<p>ಮಡಿಕೇರಿ: ಇಂದು ಕೃತಕ ಬುದ್ಧಿಮತ್ತೆ ಮಾಧ್ಯಮ ಕ್ಷೇತ್ರವನ್ನೂ ಪ್ರವೇಶಿಸಿದ್ದು, ಇದರಿಂದ ಅನೇಕ ಅನುಕೂಲಗಳು ಇದ್ದಾಗ್ಯೂ ಉದ್ಯೋಗಕ್ಕೆ ಕುತ್ತು ತರುವ ಸಾಧ್ಯತೆ ಇದೆ. ಹಾಗಾಗಿ, ಈ ಬಗ್ಗೆ ಅವಲೋಕನಗಳು ನಡೆಯಬೇಕಿದೆ ಎಂದು ಹಿರಿಯ ಪತ್ರಿಕೋದ್ಯಮಿ ಜಿ.ರಾಜೇಂದ್ರ ಅಭಿಪ್ರಾಯಪಟ್ಟರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕೊಡಗು ವಿಶ್ವವಿದ್ಯಾನಿಲಯ ಹಾಗೂ ಸ್ಥಳೀಯ ಪತ್ರಿಕಾ ಸಂಘಟನೆಗಳ ಸಹಕಾರದಲ್ಲಿ ನಗರದ ಗಾಂಧಿ ಭವನದಲ್ಲಿ ಗುರುವಾರ ನಡೆದ ‘ಪತ್ರಿಕಾ ದಿನಾಚರಣೆ’ಯಲ್ಲಿ ಅವರು ಮಾತನಾಡಿದರು.</p>.<p>ಸುದ್ದಿ ಸಂಪಾದನೆ, ವಿಶ್ಲೇಷಣೆ, ವಿಮರ್ಶೆ ಹೀಗೆ ವಿವಿಧ ರೀತಿಯಲ್ಲಿ ಅವಲೋಕನ ಮಾಡುವಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಉಪಯುಕ್ತವಾಗಿದ್ದರೂ, ಉದ್ಯೋಗಕ್ಕೆ ಕುತ್ತು ತರುವ ಸಾಧ್ಯತೆ ಇದೆ ಎಂದರು.</p>.<p>ಒತ್ತಡದ ಬದುಕಿನಿಂದ ಭಾಷಾ ಪ್ರಯೋಗಗಳು ಬದಲಾಗುತ್ತಿವೆ. ಆದ್ದರಿಂದ ಎಚ್ಚರ ವಹಿಸಿ ಕಾರ್ಯ ನಿರ್ವಹಿಸಬೇಕಿದೆ. ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುವ ಪ್ರತಿಯೊಬ್ಬರೂ ವಿಶ್ವಾಸಾರ್ಹತೆಯನ್ನು ಕಾಪಾಡಿಕೊಂಡು ಬದ್ಧತೆಯನ್ನು ಉಳಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.</p>.<p>ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, ‘ಈ ಕಾರ್ಯಕ್ರಮವನ್ನು ಸರ್ಕಾರ ಸುತ್ತೋಲೆಯ ಪ್ರಕಾರ ಆಯೋಜಿಸಲಾಗಿದೆ. ಜಿಲ್ಲೆಯ ಎಲ್ಲ ಪತ್ರಿಕಾ ಸಂಘಟನೆಗಳಿಗೆ ಆಹ್ವಾನ ನೀಡಲಾಗಿದೆ’ ಎಂದು ಹೇಳಿದರು.</p>.<p>ಮುಂಗಾರು ಸಂದರ್ಭದಲ್ಲಿ ಜನ ಜಾನುವಾರು ರಕ್ಷಣೆಗೆ ಹೆಚ್ಚಿನ ಕಾಳಜಿ ವಹಿಸಲಾಗಿತ್ತು. ಹಾಗೆಯೇ ಆಸ್ತಿ ಪಾಸ್ತಿ ರಕ್ಷಣೆಗೆ ಹೆಚ್ಚಿನ ಜಾಗೃತಿ ವಹಿಸಲಾಯಿತು.</p>.<p>ಕೊಡಗು ಪತ್ರಿಕಾ ಭವನ ಸ್ಥಾಪಕ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ‘ಪತ್ರಕರ್ತರೆಲ್ಲರೂ ಸೋದರರು. ಸೋದರ ಮನೋಭಾವದಿಂದ ಕೆಲಸ ಮಾಡಬೇಕು’ ಎಂದು ಪ್ರತಿಪಾದಿಸಿದರು.</p>.<p>ಪತ್ರಕರ್ತರು ಯಾವಾಗಲೂ ಸಮಾಜ ಕಟ್ಟುವ ನೆಲೆಯ ಪತ್ರಕರ್ತರಾಗಬೇಕೇ ಹೊರತು ವೈಯಕ್ತಿಕ ನೆಲೆಯ ವಿಚಾರಗಳನ್ನೇ ಪ್ರಧಾನವಾಗಿಟ್ಟುಕೊಂಡ ಪತ್ರಕರ್ತರಾಗಬಾರದು ಎಂದು ಹೇಳಿದರು.</p>.<p>ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೋರನ ಸರಸ್ವತಿ ಮಾತನಾಡಿ, ‘ಪ್ರಜೆಗಳು ಮತ್ತು ಪ್ರಭುಗಳ ನಡುವೆ ಸಮನ್ವಯತೆ ಕಾಯುವಲ್ಲಿ ಮಾಧ್ಯಮಗಳ ಪಾತ್ರ ಪ್ರಮುಖವಾಗಿದೆ’ ಎಂದರು.</p>.<p>ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಗ್ರೀಷ್ಮಾ (ಪ್ರಥಮ), ಭವಿತಾ (ದ್ವಿತೀಯ) ಕಿಶನ್ಕುಮಾರ್ (ತೃತೀಯ) ಅವರಿಗೆ ನಗದು ಬಹುಮಾನ ವಿತರಿಸಲಾಯಿತು.</p>.<p>ಎಫ್ಎಂಸಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು, ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.</p>.<p>ರೇವತಿ ರಮೇಶ್, ಕಡ್ಲೇರ ತುಳಸಿ ಮೋಹನ್, ಚೊಕ್ಕಾಡಿ ಪ್ರೇಮ ರಾಘವಯ್ಯ, ವೀಣಾಕ್ಷಿ ನಾಡಗೀತೆ ಹಾಡಿದರು.</p>.<p>ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಚಿ.ನಾ.ಸೋಮೇಶ್, ವಾರ್ತಾಧಿಕಾರಿ ಚಿನ್ನಸ್ವಾಮಿ, ವಿನೋದ್ ಮೂಡಗದ್ದೆ, ಪತ್ರಕರ್ತ ಎಚ್.ಟಿ.ಅನಿಲ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಡಿಕೇರಿ: ಇಂದು ಕೃತಕ ಬುದ್ಧಿಮತ್ತೆ ಮಾಧ್ಯಮ ಕ್ಷೇತ್ರವನ್ನೂ ಪ್ರವೇಶಿಸಿದ್ದು, ಇದರಿಂದ ಅನೇಕ ಅನುಕೂಲಗಳು ಇದ್ದಾಗ್ಯೂ ಉದ್ಯೋಗಕ್ಕೆ ಕುತ್ತು ತರುವ ಸಾಧ್ಯತೆ ಇದೆ. ಹಾಗಾಗಿ, ಈ ಬಗ್ಗೆ ಅವಲೋಕನಗಳು ನಡೆಯಬೇಕಿದೆ ಎಂದು ಹಿರಿಯ ಪತ್ರಿಕೋದ್ಯಮಿ ಜಿ.ರಾಜೇಂದ್ರ ಅಭಿಪ್ರಾಯಪಟ್ಟರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕೊಡಗು ವಿಶ್ವವಿದ್ಯಾನಿಲಯ ಹಾಗೂ ಸ್ಥಳೀಯ ಪತ್ರಿಕಾ ಸಂಘಟನೆಗಳ ಸಹಕಾರದಲ್ಲಿ ನಗರದ ಗಾಂಧಿ ಭವನದಲ್ಲಿ ಗುರುವಾರ ನಡೆದ ‘ಪತ್ರಿಕಾ ದಿನಾಚರಣೆ’ಯಲ್ಲಿ ಅವರು ಮಾತನಾಡಿದರು.</p>.<p>ಸುದ್ದಿ ಸಂಪಾದನೆ, ವಿಶ್ಲೇಷಣೆ, ವಿಮರ್ಶೆ ಹೀಗೆ ವಿವಿಧ ರೀತಿಯಲ್ಲಿ ಅವಲೋಕನ ಮಾಡುವಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಉಪಯುಕ್ತವಾಗಿದ್ದರೂ, ಉದ್ಯೋಗಕ್ಕೆ ಕುತ್ತು ತರುವ ಸಾಧ್ಯತೆ ಇದೆ ಎಂದರು.</p>.<p>ಒತ್ತಡದ ಬದುಕಿನಿಂದ ಭಾಷಾ ಪ್ರಯೋಗಗಳು ಬದಲಾಗುತ್ತಿವೆ. ಆದ್ದರಿಂದ ಎಚ್ಚರ ವಹಿಸಿ ಕಾರ್ಯ ನಿರ್ವಹಿಸಬೇಕಿದೆ. ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುವ ಪ್ರತಿಯೊಬ್ಬರೂ ವಿಶ್ವಾಸಾರ್ಹತೆಯನ್ನು ಕಾಪಾಡಿಕೊಂಡು ಬದ್ಧತೆಯನ್ನು ಉಳಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.</p>.<p>ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, ‘ಈ ಕಾರ್ಯಕ್ರಮವನ್ನು ಸರ್ಕಾರ ಸುತ್ತೋಲೆಯ ಪ್ರಕಾರ ಆಯೋಜಿಸಲಾಗಿದೆ. ಜಿಲ್ಲೆಯ ಎಲ್ಲ ಪತ್ರಿಕಾ ಸಂಘಟನೆಗಳಿಗೆ ಆಹ್ವಾನ ನೀಡಲಾಗಿದೆ’ ಎಂದು ಹೇಳಿದರು.</p>.<p>ಮುಂಗಾರು ಸಂದರ್ಭದಲ್ಲಿ ಜನ ಜಾನುವಾರು ರಕ್ಷಣೆಗೆ ಹೆಚ್ಚಿನ ಕಾಳಜಿ ವಹಿಸಲಾಗಿತ್ತು. ಹಾಗೆಯೇ ಆಸ್ತಿ ಪಾಸ್ತಿ ರಕ್ಷಣೆಗೆ ಹೆಚ್ಚಿನ ಜಾಗೃತಿ ವಹಿಸಲಾಯಿತು.</p>.<p>ಕೊಡಗು ಪತ್ರಿಕಾ ಭವನ ಸ್ಥಾಪಕ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ‘ಪತ್ರಕರ್ತರೆಲ್ಲರೂ ಸೋದರರು. ಸೋದರ ಮನೋಭಾವದಿಂದ ಕೆಲಸ ಮಾಡಬೇಕು’ ಎಂದು ಪ್ರತಿಪಾದಿಸಿದರು.</p>.<p>ಪತ್ರಕರ್ತರು ಯಾವಾಗಲೂ ಸಮಾಜ ಕಟ್ಟುವ ನೆಲೆಯ ಪತ್ರಕರ್ತರಾಗಬೇಕೇ ಹೊರತು ವೈಯಕ್ತಿಕ ನೆಲೆಯ ವಿಚಾರಗಳನ್ನೇ ಪ್ರಧಾನವಾಗಿಟ್ಟುಕೊಂಡ ಪತ್ರಕರ್ತರಾಗಬಾರದು ಎಂದು ಹೇಳಿದರು.</p>.<p>ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೋರನ ಸರಸ್ವತಿ ಮಾತನಾಡಿ, ‘ಪ್ರಜೆಗಳು ಮತ್ತು ಪ್ರಭುಗಳ ನಡುವೆ ಸಮನ್ವಯತೆ ಕಾಯುವಲ್ಲಿ ಮಾಧ್ಯಮಗಳ ಪಾತ್ರ ಪ್ರಮುಖವಾಗಿದೆ’ ಎಂದರು.</p>.<p>ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಗ್ರೀಷ್ಮಾ (ಪ್ರಥಮ), ಭವಿತಾ (ದ್ವಿತೀಯ) ಕಿಶನ್ಕುಮಾರ್ (ತೃತೀಯ) ಅವರಿಗೆ ನಗದು ಬಹುಮಾನ ವಿತರಿಸಲಾಯಿತು.</p>.<p>ಎಫ್ಎಂಸಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು, ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.</p>.<p>ರೇವತಿ ರಮೇಶ್, ಕಡ್ಲೇರ ತುಳಸಿ ಮೋಹನ್, ಚೊಕ್ಕಾಡಿ ಪ್ರೇಮ ರಾಘವಯ್ಯ, ವೀಣಾಕ್ಷಿ ನಾಡಗೀತೆ ಹಾಡಿದರು.</p>.<p>ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಚಿ.ನಾ.ಸೋಮೇಶ್, ವಾರ್ತಾಧಿಕಾರಿ ಚಿನ್ನಸ್ವಾಮಿ, ವಿನೋದ್ ಮೂಡಗದ್ದೆ, ಪತ್ರಕರ್ತ ಎಚ್.ಟಿ.ಅನಿಲ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>