ಕಾಲೇಜಿನ ಪ್ರಾಂಶುಪಾಲ ಎಂ.ಆರ್.ನಿರಂಜನ್ ಮಾತನಾಡಿ, ‘ಕೊಡಗು ಪ್ರತ್ಯೇಕ ವಿಶ್ವವಿದ್ಯಾನಿಲಯವಾಗಿದೆ. ಕೊಡಗು ವಿಶ್ವ ವಿದ್ಯಾನಿಲಯದಡಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕವು ಸಹ ಕಾರ್ಯನಿರ್ವಹಿಸುತ್ತದೆ. ವಿದ್ಯಾರ್ಥಿಗಳು ಎಂದಿನಂತೆ ತಮ್ಮ ಕಾಲೇಜಿನ ಎನ್ಎಸ್ಎಸ್ ಘಟಕದಲ್ಲಿ ತೊಡಗಿಸಿಕೊಳ್ಳುವ ಮೂಲಕ ಶಿಬಿರಾರ್ಥಿಗಳು ಕೊಡಗು ವಿಶ್ವವಿದ್ಯಾನಿಲಯದ ಗಮನ ಸೆಳೆಯಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಜಗದೀಶ್ ಬಾಬು ಮಾತನಾಡಿದರು. ಕಾರ್ಯಕ್ರಮದ ಕುರಿತು ಕಾಲೇಜಿನ ಎನ್ಎಸ್ಎಸ್ ಯೋಜನಾಧಿಕಾರಿ ಕೆ.ಎಚ್.ಯೋಗೇಂದ್ರ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ವೇಳೆ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ಭಾಗವಹಿಸಿದ್ದರು.