ನಂತರ ಚಂಡೆ ಮದ್ದಳೆಯೊಂದಿಗೆ ದೇವರ ಉತ್ಸವ ಮೂರ್ತಿಯನ್ನು ಮೆರವಣಿಗೆಯಲ್ಲಿ ಆದಿಸ್ಥಾನ ಮಲ್ಮಗೆ ಕೊಂಡೊಯ್ಯುವರು. ಅಲ್ಲಿ ಸಾಂಪ್ರದಾಯಿಕ ದುಡಿಕೊಟ್ಟ್ ಪಾಟ್ನೊಂದಿಗೆ ಪಾಡಿ, ನೆಲಜಿ, ಪೇರೂರಿನ ತಕ್ಕ ಮುಖ್ಯಸ್ಥರು ಸೇರಿ ಎತ್ತ್ ಪೋರಾಟ ಸೇವೆ, ಪಾಲ್ ಬೈಯ್ಯಾಡ್ನ ಪಾಯಸ ಮಾಡಿ ಪ್ರಸಾದವಾಗಿ ಅರ್ಪಿಸುವರು. ಮುಸ್ಸಂಜೆ ವೇಳೆಗೆ ವಿವಿಧ ಪೂಜಾ ಕೈಂಕರ್ಯದೊಂದಿಗೆ ಉತ್ಸವಮೂರ್ತಿಯನ್ನು ಪಾಡಿ ದೇವಾಲಯಕ್ಕೆ ತಂದು ದೇವಾಲಯದಲ್ಲಿ ಉತ್ಸವ ಮೂರ್ತಿಯನ್ನು ಹೊತ್ತು ನೃತ್ಯ ಮಾಡುವ ಮೂಲಕ ಉತ್ಸವಕ್ಕೆ ತೆರೆ ಬೀಳುವುದು.