<p><strong>ಮಡಿಕೇರಿ: </strong>‘ಸಚಿವ ಸಂಪುಟ ವಿಸ್ತರಣೆಯಲ್ಲಿ ಕೊಡಗು ಜಿಲ್ಲೆಯ ಶಾಸಕರನ್ನು ಕಡೆಗಣಿಸಲಾಗಿದೆ. ನಾನು ಐದು ಬಾರಿ ಗೆದ್ದು ಶಾಸಕನಾಗಿದ್ದರೂ ಹಿರಿತನಕ್ಕೆ ಗೌರವ ನೀಡಿಲ್ಲ’ ಎಂದು ಮಡಿಕೇರಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರು ಪಕ್ಷದ ವರಿಷ್ಠರ ವಿರುದ್ಧ ಶುಕ್ರವಾರ ಬಹಿರಂಗವಾಗಿ ಅಸಮಾಧಾನ ಹೊರಹಾಕಿದರು.</p>.<p>‘ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯದ ಶಾಸಕರಿಗೇ ಹೆಚ್ಚಿನ ಆದ್ಯತೆ ನೀಡಲಾಗಿದೆ. ಸಂಪುಟದಲ್ಲಿ ಸಾಮಾಜಿಕ ನ್ಯಾಯ ಸಿಕ್ಕಿಲ್ಲ. ಹಿರಿಯ ಶಾಸಕರನ್ನು ಪಕ್ಷದ ಮುಖಂಡರೇ ಕಡೆಗಣಿಸಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಕೊಡಗಿನ ಜನರು ಶಾಂತಿ ಪ್ರಿಯರು. ಅವರಿಗೆ ಅನ್ಯಾಯವಾಗುವುದು ಬೇಡ. ಜಿಲ್ಲೆಯ ಜನರು ಬೀದಿಗೆ ಇಳಿದು ಹೋರಾಟ ನಡೆಸಲು ಮುಂದಾಗಿದ್ದರು. ನಾನೇ ಬೇಡವೆಂದು ಮನವಿ ಮಾಡಿಕೊಂಡಿರುವೆ’ ಎಂದರು.</p>.<p>‘ಅನ್ಯ ಪಕ್ಷದಿಂದ ಹತ್ತು ಮಂದಿ ಬಂದಿರುವುದರಿಂದಲೇ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಅದರಲ್ಲಿ ಮರು ಮಾತಿಲ್ಲ. ಆದರೆ, ಈ ಬಾರಿಯ ವಿಸ್ತರಣೆಯಲ್ಲಿ ಹಿರಿಯರನ್ನು ಪರಿಗಣಿಸಬೇಕಿತ್ತು. ಜಿಲ್ಲಾವಾರು ಆದ್ಯತೆ ನೀಡಬೇಕಿತ್ತು. ಮುಂದಿನ ವಿಸ್ತರಣೆಯಲ್ಲಿ ತಪ್ಪು ಸರಿಪಡಿಸುವ ಕೆಲಸ ಆಗಬೇಕು. ಇಲ್ಲದಿದ್ದರೆ ಉಳಿದವರು ಮುಂದಿನ ನಿರ್ಧಾರದ ಕುರಿತು ಚಿಂತಿಸಬೇಕಾದೀತು’ ಎಂದು ಎಚ್ಚರಿಸಿದರು.</p>.<p>‘ಬಿಜೆಪಿಯ ತತ್ವ, ಸಿದ್ಧಾಂತ ಉಳಿಯಬೇಕು. ಮುಂದೆಯೂ ನಮ್ಮದೇ ಸರ್ಕಾರ ಆಡಳಿತಕ್ಕೆ ಬರಬೇಕು. ಹೀಗಾಗಿ, ಮೂಲ ಬಿಜೆಪಿ ಶಾಸಕರಿಗೂ ಸಂಪುಟದಲ್ಲಿ ಆದ್ಯತೆ ನೀಡಬೇಕು’ ಎಂದು ರಂಜನ್ ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ: </strong>‘ಸಚಿವ ಸಂಪುಟ ವಿಸ್ತರಣೆಯಲ್ಲಿ ಕೊಡಗು ಜಿಲ್ಲೆಯ ಶಾಸಕರನ್ನು ಕಡೆಗಣಿಸಲಾಗಿದೆ. ನಾನು ಐದು ಬಾರಿ ಗೆದ್ದು ಶಾಸಕನಾಗಿದ್ದರೂ ಹಿರಿತನಕ್ಕೆ ಗೌರವ ನೀಡಿಲ್ಲ’ ಎಂದು ಮಡಿಕೇರಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರು ಪಕ್ಷದ ವರಿಷ್ಠರ ವಿರುದ್ಧ ಶುಕ್ರವಾರ ಬಹಿರಂಗವಾಗಿ ಅಸಮಾಧಾನ ಹೊರಹಾಕಿದರು.</p>.<p>‘ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯದ ಶಾಸಕರಿಗೇ ಹೆಚ್ಚಿನ ಆದ್ಯತೆ ನೀಡಲಾಗಿದೆ. ಸಂಪುಟದಲ್ಲಿ ಸಾಮಾಜಿಕ ನ್ಯಾಯ ಸಿಕ್ಕಿಲ್ಲ. ಹಿರಿಯ ಶಾಸಕರನ್ನು ಪಕ್ಷದ ಮುಖಂಡರೇ ಕಡೆಗಣಿಸಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಕೊಡಗಿನ ಜನರು ಶಾಂತಿ ಪ್ರಿಯರು. ಅವರಿಗೆ ಅನ್ಯಾಯವಾಗುವುದು ಬೇಡ. ಜಿಲ್ಲೆಯ ಜನರು ಬೀದಿಗೆ ಇಳಿದು ಹೋರಾಟ ನಡೆಸಲು ಮುಂದಾಗಿದ್ದರು. ನಾನೇ ಬೇಡವೆಂದು ಮನವಿ ಮಾಡಿಕೊಂಡಿರುವೆ’ ಎಂದರು.</p>.<p>‘ಅನ್ಯ ಪಕ್ಷದಿಂದ ಹತ್ತು ಮಂದಿ ಬಂದಿರುವುದರಿಂದಲೇ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಅದರಲ್ಲಿ ಮರು ಮಾತಿಲ್ಲ. ಆದರೆ, ಈ ಬಾರಿಯ ವಿಸ್ತರಣೆಯಲ್ಲಿ ಹಿರಿಯರನ್ನು ಪರಿಗಣಿಸಬೇಕಿತ್ತು. ಜಿಲ್ಲಾವಾರು ಆದ್ಯತೆ ನೀಡಬೇಕಿತ್ತು. ಮುಂದಿನ ವಿಸ್ತರಣೆಯಲ್ಲಿ ತಪ್ಪು ಸರಿಪಡಿಸುವ ಕೆಲಸ ಆಗಬೇಕು. ಇಲ್ಲದಿದ್ದರೆ ಉಳಿದವರು ಮುಂದಿನ ನಿರ್ಧಾರದ ಕುರಿತು ಚಿಂತಿಸಬೇಕಾದೀತು’ ಎಂದು ಎಚ್ಚರಿಸಿದರು.</p>.<p>‘ಬಿಜೆಪಿಯ ತತ್ವ, ಸಿದ್ಧಾಂತ ಉಳಿಯಬೇಕು. ಮುಂದೆಯೂ ನಮ್ಮದೇ ಸರ್ಕಾರ ಆಡಳಿತಕ್ಕೆ ಬರಬೇಕು. ಹೀಗಾಗಿ, ಮೂಲ ಬಿಜೆಪಿ ಶಾಸಕರಿಗೂ ಸಂಪುಟದಲ್ಲಿ ಆದ್ಯತೆ ನೀಡಬೇಕು’ ಎಂದು ರಂಜನ್ ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>