<p><strong>ಮಡಿಕೇರಿ: </strong>ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕಾಗಿದೆ. ಜಿಲ್ಲೆಯಾದ್ಯಂತ ಗಾಳಿ ಸಹಿತ ಮಳೆ ಅಬ್ಬರಿಸುತ್ತಿದೆ. ಮಡಿಕೇರಿಯಲ್ಲಿ, ಶನಿವಾರ ತಡರಾತ್ರಿಯಿಂದಲೂ ಭಾರಿ ಮಳೆ ಸುರಿಯುತ್ತಿದೆ. ಥಂಡಿ ಗಾಳಿ ಜನರನ್ನು ಹೈರಾಣಾಗಿಸಿದೆ.</p>.<p>ಭಾಗಮಂಡಲ, ತಲಕಾವೇರಿ ಭಾಗದಲ್ಲೂ ಧಾರಾಕಾರ ಮಳೆಯಾಗುತ್ತಿದೆ. ತ್ರಿವೇಣಿ ಸಂಗಮದಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಹಳ್ಳ, ತೋಡುಗಳಲ್ಲಿ ನೀರು ಹರಿಯಲು ಆರಂಭಿಸಿದೆ.</p>.<p class="Briefhead"><strong>ತುಂಬಿದ ಹರಿದ ಹಳ್ಳ– ಕೊಳ್ಳ<br />ಸೋಮವಾರಪೇಟೆ: </strong>ತಾಲ್ಲೂಕಿನಾದ್ಯಂತ ಕಳೆದ ಎರಡು ದಿನಗಳಿಂದ ಭಾರಿ ಗಾಳಿಯೊಂದಿಗೆ ಮಳೆ ಸುರಿಯುತ್ತಿದ್ದು, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ.</p>.<p>ಶಾಂತಳ್ಳಿ ಹೋಬಳಿಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತ್ಯವ್ಯಸ್ತವಾಗಿದೆ. ಮಳೆಯೊಂದಿಗೆ ಜೋರಾಗಿ ಗಾಳಿ ಬೀಸುತ್ತಿರುವುದರಿಂದ ಮಡಿಕೇರಿ- ಹಾಸನ ರಾಜ್ಯ ಹೆದ್ಧಾರಿಯ ಗುಡುಗಳಲೆ ಜಾತ್ರಾ ಮೈದಾನದ ಬಳಿ ಮರದ ಬೃಹತ್ ಕೊಂಬೆಯೊಂದು ರಸ್ತೆಗೆ ಅಡ್ಡವಾಗಿ ಬಿದ್ದಿದೆ. ಲಾಕ್ಡೌನ್ ಇರುವುದರಿಂದ ವಾಹನ ಸಂಚಾರ ಕಡಿಮೆ ಇದ್ದು, ಯಾವುದೇ ಅನಾಹುತವಾಗಿಲ್ಲ.</p>.<p>ಶನಿವಾರಸಂತೆಯ ಸೆಸ್ಕ್ ಇಲಾಖೆಯ ಸಿಬ್ಬಂದಿ ಗಿರೀಶ್, ಸಂದೀಪ್, ಅಭಿಷೇಕ್ ಹಾಗೂ ಸಿದ್ದು ಸ್ಥಳಕ್ಕೆ ಬಂದು ಮರವನ್ನು ಕತ್ತರಿಸಿ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.</p>.<p>ಸಮೀಪದ ಬೀಟಿಕಟ್ಟೆ ಬಳಿ ಮರ ರಸ್ತೆಗೆ ಬಿದ್ದಿದೆ. ಮರ ತೆರವುಗೊಳಿಸದಿದ್ದರಿಂದ ವಾಹನಗಳು ರಸ್ತೆಯ ಬದಿಯಿಂದ ಸಾಗಿದವು.</p>.<p>ಮಳೆ ಹೆಚ್ಚಾಗುತ್ತಿರುವಂತೆಯೇ ಕೃಷಿ ಚಟುವಟಿಕೆಗಳು ಗರಿಗೆದರಿದ್ದು, ಹೆಚ್ಚಿನ ರೈತರು ತೋಟಗಳಲ್ಲಿ ಬೆಳಿಗ್ಗೆಯಿಂದಲೇ ಕೆಲಸ ಮಾಡುತ್ತಿರುವುದು ಕಂಡು ಬಂದಿತು.</p>.<p class="Briefhead"><strong>ವರುಣನ ಆರ್ಭಟ<br />ಸುಂಟಿಕೊಪ್ಪ: </strong>ಸುಂಟಿಕೊಪ್ಪ ಸುತ್ತಮುತ್ತ ಭಾನುವಾರ ಮಳೆ ಮುಂದುವರಿದಿದೆ.</p>.<p>ಶನಿವಾರ ತಡರಾತ್ರಿಯಿಂದ ಆರಂಭವಾದ ಮಳೆ ಎಡೆಬಿಡದೇ ಬೆಳಿಗ್ಗೆ 9 ಗಂಟೆಯವರೆಗೆ ಸುರಿದಿದೆ. ನಂತರ ಆಗಾಗ್ಗೆ ಬಿಡುವು ನೀಡುತ್ತಾ ಸುರಿಯುತ್ತಲೇ ಇದೆ.</p>.<p>ಮಳೆ ಆರಂಭವಾಗುತ್ತಿದ್ದಂತೆ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಸುಂಟಿಕೊಪ್ಪದಲ್ಲಿ ಚಳಿಯ ವಾತಾವರಣ ಸೃಷ್ಟಿಯಾಗಿದ್ದು, ಜನ ಸ್ವೇಟರ್, ಟೋಪಿ ಧರಿಸಿ ಓಡಾಡುತ್ತಿರುವುದು ಕಂಡುಬಂತು.</p>.<p>ಭಾನುವಾರವೂ ಗಾಳಿಯೂ ತುಸು ಹೆಚ್ಚಾಗಿದ್ದರಿಂದ ವ್ಯಾಪ್ತಿಯ ತೋಟಗಳಲ್ಲಿ ಅಲ್ಲಲ್ಲಿ ಮರದ ಕೊಂಬೆಗಳು ಬಿದ್ದು ವಿದ್ಯುತ್ ವ್ಯತ್ಯಯ ಉಂಟಾಯಿತು.</p>.<p>ಕೊಡಗರಹಳ್ಳಿ, ಹರದೂರು, ನಾಕೂರು, ಅಂದಗೋವೆ, ಹೋರೂರು, ಹೆರೂರು, ಮತ್ತಿಕಾಡು, ಭೂತನಕಾಡು ಸೇರಿದಂತೆ ಇತರೆಡೆ ಮಳೆಯಾಗಿದೆ.</p>.<p class="Briefhead"><strong>ಬಿರುಸಿನ ಮಳೆ<br />ವಿರಾಜಪೇಟೆ: </strong>ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಮಳೆ ಬಿರುಸುಗೊಂಡಿದೆ.</p>.<p>ಶನಿವಾರ ದಿನವಿಡೀ ತುಂತುರು ಮಳೆಯಾದರೆ, ಕತ್ತಲಾಗುತ್ತಿದ್ದಂತೆ ಧಾರಾಕಾರವಾಗಿ ಸುರಿಯಲು ಆರಂಭಿಸಿತು. ರಾತ್ರಿ ಒಂದೇ ಸಮನೆ ನಿರಂತರವಾಗಿ ಸುರಿದ ಮಳೆಯು ಭಾನುವಾರ ಬೆಳಿಗ್ಗೆ ಕೊಂಚ ಇಳಿಮುಖಗೊಂಡಿದೆ. ಆಗಾಗ ಬಿಡುವು ನೀಡುತ್ತಿದ್ದರೂ ತುಂತುರು ಮಳೆ ಆಗುತ್ತಲೇ ಇದೆ.</p>.<p>ಪಟ್ಟಣ ಪ್ರದೇಶವಲ್ಲದೆ ಸಮೀಪದ ಆರ್ಜಿ, ಬೇಟೋಳಿ, ರಾಮನಗರ, ಹೆಗ್ಗಳ, ಮಾಕುಟ್ಟ, ಬಿಟ್ಟಂಗಾಲ, ಬಾಳುಗೋಡು, ಕಂಡಂಗಾಲ, ಕೆದಮುಳ್ಳೂರು, ಕದನೂರು, ಕಾಕೋಟುಪರಂಬು, ಚೆಂಬೆಬೆಳ್ಳೂರು ಸೇರಿದಂತೆ ಹಲವು ಗ್ರಾಮಗಳ ವ್ಯಾಪ್ತಿಯಲ್ಲಿ ಧಾರಾಕಾರ ಮಳೆ ಸುರಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ: </strong>ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕಾಗಿದೆ. ಜಿಲ್ಲೆಯಾದ್ಯಂತ ಗಾಳಿ ಸಹಿತ ಮಳೆ ಅಬ್ಬರಿಸುತ್ತಿದೆ. ಮಡಿಕೇರಿಯಲ್ಲಿ, ಶನಿವಾರ ತಡರಾತ್ರಿಯಿಂದಲೂ ಭಾರಿ ಮಳೆ ಸುರಿಯುತ್ತಿದೆ. ಥಂಡಿ ಗಾಳಿ ಜನರನ್ನು ಹೈರಾಣಾಗಿಸಿದೆ.</p>.<p>ಭಾಗಮಂಡಲ, ತಲಕಾವೇರಿ ಭಾಗದಲ್ಲೂ ಧಾರಾಕಾರ ಮಳೆಯಾಗುತ್ತಿದೆ. ತ್ರಿವೇಣಿ ಸಂಗಮದಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಹಳ್ಳ, ತೋಡುಗಳಲ್ಲಿ ನೀರು ಹರಿಯಲು ಆರಂಭಿಸಿದೆ.</p>.<p class="Briefhead"><strong>ತುಂಬಿದ ಹರಿದ ಹಳ್ಳ– ಕೊಳ್ಳ<br />ಸೋಮವಾರಪೇಟೆ: </strong>ತಾಲ್ಲೂಕಿನಾದ್ಯಂತ ಕಳೆದ ಎರಡು ದಿನಗಳಿಂದ ಭಾರಿ ಗಾಳಿಯೊಂದಿಗೆ ಮಳೆ ಸುರಿಯುತ್ತಿದ್ದು, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ.</p>.<p>ಶಾಂತಳ್ಳಿ ಹೋಬಳಿಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತ್ಯವ್ಯಸ್ತವಾಗಿದೆ. ಮಳೆಯೊಂದಿಗೆ ಜೋರಾಗಿ ಗಾಳಿ ಬೀಸುತ್ತಿರುವುದರಿಂದ ಮಡಿಕೇರಿ- ಹಾಸನ ರಾಜ್ಯ ಹೆದ್ಧಾರಿಯ ಗುಡುಗಳಲೆ ಜಾತ್ರಾ ಮೈದಾನದ ಬಳಿ ಮರದ ಬೃಹತ್ ಕೊಂಬೆಯೊಂದು ರಸ್ತೆಗೆ ಅಡ್ಡವಾಗಿ ಬಿದ್ದಿದೆ. ಲಾಕ್ಡೌನ್ ಇರುವುದರಿಂದ ವಾಹನ ಸಂಚಾರ ಕಡಿಮೆ ಇದ್ದು, ಯಾವುದೇ ಅನಾಹುತವಾಗಿಲ್ಲ.</p>.<p>ಶನಿವಾರಸಂತೆಯ ಸೆಸ್ಕ್ ಇಲಾಖೆಯ ಸಿಬ್ಬಂದಿ ಗಿರೀಶ್, ಸಂದೀಪ್, ಅಭಿಷೇಕ್ ಹಾಗೂ ಸಿದ್ದು ಸ್ಥಳಕ್ಕೆ ಬಂದು ಮರವನ್ನು ಕತ್ತರಿಸಿ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.</p>.<p>ಸಮೀಪದ ಬೀಟಿಕಟ್ಟೆ ಬಳಿ ಮರ ರಸ್ತೆಗೆ ಬಿದ್ದಿದೆ. ಮರ ತೆರವುಗೊಳಿಸದಿದ್ದರಿಂದ ವಾಹನಗಳು ರಸ್ತೆಯ ಬದಿಯಿಂದ ಸಾಗಿದವು.</p>.<p>ಮಳೆ ಹೆಚ್ಚಾಗುತ್ತಿರುವಂತೆಯೇ ಕೃಷಿ ಚಟುವಟಿಕೆಗಳು ಗರಿಗೆದರಿದ್ದು, ಹೆಚ್ಚಿನ ರೈತರು ತೋಟಗಳಲ್ಲಿ ಬೆಳಿಗ್ಗೆಯಿಂದಲೇ ಕೆಲಸ ಮಾಡುತ್ತಿರುವುದು ಕಂಡು ಬಂದಿತು.</p>.<p class="Briefhead"><strong>ವರುಣನ ಆರ್ಭಟ<br />ಸುಂಟಿಕೊಪ್ಪ: </strong>ಸುಂಟಿಕೊಪ್ಪ ಸುತ್ತಮುತ್ತ ಭಾನುವಾರ ಮಳೆ ಮುಂದುವರಿದಿದೆ.</p>.<p>ಶನಿವಾರ ತಡರಾತ್ರಿಯಿಂದ ಆರಂಭವಾದ ಮಳೆ ಎಡೆಬಿಡದೇ ಬೆಳಿಗ್ಗೆ 9 ಗಂಟೆಯವರೆಗೆ ಸುರಿದಿದೆ. ನಂತರ ಆಗಾಗ್ಗೆ ಬಿಡುವು ನೀಡುತ್ತಾ ಸುರಿಯುತ್ತಲೇ ಇದೆ.</p>.<p>ಮಳೆ ಆರಂಭವಾಗುತ್ತಿದ್ದಂತೆ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಸುಂಟಿಕೊಪ್ಪದಲ್ಲಿ ಚಳಿಯ ವಾತಾವರಣ ಸೃಷ್ಟಿಯಾಗಿದ್ದು, ಜನ ಸ್ವೇಟರ್, ಟೋಪಿ ಧರಿಸಿ ಓಡಾಡುತ್ತಿರುವುದು ಕಂಡುಬಂತು.</p>.<p>ಭಾನುವಾರವೂ ಗಾಳಿಯೂ ತುಸು ಹೆಚ್ಚಾಗಿದ್ದರಿಂದ ವ್ಯಾಪ್ತಿಯ ತೋಟಗಳಲ್ಲಿ ಅಲ್ಲಲ್ಲಿ ಮರದ ಕೊಂಬೆಗಳು ಬಿದ್ದು ವಿದ್ಯುತ್ ವ್ಯತ್ಯಯ ಉಂಟಾಯಿತು.</p>.<p>ಕೊಡಗರಹಳ್ಳಿ, ಹರದೂರು, ನಾಕೂರು, ಅಂದಗೋವೆ, ಹೋರೂರು, ಹೆರೂರು, ಮತ್ತಿಕಾಡು, ಭೂತನಕಾಡು ಸೇರಿದಂತೆ ಇತರೆಡೆ ಮಳೆಯಾಗಿದೆ.</p>.<p class="Briefhead"><strong>ಬಿರುಸಿನ ಮಳೆ<br />ವಿರಾಜಪೇಟೆ: </strong>ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಮಳೆ ಬಿರುಸುಗೊಂಡಿದೆ.</p>.<p>ಶನಿವಾರ ದಿನವಿಡೀ ತುಂತುರು ಮಳೆಯಾದರೆ, ಕತ್ತಲಾಗುತ್ತಿದ್ದಂತೆ ಧಾರಾಕಾರವಾಗಿ ಸುರಿಯಲು ಆರಂಭಿಸಿತು. ರಾತ್ರಿ ಒಂದೇ ಸಮನೆ ನಿರಂತರವಾಗಿ ಸುರಿದ ಮಳೆಯು ಭಾನುವಾರ ಬೆಳಿಗ್ಗೆ ಕೊಂಚ ಇಳಿಮುಖಗೊಂಡಿದೆ. ಆಗಾಗ ಬಿಡುವು ನೀಡುತ್ತಿದ್ದರೂ ತುಂತುರು ಮಳೆ ಆಗುತ್ತಲೇ ಇದೆ.</p>.<p>ಪಟ್ಟಣ ಪ್ರದೇಶವಲ್ಲದೆ ಸಮೀಪದ ಆರ್ಜಿ, ಬೇಟೋಳಿ, ರಾಮನಗರ, ಹೆಗ್ಗಳ, ಮಾಕುಟ್ಟ, ಬಿಟ್ಟಂಗಾಲ, ಬಾಳುಗೋಡು, ಕಂಡಂಗಾಲ, ಕೆದಮುಳ್ಳೂರು, ಕದನೂರು, ಕಾಕೋಟುಪರಂಬು, ಚೆಂಬೆಬೆಳ್ಳೂರು ಸೇರಿದಂತೆ ಹಲವು ಗ್ರಾಮಗಳ ವ್ಯಾಪ್ತಿಯಲ್ಲಿ ಧಾರಾಕಾರ ಮಳೆ ಸುರಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>