ಕೇರಳ ರಾಜ್ಯದ ನೋಂದಣಿ ಸಂಖ್ಯೆಯ ಕಾರಿನಲ್ಲಿ ಕಾಡುಕೋಣ ಮಾಂಸವನ್ನು ಅಕ್ರಮವಾಗಿ ಸಾಗಾಟ ಮಾಡಲು ಆರೋಪಿಗಳು ಯತ್ನಿಸಿದ್ದರು. ಖಚಿತ ಸುಳಿವಿನ ಮೇರೆಗೆ ನಾಪೋಕ್ಲು ಠಾಣೆ ಪೊಲೀಸರು ಹಿಂಬಾಲಿಸಿದ್ದು, ಮಡಿಕೇರಿ ಸಮೀಪದ ಮೇಕೇರಿ ಗ್ರಾಮದ ಸುಭಾಷ್ ನಗರದ ಬಳಿ ಚಾಲಕ ಅತೀ ವೇಗವಾಗಿ ಕಾರು ಓಡಿಸಿದ್ದರಿಂದ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಯಿತು. ಅಪಘಾತಕ್ಕೀಡಾದ ಕಾರನ್ನು ಪೊಲೀಸರು ಪತ್ತೆ ಹಚ್ಚಿದರು. ನಾಪೋಕ್ಲು ಹಾಗೂ ಮಡಿಕೇರಿ ಗ್ರಾಮಾಂತರ ಪೊಲೀಸರು ವಾಹನ ಸಹಿತ ಚೀಲಗಳಲ್ಲಿ ತುಂಬಿದ್ದ 50 ಕೆ.ಜಿ ಕಾಡುಕೋಣ ಮಾಂಸವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಪರಾರಿಯಾಗಿದ್ದು, ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.