ ಹಕ್ಕು ಸ್ಥಾಪನಾ ಸಮಿತಿಯ ಕಾರ್ಯದರ್ಶಿ ಶಿವು, ‘ಅರಣ್ಯ ಹಕ್ಕು ಕಾಯ್ದೆ ಪ್ರಕಾರ ವೈಯಕ್ತಿಕ ಹಕ್ಕು ಹಾಗೂ ಸಮುದಾಯ ಹಕ್ಕುಗಳಿಗಾಗಿ ಒತ್ತಾಯಿಸಿ ನಮ್ಮ ಮೂಲಸ್ಥಾನಕ್ಕೆ ಬಂದಿದ್ದೇವೆ. ಇಲ್ಲಿ ನಾವು 3 ಗುಡಿಸಲುಗಳನ್ನು ನಿರ್ಮಿಸಿದ್ದೇವೆ. ಇದಕ್ಕೆ ಅರಣ್ಯ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದರೂ ನಾವು ಹಿಂದೇಟು ಹಾಕಿಲ್ಲ’ ಎಂದರು.</p>.<p>ಸ್ಥಳಕ್ಕೆ ಅರಣ್ಯ ಇಲಾಖೆಯ ನೂರಾರು ಸಿಬ್ಬಂದಿ ಹಾಗೂ ಅಧಿಕಾರಿಗಳು ಭೇಟಿ ನೀಡಿ ಮನವೊಲಿಕೆಗೆ ಪ್ರಯತ್ನಪಟ್ಟರಾದರೂ ಆದಿವಾಸಿಗಳು ಒಪ್ಪಲಿಲ್ಲ.</p>.<p>ಮಂಗಳವಾರದ ಪ್ರತಿಭಟನೆಯಲ್ಲಿ ಭಾಗಿಯಾಗಿ ಬೆಂಬಲ ಸೂಚಿಸಿದ ನಟ ಚೇತನ್, ‘ಇಡೀ ವ್ಯವಸ್ಥೆಯೇ ಆದಿವಾಸಿಗಳ ವಿರುದ್ಧವಿದೆ. ಆಳುವ ವ್ಯವಸ್ಥೆಯು ಹಣ, ರಾಜಕೀಯ, ಭೂಮಾಲೀಕರ ಪರವಾಗಿಯೇ ಇದೆ’ ಎಂದು ಹರಿಹಾಯ್ದರು.</p>.<p>‘ಸಾವಿರಾರು ವರ್ಷಗಳ ಕಾಲ ಕಾಡಿನಲ್ಲೇ ನೆಲೆಸಿರುವ ಆದಿವಾಸಿಗಳೇ ನಿಜವಾದ ಪರಿಸರವಾದಿಗಳು. ಆದರೆ, ಅವರಿಗೆ ಜಾಗ ಕೊಡದೇ ಕಾಫಿ ಎಸ್ಟೇಟ್ ಮಾಲೀಕರಿಗೆ, ಶ್ರೀಮಂತರಿಗೆ ಜಾಗ ಕೊಡುತ್ತಿದ್ದಾರೆ. ಈ ಅನ್ಯಾಯದ ವ್ಯವಸ್ಥೆಯನ್ನು ವಿರೋಧಿಸಬೇಕು’ ಎಂದರು.</p>.<p>ಈ ಕುರಿತು ಪ್ರತಿಕ್ರಿಯೆ ಪಡೆಯಲು ನಾಗರಹೊಳೆ ಹುಲಿ ಯೋಜನೆ ನಿರ್ದೇಶಕಿ ಪಿ.ಎ.ಸೀಮಾ ಹಾಗೂ ಎಸಿಎಫ್ ಜೆ.ಅನನ್ಯಕುಮಾರ್ ಅವರು ಮೊಬೈಲ್ಫೋನ್ ಸಂಪರ್ಕಕ್ಕೆ ಸಿಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ಕೊಡಗು ಜಿಲ್ಲೆಯ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿರುವ ಪೊನ್ನಂಪೇಟೆ ತಾಲ್ಲೂಕಿನ ಕೆ.ಬಾಡಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡಿಕಲ್ಲು ಅತ್ತೂರು ಕೊಲ್ಲಿ ಹಾಡಿಗೆ ಬಂದು ಪ್ರತಿಭಟನೆ ಆರಂಭಿಸಿರುವ ಜೇನುಕುರುಬ ಪಂಗಡಕ್ಕೆ ಸೇರಿದ 52 ಕುಟುಂಬಗಳ ಮನವೊಲಿಕೆ ಕಾರ್ಯ ವಿಫಲಗೊಂಡಿದೆ.</p>.<p>‘ಹಲವು ವರ್ಷಗಳ ಹಿಂದೆ ಈ ಪ್ರದೇಶದಿಂದ ಬಲವಂತವಾಗಿ ಒಕ್ಕಲೆಬ್ಬಿಸಲಾಗಿತ್ತು’ ಎಂದು ಹೇಳಿರುವ ನಾಗರಹೊಳೆ ಆದಿವಾಸಿ ಜಮ್ಮಾಪಾಳೆ ಹಕ್ಕು ಸ್ಥಾಪನಾ ಸಮಿತಿಯ ಕಾರ್ಯದರ್ಶಿ ಶಿವು, ‘ಅರಣ್ಯ ಹಕ್ಕು ಕಾಯ್ದೆ ಪ್ರಕಾರ ವೈಯಕ್ತಿಕ ಹಕ್ಕು ಹಾಗೂ ಸಮುದಾಯ ಹಕ್ಕುಗಳಿಗಾಗಿ ಒತ್ತಾಯಿಸಿ ನಮ್ಮ ಮೂಲಸ್ಥಾನಕ್ಕೆ ಬಂದಿದ್ದೇವೆ. ಇಲ್ಲಿ ನಾವು 3 ಗುಡಿಸಲುಗಳನ್ನು ನಿರ್ಮಿಸಿದ್ದೇವೆ. ಇದಕ್ಕೆ ಅರಣ್ಯ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದರೂ ನಾವು ಹಿಂದೇಟು ಹಾಕಿಲ್ಲ’ ಎಂದರು.</p>.<p>ಸ್ಥಳಕ್ಕೆ ಅರಣ್ಯ ಇಲಾಖೆಯ ನೂರಾರು ಸಿಬ್ಬಂದಿ ಹಾಗೂ ಅಧಿಕಾರಿಗಳು ಭೇಟಿ ನೀಡಿ ಮನವೊಲಿಕೆಗೆ ಪ್ರಯತ್ನಪಟ್ಟರಾದರೂ ಆದಿವಾಸಿಗಳು ಒಪ್ಪಲಿಲ್ಲ.</p>.<p>ಮಂಗಳವಾರದ ಪ್ರತಿಭಟನೆಯಲ್ಲಿ ಭಾಗಿಯಾಗಿ ಬೆಂಬಲ ಸೂಚಿಸಿದ ನಟ ಚೇತನ್, ‘ಇಡೀ ವ್ಯವಸ್ಥೆಯೇ ಆದಿವಾಸಿಗಳ ವಿರುದ್ಧವಿದೆ. ಆಳುವ ವ್ಯವಸ್ಥೆಯು ಹಣ, ರಾಜಕೀಯ, ಭೂಮಾಲೀಕರ ಪರವಾಗಿಯೇ ಇದೆ’ ಎಂದು ಹರಿಹಾಯ್ದರು.</p>.<p>‘ಸಾವಿರಾರು ವರ್ಷಗಳ ಕಾಲ ಕಾಡಿನಲ್ಲೇ ನೆಲೆಸಿರುವ ಆದಿವಾಸಿಗಳೇ ನಿಜವಾದ ಪರಿಸರವಾದಿಗಳು. ಆದರೆ, ಅವರಿಗೆ ಜಾಗ ಕೊಡದೇ ಕಾಫಿ ಎಸ್ಟೇಟ್ ಮಾಲೀಕರಿಗೆ, ಶ್ರೀಮಂತರಿಗೆ ಜಾಗ ಕೊಡುತ್ತಿದ್ದಾರೆ. ಈ ಅನ್ಯಾಯದ ವ್ಯವಸ್ಥೆಯನ್ನು ವಿರೋಧಿಸಬೇಕು’ ಎಂದರು.</p>.<p>ಈ ಕುರಿತು ಪ್ರತಿಕ್ರಿಯೆ ಪಡೆಯಲು ನಾಗರಹೊಳೆ ಹುಲಿ ಯೋಜನೆ ನಿರ್ದೇಶಕಿ ಪಿ.ಎ.ಸೀಮಾ ಹಾಗೂ ಎಸಿಎಫ್ ಜೆ.ಅನನ್ಯಕುಮಾರ್ ಅವರು ಮೊಬೈಲ್ಫೋನ್ ಸಂಪರ್ಕಕ್ಕೆ ಸಿಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>