ನಗರದ ಹಳೇ ಕೋಟೆ ವೀಕ್ಷಣೆಯ ಬಳಿಕ ಮಾತನಾಡಿದ ಅವರು, 'ವಿರೋಧ ಪಕ್ಷದ ಮುಖಂಡರು ಆರೋಪ ಮಾಡಿದಾಗ ಆಡಳಿತ ಪಕ್ಷದ ಮಂತ್ರಿಗಳು ಸರಿಯಾದ ದಾಖಲೆಗಳನ್ನು ಜನರ ಎದುರು ಇಡಬೇಕು. ಕೆಲವು ದಾಖಲೆಗಳನ್ನು ಕೊಟ್ಟಿದ್ದಾರೆ. ಇನ್ನು ವಿರೋಧ ಪಕ್ಷದವರೂ ಸರಿಯಾದ ದಾಖಲೆಗಳೊಂದಿಗೆ ಆರೋಪ ಮಾಡಬೇಕು. ಕೇವಲ ₹600 ಕೋಟಿಯಷ್ಟು ಹಣ ಖರ್ಚು ಮಾಡಿದ್ದೇವೆ ಎಂದು ಸಚಿವರು ಹೇಳಿದ್ದಾರೆ. ವಿರೋಧ ಪಕ್ಷದವರು ₹4,000 ಕೋಟಿಯಷ್ಟು ಖರ್ಚಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಹೀಗಿರುವಾಗ ಸತ್ಯಾಸತ್ಯತೆ ಅರಿಯಲು ತನಿಖೆ ಅಗತ್ಯ. ನ್ಯಾಯಾಂಗ ತನಿಖೆ ಸೇರಿದಂತೆ ಯಾವುದಾದರು ತನಿಖಾ ಸಂಸ್ಥೆಯಿಂದ ತನಿಖೆ ನಡೆಸಲಿ' ಎಂದು ಅಪ್ಪಚ್ಚು ರಂಜನ್ ಹೇಳಿದರು.