ಕುಶಾಲನಗರ: ‘ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆ. 29 ರಂದು ಆಹಾರ ನಾಗರಿಕ ಸರಬರಾಜು ನಿಗಮದ ಸುವರ್ಣ ಮಹೋತ್ಸವ, ಅನ್ನಭಾಗ್ಯ ಯೋಜನೆಯ ದಶಮಾನೋತ್ಸವ, ಪಡಿತರ ವಿತರಕರ ಸಮಾವೇಶ ನಡೆಯಲಿದ್ದು, ಕೊಡಗು ಜಿಲ್ಲೆಯಿಂದ ಒಂದು ಸಾವಿರಕ್ಕೂ ಹೆಚ್ಚು ಪಡಿತರ ಗ್ರಾಹಕರು ಹಾಗೂ ವಿತರಕರು ಪಾಲ್ಗೊಳ್ಳಲಿದ್ದಾರೆ’ ಎಂದು ಕುಶಾಲನಗರ ತಾಲ್ಲೂಕು ಪಡಿತರ ವಿತರಕರ ಸಂಘದ ಅಧ್ಯಕ್ಷ ಕೆ.ಎನ್.ಅಶೋಕ್ ತಿಳಿಸಿದರು.