ಗ್ರಾಮದ ವಾಸಿ ಪೊನ್ನಮ್ಮ (60) ಮೇ 15 ರಂದು ತೀವ್ರ ಉಸಿರಾಟದ ತೊಂದರೆಯಿಂದ ಮಡಿಕೇರಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಗುಣಮುಖರಾದ್ದರಿಂದ ಭಾನುವಾರ ಮಧ್ಯಾಹ್ನ ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಗಿತ್ತು. ಆದರೆ, ಆಸ್ಪತ್ರೆಯಿಂದ ಪೊನ್ನಮ್ಮ ಅವರ ಮನೆಗೆ ಮಾಹಿತಿ ನೀಡಿರಲಿಲ್ಲ. ಆಂಬುಲೆನ್ಸ್ನಲ್ಲಿ ಕರೆತಂದ ಚಾಲಕ ಸಂಜೆ 5 ಗಂಟೆಯ ಸುಮಾರಿಗೆ ಐಗೂರುಜಂಕ್ಷನ್ನಲ್ಲಿ ಬಿಟ್ಟು ತೆರಳಿದ್ದಾನೆ. ಅಲ್ಲಿಂದ ವೃದ್ಧೆಯ ಮನೆ 2 ಕಿ.ಮೀ ದೂರವಿದ್ದು, ಕಾಲ್ನಡಿಗೆಯಲ್ಲಿ
ತೆರಳಿದ್ದಾರೆ.