‘ಕರ್ನಾಟಕ- ಕೇರಳ ರಾಜ್ಯಗಳ ನಡುವೆ ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರು ಹಾಗೂ ಕಾಲ್ನಡಿಗೆಯಲ್ಲಿ ಸಂಚರಿಸುವವರು ಕಡ್ಡಾಯವಾಗಿ 72 ಗಂಟೆಗಳ ಒಳಗೆ ಪಡೆದಿರುವ ಕೊರೊನಾ ನೆಗೆಟಿವ್ ವರದಿ ತೋರಿಸಬೇಕು ಎಂಬ ನಿಯಮವಿದೆ. ಮೇ 24ರಂದು ಕುಟ್ಟ ಪೊಲೀಸ್ ಚೆಕ್ಪೋಸ್ಟ್ನಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಬಿ.ವಿ.ಹರೀಶ್ ಕುಮಾರ್ ಹಾಗೂ ಆರೋಗ್ಯ ಇಲಾಖೆ ನಾಗೇಂದ್ರ ಅವರು, ವಾಹನ ತಪಾಸಣೆ ಮಾಡುತ್ತಿದ್ದರು. ಅಂದು ಸಂಜೆ 4.45ರ ಸುಮಾರಿಗೆ ಕೇರಳ ಕಡೆಯಿಂದ ಬಂದ ಕೆಎ 12 ಬಿ 4623 ನೋಂದಣಿಯ ಸರಕು ಸಾಗಣೆಯ ವಾಹನ ತಡೆದು, ಪರಿಶೀಲನೆ ನಡೆಸಲಾಯಿತು. ವಾಹನ ಚಾಲಕ ಸಿದ್ದಾಪುರ ಬಳಿಯ ನೆಲ್ಯಹುದಿಕೇರಿಯ ಜಂಶೀರ್ ತೋರಿಸಿದ ವರದಿ ಪರಿಶೀಲಿಸಿ, ಅದರ ಕ್ಯೂಆರ್ ಕೋಡ್ ಸ್ಕ್ಯಾನಿಂಗ್ ಮಾಡಿದಾಗ ವರದಿ ನಕಲಿ ಎಂಬುದು ದೃಢಪಟ್ಟಿತ್ತು’ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ ತಿಳಿಸಿದ್ದಾರೆ.