<p><strong>ಮಡಿಕೇರಿ</strong>: ಹರದಾಸ ಅಪ್ಪನೆರವಂಡ ಅಪ್ಪಚ್ಚಕವಿ ಅವರ 158ನೇ ಜನ್ಮ ದಿನಾಚರಣೆಯು ಅಲ್ಲಾರಂಡ ರಂಗಚಾವಡಿ ಮತ್ತು ಕೊಡವ ಸಮಾಜದ ವತಿಯಿಂದ ಇಲ್ಲಿನ ಕೊಡವ ಸಮಾಜದಲ್ಲಿ ಸೆ. 21ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ ಎಂದು ಅಲ್ಲಾರಂಡ ರಂಗಚಾವಡಿಯ ಅಲ್ಲಾರಂಡ ವಿಠಲ ನಂಜಪ್ಪ ತಿಳಿಸಿದರು.</p>.<p>ಅಪ್ಪಚ್ಚಕವಿ ಕಲಾಭವನದ ನಿರ್ಮಾಣ ಸಮಿತಿ ಅಧ್ಯಕ್ಷ ಅಪ್ಪನೆರವಂಡ ಮನೋಜ್ ಮಂದಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಯಾಗಿ ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಮುತ್ತಪ್ಪ ಭಾಗವಹಿಸಲಿದ್ದಾರೆ ಎಂದು ಅವರು ಇಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>‘ನಾನೇ ನಿರ್ದೇಶಿಸಿ, ನಿರ್ಮಿಸಿರುವ ಅಪ್ಪಚ್ಚಕವಿ ಅವರನ್ನು ಕುರಿತ 30 ನಿಮಿಷಗಳ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಬರಹಗಾರ್ತಿ ಈರಮಂಡ ಹರಿಣಿ ವಿಜಯ್ ಉದ್ಘಾಟಿಸಲಿದ್ದಾರೆ. ಕೊಡವ ಭಾಷಾ ಸಾಹಿತ್ಯಕ್ಕೆ ಕೊಡುಗೆ ನೀಡಿರುವ ಸಾಹಿತಿ ನಾಗೇಶ್ ಕಾಲೂರು ಅವರನ್ನು ಸನ್ಮಾನಿಸಲಾಗುವುದು ಎಂದು ಅವರು ತಿಳಿಸಿದರು.</p>.<p>ವಿವಿಧ ಪುಸ್ತಕಗಳ ಕುರಿತು ಚೆರುವಾಳಂಡ ಸುಜಲ ನಾಣಯ್ಯ, ಕರವಂಡ ಸೀಮಾ ಗಣಪತಿ, ಮಾಳೇಟಿರ ಸೀತಮ್ಮ ವಿವೇಕ್, ಐಚಂಡ ರಶ್ಮಿ ಮೇದಪ್ಪ ಮಾತನಾಡುವರು ಎಂದು ಹೇಳಿದರು.</p>.<p>ಸಾಹಿತಿ ಬೊಟ್ಟೋಳಂಡ ನಿವ್ಯ ದೇವಯ್ಯ ಮಾತನಾಡಿ, ಅಪ್ಪನೆರವಂಡ ಅಪ್ಪಚ್ಚಕವಿಯ ಸ್ಮರಣಾರ್ಥ ಕವಿಗೋಷ್ಠಿಯೂ ನಡೆಯಲಿದ್ದು, 15ರಿಂದ 18 ಕವನಗಳ ವಾಚನ ನಡೆಯಲಿದೆ ಎಂದರು.</p>.<p>ಸಾಹಿತ್ಯಾಸಕ್ತ ಅಯಲಪಂಡ ದೊರೆ ದೇವಯ್ಯ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ಹರದಾಸ ಅಪ್ಪನೆರವಂಡ ಅಪ್ಪಚ್ಚಕವಿ ಅವರ 158ನೇ ಜನ್ಮ ದಿನಾಚರಣೆಯು ಅಲ್ಲಾರಂಡ ರಂಗಚಾವಡಿ ಮತ್ತು ಕೊಡವ ಸಮಾಜದ ವತಿಯಿಂದ ಇಲ್ಲಿನ ಕೊಡವ ಸಮಾಜದಲ್ಲಿ ಸೆ. 21ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ ಎಂದು ಅಲ್ಲಾರಂಡ ರಂಗಚಾವಡಿಯ ಅಲ್ಲಾರಂಡ ವಿಠಲ ನಂಜಪ್ಪ ತಿಳಿಸಿದರು.</p>.<p>ಅಪ್ಪಚ್ಚಕವಿ ಕಲಾಭವನದ ನಿರ್ಮಾಣ ಸಮಿತಿ ಅಧ್ಯಕ್ಷ ಅಪ್ಪನೆರವಂಡ ಮನೋಜ್ ಮಂದಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಯಾಗಿ ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಮುತ್ತಪ್ಪ ಭಾಗವಹಿಸಲಿದ್ದಾರೆ ಎಂದು ಅವರು ಇಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>‘ನಾನೇ ನಿರ್ದೇಶಿಸಿ, ನಿರ್ಮಿಸಿರುವ ಅಪ್ಪಚ್ಚಕವಿ ಅವರನ್ನು ಕುರಿತ 30 ನಿಮಿಷಗಳ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಬರಹಗಾರ್ತಿ ಈರಮಂಡ ಹರಿಣಿ ವಿಜಯ್ ಉದ್ಘಾಟಿಸಲಿದ್ದಾರೆ. ಕೊಡವ ಭಾಷಾ ಸಾಹಿತ್ಯಕ್ಕೆ ಕೊಡುಗೆ ನೀಡಿರುವ ಸಾಹಿತಿ ನಾಗೇಶ್ ಕಾಲೂರು ಅವರನ್ನು ಸನ್ಮಾನಿಸಲಾಗುವುದು ಎಂದು ಅವರು ತಿಳಿಸಿದರು.</p>.<p>ವಿವಿಧ ಪುಸ್ತಕಗಳ ಕುರಿತು ಚೆರುವಾಳಂಡ ಸುಜಲ ನಾಣಯ್ಯ, ಕರವಂಡ ಸೀಮಾ ಗಣಪತಿ, ಮಾಳೇಟಿರ ಸೀತಮ್ಮ ವಿವೇಕ್, ಐಚಂಡ ರಶ್ಮಿ ಮೇದಪ್ಪ ಮಾತನಾಡುವರು ಎಂದು ಹೇಳಿದರು.</p>.<p>ಸಾಹಿತಿ ಬೊಟ್ಟೋಳಂಡ ನಿವ್ಯ ದೇವಯ್ಯ ಮಾತನಾಡಿ, ಅಪ್ಪನೆರವಂಡ ಅಪ್ಪಚ್ಚಕವಿಯ ಸ್ಮರಣಾರ್ಥ ಕವಿಗೋಷ್ಠಿಯೂ ನಡೆಯಲಿದ್ದು, 15ರಿಂದ 18 ಕವನಗಳ ವಾಚನ ನಡೆಯಲಿದೆ ಎಂದರು.</p>.<p>ಸಾಹಿತ್ಯಾಸಕ್ತ ಅಯಲಪಂಡ ದೊರೆ ದೇವಯ್ಯ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>