ಪಟ್ಟಣದ ಪ್ರೆಸ್ ಕ್ಲಬ್ನಲ್ಲಿ ಗುರುವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಕಾಳಚಂಡ ಅಪ್ಪಣ್ಣ ಜನರಿಂದ ಚುನಾಯಿಸಲ್ಪಟ್ಟ ಜನಪ್ರತಿನಿಧಿ. ಜನಪ್ರತಿನಿಧಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಾಡಹಗಲೆ ನಡುರಸ್ತೆಯಲ್ಲಿ ಹಲ್ಲೆ ನಡೆಸುತ್ತಾರೆ ಎಂದರೆ ಜನಸಾಮಾನ್ಯರ ಗತಿ ಏನು? ಕ್ಯಾಂಟೀನ್ ಜಾಗದ ಸಮಸ್ಯೆಯ ಕುರಿತು ಕಾನೂನು ರೀತಿಯಲ್ಲಿ ವ್ಯವಹರಿಸಬೇಕೆ ಹೊರತು ಕಾನೂನನ್ನು ಕೈಗೆತ್ತಿಕೊಳ್ಳುವುದು ಸರಿಯಾದ ಕ್ರಮವಲ್ಲ’ ಎಂದರು.