<p><strong>ಮಡಿಕೇರಿ:</strong> ಜೆಡಿಎಸ್ ಚಿಹ್ನೆ ಬದಲಾವಣೆ ಅವರವರ ವಿವೇಚನೆಗೆ ಬಿಟ್ಟ ವಿಚಾರ. ಆದರೂ, ಚಿಹ್ನೆ ಬದಲಾಗುತ್ತಿದೆ ಎಂದರೆ ರೈತರಿಂದ ದೂರ ಹೋಗುತ್ತಿದ್ದಾರೆ ಎಂದಾಗಿರಬಹುದು ಎಂದು ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಇಲ್ಲಿ ಭಾನುವಾರ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.</p>.<p>‘ಎಚ್.ಡಿ.ಕುಮಾರಸ್ವಾಮಿ ಅವರು ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ’ (ನರೇಗಾ) ಬದಲಾವಣೆ ಕುರಿತು ಬಹಿರಂಗ ಚರ್ಚೆಗೆ ಆಹ್ವಾನಿಸಿದ್ದಾರೆ. ನಾವೂ ಚರ್ಚೆಗೆ ಸಿದ್ಧ’ ಎಂದರು.</p>.<p>ಮಹಾತ್ಮ ಗಾಂಧೀಜಿ ಅವರ ಕೊಡುಗೆಯನ್ನು ಮುಚ್ಚಿಹಾಕುವ ಪ್ರಯತ್ನದ ಮೊದಲ ಹೆಜ್ಜೆಯೇ ಈ ಹೆಸರು ಬದಲಾವಣೆ. ಯೋಜನೆ ಮಾರ್ಪಾಡು ಮಾಡುವ ಮೂಲಕ ಗ್ರಾಮೀಣ ಜನರ ಬದುಕಿಗೆ ಕೇಂದ್ರ ದೊಡ್ಡ ಪೆಟ್ಟನ್ನು ಕೊಟ್ಟಿದೆ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಧ್ವೇಷ ಭಾಷಣ ಮಸೂದೆಯನ್ನು ಬಿಜೆಪಿಯವರು ವಿರೋಧ ಮಾಡುತ್ತಿರುವುದಾದರೂ ಏಕೆ? ದ್ವೇಷ ಭಾಷಣ ಮಾಡುವುದಕ್ಕಾಗಿಯಾ? ಎಂದೂ ಪ್ರಶ್ನಿಸಿದರು.</p>.<p>ವಿರೋಧ ಪಕ್ಷದಲ್ಲಿ ನಾಲ್ಕರಿಂದ ಐದು ಗುಂಪುಗಳಿವೆ. ಇವರಿಗೆ ವಿಪಕ್ಷದಲ್ಲಿ ಕೂರುವ ಅರ್ಹತೆಯೇ ಇಲ್ಲ ಎಂದರು.</p>.<p>ಕೇರಳ ಸರ್ಕಾರದ ಕಡ್ಡಾಯ ಮಲಯಾಳಂ ವಿಚಾರಕ್ಕೆ ಸಂಬಂಧಿಸಿ ಬಿಜೆಪಿಯವರು ಹೇಳುವಂತೆ ವೇಣುಗೋಪಾಲ್ ಮಧ್ಯಪ್ರವೇಶಿಸಲು ಕೇರಳದಲ್ಲಿ ಕಾಂಗ್ರೆಸ್ ಸರ್ಕಾರ ಇದೆಯೇ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಜೆಡಿಎಸ್ ಚಿಹ್ನೆ ಬದಲಾವಣೆ ಅವರವರ ವಿವೇಚನೆಗೆ ಬಿಟ್ಟ ವಿಚಾರ. ಆದರೂ, ಚಿಹ್ನೆ ಬದಲಾಗುತ್ತಿದೆ ಎಂದರೆ ರೈತರಿಂದ ದೂರ ಹೋಗುತ್ತಿದ್ದಾರೆ ಎಂದಾಗಿರಬಹುದು ಎಂದು ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಇಲ್ಲಿ ಭಾನುವಾರ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.</p>.<p>‘ಎಚ್.ಡಿ.ಕುಮಾರಸ್ವಾಮಿ ಅವರು ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ’ (ನರೇಗಾ) ಬದಲಾವಣೆ ಕುರಿತು ಬಹಿರಂಗ ಚರ್ಚೆಗೆ ಆಹ್ವಾನಿಸಿದ್ದಾರೆ. ನಾವೂ ಚರ್ಚೆಗೆ ಸಿದ್ಧ’ ಎಂದರು.</p>.<p>ಮಹಾತ್ಮ ಗಾಂಧೀಜಿ ಅವರ ಕೊಡುಗೆಯನ್ನು ಮುಚ್ಚಿಹಾಕುವ ಪ್ರಯತ್ನದ ಮೊದಲ ಹೆಜ್ಜೆಯೇ ಈ ಹೆಸರು ಬದಲಾವಣೆ. ಯೋಜನೆ ಮಾರ್ಪಾಡು ಮಾಡುವ ಮೂಲಕ ಗ್ರಾಮೀಣ ಜನರ ಬದುಕಿಗೆ ಕೇಂದ್ರ ದೊಡ್ಡ ಪೆಟ್ಟನ್ನು ಕೊಟ್ಟಿದೆ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಧ್ವೇಷ ಭಾಷಣ ಮಸೂದೆಯನ್ನು ಬಿಜೆಪಿಯವರು ವಿರೋಧ ಮಾಡುತ್ತಿರುವುದಾದರೂ ಏಕೆ? ದ್ವೇಷ ಭಾಷಣ ಮಾಡುವುದಕ್ಕಾಗಿಯಾ? ಎಂದೂ ಪ್ರಶ್ನಿಸಿದರು.</p>.<p>ವಿರೋಧ ಪಕ್ಷದಲ್ಲಿ ನಾಲ್ಕರಿಂದ ಐದು ಗುಂಪುಗಳಿವೆ. ಇವರಿಗೆ ವಿಪಕ್ಷದಲ್ಲಿ ಕೂರುವ ಅರ್ಹತೆಯೇ ಇಲ್ಲ ಎಂದರು.</p>.<p>ಕೇರಳ ಸರ್ಕಾರದ ಕಡ್ಡಾಯ ಮಲಯಾಳಂ ವಿಚಾರಕ್ಕೆ ಸಂಬಂಧಿಸಿ ಬಿಜೆಪಿಯವರು ಹೇಳುವಂತೆ ವೇಣುಗೋಪಾಲ್ ಮಧ್ಯಪ್ರವೇಶಿಸಲು ಕೇರಳದಲ್ಲಿ ಕಾಂಗ್ರೆಸ್ ಸರ್ಕಾರ ಇದೆಯೇ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>