<p><strong>ನಾಪೋಕ್ಲು:</strong> ‘ಎಲೆಮರೆ ಕಾಯಿಯಂತಿರುವ ಸಾಹಿತಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವನ್ನು ಸಾಹಿತ್ಯ ಪರಿಷತ್ ಮಾಡಬೇಕಿದೆ’ ಎಂದು ಮೂರ್ನಾಡು ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ಚೌರೀರ ಡಾ. ಜಗತ್ ತಿಮ್ಮಯ್ಯ ಹೇಳಿದರು.</p>.<p>ಮೂರ್ನಾಡು ಪದವಿ ಪೂರ್ವ ಕಾಲೇಜು ಆವರಣದ ಕಾವೇರಿ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ, ಮಡಿಕೇರಿ ತಾಲ್ಲೂಕು ಮತ್ತು ಪದವಿ ಪೂರ್ವ ಕಾಲೇಜು ವತಿಯಿಂದ ಆಯೋಜಿಸಿದ್ದ ಮೂರ್ನಾಡು ಕಸಾಪ ಘಟಕದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಸರ್ಕಲ್ ಇನ್ಸ್ಪೆಕ್ಟರ್ ಅನೂಪ್ ಮಾದಪ್ಪ, ‘ಸಂಚಾರ ನಿಯಮ ಮತ್ತು ಕಾನೂನು’ ವಿಷಯ ಕುರಿತು ಉಪನ್ಯಾಸ ನೀಡಿದರು.</p>.<p>ಜಾನಪದ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಜಿ. ಅನಂತಶಯನ, ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್, ಸಾಹಿತಿ ಟಿ.ಪಿ. ರಮೇಶ್ ಮಾತನಾಡಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ ಮೂರ್ನಾಡು ಹೋಬಳಿ ಘಟಕದ ನೂತನ ಅಧ್ಯಕ್ಷೆ ಹರಿಣಿ ವಿಜಯ್, ಮಡಿಕೇರಿ ತಾಲ್ಲೂಕು ಘಟಕದ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್, ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು.</p>.<p>ಸಾಹಿತಿ ಗೌರಮ್ಮ ಮಾದಮಯ್ಯ ಅವರು ಬರೆದ ವಿಷಯ ಸಂಕಲನ ಕೃತಿ ಲೋಕಾರ್ಪಣೆ ಮಾಡಲಾಯಿತು.</p>.<p>ಜಿಲ್ಲಾ ಘಟಕದ ಕಾರ್ಯದರ್ಶಿ ಎಸ್.ಐ ಮುನೀರ್ ಆಹ್ಮದ್, ಕೋಶಾಧಿಕಾರಿ ಎಂ.ಎಸ್. ಸಂಪತ್ ಕುಮಾರ್, ನಿರ್ದೇಶಕ ಮಂಜುನಾಥ್, ಮೂರ್ನಾಡು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಪಿ.ಎಂ. ದೇವಕ್ಕಿ, ಸಾಹಿತಿ ಪಿ.ಪಿ. ಸುಕುಮಾರ್ ಇದ್ದರು.</p>.<p>ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಪೋಕ್ಲು:</strong> ‘ಎಲೆಮರೆ ಕಾಯಿಯಂತಿರುವ ಸಾಹಿತಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವನ್ನು ಸಾಹಿತ್ಯ ಪರಿಷತ್ ಮಾಡಬೇಕಿದೆ’ ಎಂದು ಮೂರ್ನಾಡು ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ಚೌರೀರ ಡಾ. ಜಗತ್ ತಿಮ್ಮಯ್ಯ ಹೇಳಿದರು.</p>.<p>ಮೂರ್ನಾಡು ಪದವಿ ಪೂರ್ವ ಕಾಲೇಜು ಆವರಣದ ಕಾವೇರಿ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ, ಮಡಿಕೇರಿ ತಾಲ್ಲೂಕು ಮತ್ತು ಪದವಿ ಪೂರ್ವ ಕಾಲೇಜು ವತಿಯಿಂದ ಆಯೋಜಿಸಿದ್ದ ಮೂರ್ನಾಡು ಕಸಾಪ ಘಟಕದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಸರ್ಕಲ್ ಇನ್ಸ್ಪೆಕ್ಟರ್ ಅನೂಪ್ ಮಾದಪ್ಪ, ‘ಸಂಚಾರ ನಿಯಮ ಮತ್ತು ಕಾನೂನು’ ವಿಷಯ ಕುರಿತು ಉಪನ್ಯಾಸ ನೀಡಿದರು.</p>.<p>ಜಾನಪದ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಜಿ. ಅನಂತಶಯನ, ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್, ಸಾಹಿತಿ ಟಿ.ಪಿ. ರಮೇಶ್ ಮಾತನಾಡಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ ಮೂರ್ನಾಡು ಹೋಬಳಿ ಘಟಕದ ನೂತನ ಅಧ್ಯಕ್ಷೆ ಹರಿಣಿ ವಿಜಯ್, ಮಡಿಕೇರಿ ತಾಲ್ಲೂಕು ಘಟಕದ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್, ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು.</p>.<p>ಸಾಹಿತಿ ಗೌರಮ್ಮ ಮಾದಮಯ್ಯ ಅವರು ಬರೆದ ವಿಷಯ ಸಂಕಲನ ಕೃತಿ ಲೋಕಾರ್ಪಣೆ ಮಾಡಲಾಯಿತು.</p>.<p>ಜಿಲ್ಲಾ ಘಟಕದ ಕಾರ್ಯದರ್ಶಿ ಎಸ್.ಐ ಮುನೀರ್ ಆಹ್ಮದ್, ಕೋಶಾಧಿಕಾರಿ ಎಂ.ಎಸ್. ಸಂಪತ್ ಕುಮಾರ್, ನಿರ್ದೇಶಕ ಮಂಜುನಾಥ್, ಮೂರ್ನಾಡು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಪಿ.ಎಂ. ದೇವಕ್ಕಿ, ಸಾಹಿತಿ ಪಿ.ಪಿ. ಸುಕುಮಾರ್ ಇದ್ದರು.</p>.<p>ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>