<p><strong>ಸೋಮವಾರಪೇಟೆ</strong>: ಮುಕ್ಕೋಡ್ಲು ಗ್ರಾಮದಲ್ಲಿ ಅರಣ್ಯ ಇಲಾಖೆ ಫಸಲಿಗೆ ಬಂದಿದ್ದ ಏಲಕ್ಕಿ ಹಾಗೂ ಕಾಫಿ ಗಿಡಗಳನ್ನು ಕಡಿದು ಹಾಕಿರುವ ಇಲಾಖೆ ಸಿಬ್ಬಂದಿಯನ್ನು ಕೂಡಲೇ ಅಮಾನತು ಮಾಡಬೇಕೆಂದು ಒತ್ತಾಯಿಸಿ ತಾಲ್ಲೂಕು ರೈತ ಹೋರಾಟ ಸಮಿತಿ ಪದಾಧಿಕಾರಿಗಳು ಜಿಲ್ಲಾ ಉಸ್ತವಾರಿ ಸಚಿವರಿಗೆ ಸೋಮವಾರ ಮನವಿ ಮಾಡಿದರು.</p>.<p>ಗ್ರಾಮದ ಕಾಳಚಂಡ ನಾಣಿಯಪ್ಪ ಎಂಬುವವರ ತೋಟ ಹಾಗೂ ಫಸಲನ್ನು ಅರಣ್ಯ ಇಲಾಖೆ ಸಿಬ್ಬಂದಿ ನಾಶ ಪಡಿಸಿದ್ದು, 33/2 ತೋಟದ ಸ್ಥಳವನ್ನು ಹದ್ದು ಬಸ್ತು ಸರ್ವೆ ಮಾಡಿಸಿ, ಸರ್ವೆ ಇಲಾಖೆಯಿಂದ ಸಂಬಂಧಿಸಿದ ಸ್ಥಳ ಪೈಸಾರಿ ಜಾಗ ಎಂದು ಅಧಿಕೃತ ದಾಖಲೆಯನ್ನು ಪಡೆದ ನಂತರವೂ ಅರಣ್ಯ ಇಲಾಖೆ ಈ ಕ್ರಮ ಕೈಗೊಂಡಿರುವುದು ಅಕ್ಷಮ್ಯ ಅಪರಾಧ ಎಂದಿದ್ದಾರೆ.</p>.<p>ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ಅವರಿಗೆ ಮನವಿ ಸಲ್ಲಿಕೆ ಸಂದರ್ಭ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ ಗೌಡ, ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಇದ್ದರು.</p>.<p>ರೈತ ಹೋರಾಟ ಸಮಿತಿ ಅಧ್ಯಕ್ಷ ಕೆ.ಬಿ.ಸುರೇಶ್, ಪದಾಧಿಕಾರಿಗಳಾದ ಕಲ್ಕಂದೂರು ಪ್ರಕಾಶ್, ಡಿ.ಕೆ.ದೇವರಾಜ್ ಹಾಗೂ ಕೂತಿ ದಿವಾಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೋಮವಾರಪೇಟೆ</strong>: ಮುಕ್ಕೋಡ್ಲು ಗ್ರಾಮದಲ್ಲಿ ಅರಣ್ಯ ಇಲಾಖೆ ಫಸಲಿಗೆ ಬಂದಿದ್ದ ಏಲಕ್ಕಿ ಹಾಗೂ ಕಾಫಿ ಗಿಡಗಳನ್ನು ಕಡಿದು ಹಾಕಿರುವ ಇಲಾಖೆ ಸಿಬ್ಬಂದಿಯನ್ನು ಕೂಡಲೇ ಅಮಾನತು ಮಾಡಬೇಕೆಂದು ಒತ್ತಾಯಿಸಿ ತಾಲ್ಲೂಕು ರೈತ ಹೋರಾಟ ಸಮಿತಿ ಪದಾಧಿಕಾರಿಗಳು ಜಿಲ್ಲಾ ಉಸ್ತವಾರಿ ಸಚಿವರಿಗೆ ಸೋಮವಾರ ಮನವಿ ಮಾಡಿದರು.</p>.<p>ಗ್ರಾಮದ ಕಾಳಚಂಡ ನಾಣಿಯಪ್ಪ ಎಂಬುವವರ ತೋಟ ಹಾಗೂ ಫಸಲನ್ನು ಅರಣ್ಯ ಇಲಾಖೆ ಸಿಬ್ಬಂದಿ ನಾಶ ಪಡಿಸಿದ್ದು, 33/2 ತೋಟದ ಸ್ಥಳವನ್ನು ಹದ್ದು ಬಸ್ತು ಸರ್ವೆ ಮಾಡಿಸಿ, ಸರ್ವೆ ಇಲಾಖೆಯಿಂದ ಸಂಬಂಧಿಸಿದ ಸ್ಥಳ ಪೈಸಾರಿ ಜಾಗ ಎಂದು ಅಧಿಕೃತ ದಾಖಲೆಯನ್ನು ಪಡೆದ ನಂತರವೂ ಅರಣ್ಯ ಇಲಾಖೆ ಈ ಕ್ರಮ ಕೈಗೊಂಡಿರುವುದು ಅಕ್ಷಮ್ಯ ಅಪರಾಧ ಎಂದಿದ್ದಾರೆ.</p>.<p>ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ಅವರಿಗೆ ಮನವಿ ಸಲ್ಲಿಕೆ ಸಂದರ್ಭ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ ಗೌಡ, ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಇದ್ದರು.</p>.<p>ರೈತ ಹೋರಾಟ ಸಮಿತಿ ಅಧ್ಯಕ್ಷ ಕೆ.ಬಿ.ಸುರೇಶ್, ಪದಾಧಿಕಾರಿಗಳಾದ ಕಲ್ಕಂದೂರು ಪ್ರಕಾಶ್, ಡಿ.ಕೆ.ದೇವರಾಜ್ ಹಾಗೂ ಕೂತಿ ದಿವಾಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>