<p><strong>ಮಡಿಕೇರಿ:</strong> ಕೊಡಗು ಜಿಲ್ಲಾ ಬಂಟರ ಸಂಘ ಹಾಗೂ ಯುವ ಬಂಟ್ಸ್ ಅಸೋಸಿಯೇಷನ್ ವತಿಯಿಂದ ಶನಿವಾರ ‘ಬಂಟೆರೆನ ವಾರ್ಷಿಕ ಸಮ್ಮಿಲನ-2025’ ಇಲ್ಲಿನ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆರಂಭಗೊಂಡಿತು.</p>.<p>ಒಟ್ಟು 2 ದಿನಗಳ ಕಾಲ ನಡೆಯುವ ಈ ಸಮ್ಮೇಳನದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳು ಆಯೋಜನೆಗೊಂಡಿವೆ. ಶನಿವಾರ ಕ್ರಿಕೆಟ್ ಪಂದ್ಯಗಳು ನಡೆದವು. ಒಟ್ಟು 20 ತಂಡಗಳು ಪ್ರಶಸ್ತಿಗಾಗಿ ಸೆಣಸಿದವು. ಅವುಗಳಲ್ಲಿ 8 ತಂಡಗಳು ಕ್ವಾರ್ಟರ್ ಫೈನಲ್ ಹಂತಕ್ಕೆ ಪ್ರವೇಶ ಪಡೆದವು. ಭಾನುವಾರ ಕ್ವಾರ್ಟರ್ ಫೈನಲ್ ಹಾಗೂ ಫೈನಲ್ ಪಂದ್ಯಗಳು ನಡೆಯಲಿವೆ.</p>.<p>ಭಾನುವಾರ ಕ್ರಿಕೆಟ್ ಜೊತೆಗೆ ವಾಲಿಬಾಲ್, ಹಗ್ಗಜಗ್ಗಾಟ, ಥ್ರೋಬಾಲ್, ಓಟ ಹಾಗೂ ಮಕ್ಕಳಿಗೆ ವಿವಿಧ ಸ್ಪರ್ಧೆಗಳು ನಡೆಯಲಿವೆ. ಸಂಜೆ ವೈವಿಧ್ಯಮಯವಾದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಜೊತೆಗೆ, ರಕ್ತದಾನ ಶಿಬಿರವೂ ಇರಲಿದೆ.</p>.<p>ಯುವ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಬಿ.ಕೆ.ಸದಾನಂದ ರೈ ಅಧ್ಯಕ್ಷತೆ ವಹಿಸಿದ್ದರು. ಕೊಡಗು ಬಂಟರ ಭವನ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಗಿರೀಶ್ ರೈ, ಗಾಳಿಬೀಡು ನಿವೃತ್ತ ಯೋಧ ಬಾಬು ಪ್ರಸಾದ್ ರೈ ಉದ್ಘಾಟಿಸಿದರು. ಅಸೋಸಿಯೇಷನ್ ನಿರ್ದೇಶಕ ಕೆ.ಶರತ್ ಕುಮಾರ್ ಶೆಟ್ಟಿ, ನಗರಸಭಾ ಸದಸ್ಯ ಅರುಣ್ ಶೆಟ್ಟಿ ಸೇರಿದಂತೆ ಹಲವರು ಭಾಗವಹಿಸಿದ್ದರು.</p>.<h2>ಇಂದು ಸಮಾರೋಪ</h2>.<p>11ರಂದು ಸಂಜೆ 5.30ಕ್ಕೆ ನಡೆಯಲಿರುವ ಸಮಾರೋಪ ಸಮಾರಂಭವನ್ನು ಕೊಡಗು ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ಬಿ.ಡಿ.ಜಗದೀಶ್ ರೈ, ಗೌರವ ಅಧ್ಯಕ್ಷ ಬಿ.ಬಿ.ಐತಪ್ಪ ರೈ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಬಂಟರ ಸಂಘದ ಕಾರ್ಯದರ್ಶಿ ವಿ.ರವೀಂದ್ರ ರೈ, ಉಪಾಧ್ಯಕ್ಷ ಬಿ.ಕೆ.ರವೀಂದ್ರ ರೈ, ಮಡಿಕೇರಿ ತಾಲ್ಲೂಕು ಅಧ್ಯಕ್ಷ ಸದಾಶಿವ ರೈ, ವಿರಾಜಪೇಟೆ ತಾಲ್ಲೂಕು ಅಧ್ಯಕ್ಷ ಲೀಲಾಧರ ರೈ, ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷ ಜನಾರ್ಧನ ಶೆಟ್ಟಿ, ವಿರಾಜಪೇಟೆ ತಾಲ್ಲೂಕು ಬಂಟರ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ನೀತು ರೈ, ಮಡಿಕೇರಿ ನಗರಾಧ್ಯಕ್ಷ ಪ್ರಭು ರೈ, ಮಡಿಕೇರಿ ನಗರ ಮಹಿಳಾ ಘಟಕದ ಅಧ್ಯಕ್ಷೆ ಬೇಬಿ ಜಯರಾಮ್ ರೈ, ಉದ್ಯಮಿಗಳಾದ ಅಶ್ವಿನಿ ಪುರುಷೋತ್ತಮ್ ರೈ, ಜಯಪ್ರಕಾಶ್ ರೈ, ಶರತ್ ಕುಮಾರ್ ಶೆಟ್ಟಿ ಹಾಗೂ ಯುವ ಬಂಟ್ಸ್ ಅಸೋಸಿಯೇಷನ್ ನಿಕಟಪೂರ್ವ ಅಧ್ಯಕ್ಷ ವಸಂತ್ ರೈ ಪಾಲ್ಗೊಳ್ಳಲಿದ್ದಾರೆ.</p>.<p>ಸಭಾ ಕಾರ್ಯಕ್ರಮದ ನಂತರ ಸಾಧಕರಿಗೆ ಸನ್ಮಾನ, ಬಹುಮಾನ ವಿತರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಕೊಡಗು ಜಿಲ್ಲಾ ಬಂಟರ ಸಂಘ ಹಾಗೂ ಯುವ ಬಂಟ್ಸ್ ಅಸೋಸಿಯೇಷನ್ ವತಿಯಿಂದ ಶನಿವಾರ ‘ಬಂಟೆರೆನ ವಾರ್ಷಿಕ ಸಮ್ಮಿಲನ-2025’ ಇಲ್ಲಿನ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆರಂಭಗೊಂಡಿತು.</p>.<p>ಒಟ್ಟು 2 ದಿನಗಳ ಕಾಲ ನಡೆಯುವ ಈ ಸಮ್ಮೇಳನದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳು ಆಯೋಜನೆಗೊಂಡಿವೆ. ಶನಿವಾರ ಕ್ರಿಕೆಟ್ ಪಂದ್ಯಗಳು ನಡೆದವು. ಒಟ್ಟು 20 ತಂಡಗಳು ಪ್ರಶಸ್ತಿಗಾಗಿ ಸೆಣಸಿದವು. ಅವುಗಳಲ್ಲಿ 8 ತಂಡಗಳು ಕ್ವಾರ್ಟರ್ ಫೈನಲ್ ಹಂತಕ್ಕೆ ಪ್ರವೇಶ ಪಡೆದವು. ಭಾನುವಾರ ಕ್ವಾರ್ಟರ್ ಫೈನಲ್ ಹಾಗೂ ಫೈನಲ್ ಪಂದ್ಯಗಳು ನಡೆಯಲಿವೆ.</p>.<p>ಭಾನುವಾರ ಕ್ರಿಕೆಟ್ ಜೊತೆಗೆ ವಾಲಿಬಾಲ್, ಹಗ್ಗಜಗ್ಗಾಟ, ಥ್ರೋಬಾಲ್, ಓಟ ಹಾಗೂ ಮಕ್ಕಳಿಗೆ ವಿವಿಧ ಸ್ಪರ್ಧೆಗಳು ನಡೆಯಲಿವೆ. ಸಂಜೆ ವೈವಿಧ್ಯಮಯವಾದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಜೊತೆಗೆ, ರಕ್ತದಾನ ಶಿಬಿರವೂ ಇರಲಿದೆ.</p>.<p>ಯುವ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಬಿ.ಕೆ.ಸದಾನಂದ ರೈ ಅಧ್ಯಕ್ಷತೆ ವಹಿಸಿದ್ದರು. ಕೊಡಗು ಬಂಟರ ಭವನ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಗಿರೀಶ್ ರೈ, ಗಾಳಿಬೀಡು ನಿವೃತ್ತ ಯೋಧ ಬಾಬು ಪ್ರಸಾದ್ ರೈ ಉದ್ಘಾಟಿಸಿದರು. ಅಸೋಸಿಯೇಷನ್ ನಿರ್ದೇಶಕ ಕೆ.ಶರತ್ ಕುಮಾರ್ ಶೆಟ್ಟಿ, ನಗರಸಭಾ ಸದಸ್ಯ ಅರುಣ್ ಶೆಟ್ಟಿ ಸೇರಿದಂತೆ ಹಲವರು ಭಾಗವಹಿಸಿದ್ದರು.</p>.<h2>ಇಂದು ಸಮಾರೋಪ</h2>.<p>11ರಂದು ಸಂಜೆ 5.30ಕ್ಕೆ ನಡೆಯಲಿರುವ ಸಮಾರೋಪ ಸಮಾರಂಭವನ್ನು ಕೊಡಗು ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ಬಿ.ಡಿ.ಜಗದೀಶ್ ರೈ, ಗೌರವ ಅಧ್ಯಕ್ಷ ಬಿ.ಬಿ.ಐತಪ್ಪ ರೈ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಬಂಟರ ಸಂಘದ ಕಾರ್ಯದರ್ಶಿ ವಿ.ರವೀಂದ್ರ ರೈ, ಉಪಾಧ್ಯಕ್ಷ ಬಿ.ಕೆ.ರವೀಂದ್ರ ರೈ, ಮಡಿಕೇರಿ ತಾಲ್ಲೂಕು ಅಧ್ಯಕ್ಷ ಸದಾಶಿವ ರೈ, ವಿರಾಜಪೇಟೆ ತಾಲ್ಲೂಕು ಅಧ್ಯಕ್ಷ ಲೀಲಾಧರ ರೈ, ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷ ಜನಾರ್ಧನ ಶೆಟ್ಟಿ, ವಿರಾಜಪೇಟೆ ತಾಲ್ಲೂಕು ಬಂಟರ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ನೀತು ರೈ, ಮಡಿಕೇರಿ ನಗರಾಧ್ಯಕ್ಷ ಪ್ರಭು ರೈ, ಮಡಿಕೇರಿ ನಗರ ಮಹಿಳಾ ಘಟಕದ ಅಧ್ಯಕ್ಷೆ ಬೇಬಿ ಜಯರಾಮ್ ರೈ, ಉದ್ಯಮಿಗಳಾದ ಅಶ್ವಿನಿ ಪುರುಷೋತ್ತಮ್ ರೈ, ಜಯಪ್ರಕಾಶ್ ರೈ, ಶರತ್ ಕುಮಾರ್ ಶೆಟ್ಟಿ ಹಾಗೂ ಯುವ ಬಂಟ್ಸ್ ಅಸೋಸಿಯೇಷನ್ ನಿಕಟಪೂರ್ವ ಅಧ್ಯಕ್ಷ ವಸಂತ್ ರೈ ಪಾಲ್ಗೊಳ್ಳಲಿದ್ದಾರೆ.</p>.<p>ಸಭಾ ಕಾರ್ಯಕ್ರಮದ ನಂತರ ಸಾಧಕರಿಗೆ ಸನ್ಮಾನ, ಬಹುಮಾನ ವಿತರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>