<p><strong>ಮಡಿಕೇರಿ:</strong> ಕೊಡಗು ಪತ್ರಿಕಾ ಭವನ ಟ್ರಸ್ಟ್ ವತಿಯಿಂದ 32 ಮಕ್ಕಳಿಗೆ ತಲಾ ₹ 5 ಸಾವಿರದಂತೆ ಒಟ್ಟು ₹ 1.60 ಲಕ್ಷ ನೆರವನ್ನು ‘ವಿದ್ಯಾನಿಧಿ’ಯ ರೂಪದಲ್ಲಿ ಈಚೆಗೆ ವಿತರಿಸಲಾಯಿತು.</p>.<p>ಪತ್ರಕರ್ತರ 22 ಮಕ್ಕಳು ಹಾಗೂ ನೆರವು ಬಯಸಿದ್ದ ಇತರೆ 10 ಮಕ್ಕಳಿಗೆ ಈ ನೆರವು ನೀಡಲಾಯಿತು.</p>.<p>ಈ ವೇಳೆ ಮಾತನಾಡಿದ ಹಿರಿಯ ಟ್ರಸ್ಟಿ ಟಿ.ಪಿ.ರಮೇಶ್, ‘ಮುಂಬರುವ ದಿನಗಳಲ್ಲಿ ಈ ಕಾರ್ಯವನ್ನು ಮತ್ತಷ್ಟು ವ್ಯಾಪಕವಾಗಿ ಮಾಡಲು ಉದ್ದೇಶಿಸಲಾಗಿದೆ’ ಎಂದು ಹೇಳಿದರು.</p>.<p>ಮತ್ತೊಬ್ಬ ಹಿರಿಯ ಟ್ರಸ್ಟಿ ಜಿ.ಚಿದ್ವಿಲಾಸ್ ಮಾತನಾಡಿ, ‘ವಿದ್ಯಾನಿಧಿ’ಯ ಉಪಯೋಗ ಪಡೆಯುವುದಕ್ಕೆ ಯಾವುದೇ ಜಾತಿ, ಮತ, ಧರ್ಮಗಳ ಭೇದವಿಲ್ಲ. ನಾವೆಲ್ಲ ಮನುಷ್ಯರೇ ಎನ್ನುವ ಉದಾತ್ತ ಚಿಂತನೆಯಡಿ, ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸಲು ಸಾಧ್ಯವಾದ ನೆರವನ್ನು ಒದಗಿಸುವುದು ನಮ್ಮ ಸಂಕಲ್ಪ’ ಎಂದರು.</p>.<p>ಮ್ಯಾನೇಜಿಂಗ್ ಟ್ರಸ್ಟಿ ಎಂ.ಪಿ. ಕೇಶವ ಕಾಮತ್ ಮಾತನಾಡಿ, ‘ನೆರವು ಪಡೆದವರು, ಅದನ್ನು ಸದ್ವಿನಿಯೋಗ ಪಡೆದುಕೊಳ್ಳುವುದರೊಂದಿಗೆ, ಮುಂಬರುವ ದಿನಗಳಲ್ಲಿ ತಾವು ಸಹ ಸಮಾಜಕ್ಕೆ ಕೊಡುಗೆಯನ್ನು ನೀಡಬೇಕು ಎನ್ನುವ ಮನೋಭಾವ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಎಸ್.ಜಿ.ಉಮೇಶ್, ಖಜಾಂಚಿ ಕೆ.ತಿಮ್ಮಪ್ಪ, ಟ್ರಸ್ಟಿ ಮುಲ್ಲೇಂಗಡ ಮಧೋಶ್ ಪೂವಯ್ಯ, ಹಿರಿಯ ಪತ್ರಕರ್ತರಾದ ಶ್ರೀಧರ ನೆಲ್ಲಿತ್ತಾಯ, ಎಚ್.ಟಿ.ಅನಿಲ್, ಉಷಾ ಪ್ರೀತಂ, ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ.ಮುರಳೀಧರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಕೊಡಗು ಪತ್ರಿಕಾ ಭವನ ಟ್ರಸ್ಟ್ ವತಿಯಿಂದ 32 ಮಕ್ಕಳಿಗೆ ತಲಾ ₹ 5 ಸಾವಿರದಂತೆ ಒಟ್ಟು ₹ 1.60 ಲಕ್ಷ ನೆರವನ್ನು ‘ವಿದ್ಯಾನಿಧಿ’ಯ ರೂಪದಲ್ಲಿ ಈಚೆಗೆ ವಿತರಿಸಲಾಯಿತು.</p>.<p>ಪತ್ರಕರ್ತರ 22 ಮಕ್ಕಳು ಹಾಗೂ ನೆರವು ಬಯಸಿದ್ದ ಇತರೆ 10 ಮಕ್ಕಳಿಗೆ ಈ ನೆರವು ನೀಡಲಾಯಿತು.</p>.<p>ಈ ವೇಳೆ ಮಾತನಾಡಿದ ಹಿರಿಯ ಟ್ರಸ್ಟಿ ಟಿ.ಪಿ.ರಮೇಶ್, ‘ಮುಂಬರುವ ದಿನಗಳಲ್ಲಿ ಈ ಕಾರ್ಯವನ್ನು ಮತ್ತಷ್ಟು ವ್ಯಾಪಕವಾಗಿ ಮಾಡಲು ಉದ್ದೇಶಿಸಲಾಗಿದೆ’ ಎಂದು ಹೇಳಿದರು.</p>.<p>ಮತ್ತೊಬ್ಬ ಹಿರಿಯ ಟ್ರಸ್ಟಿ ಜಿ.ಚಿದ್ವಿಲಾಸ್ ಮಾತನಾಡಿ, ‘ವಿದ್ಯಾನಿಧಿ’ಯ ಉಪಯೋಗ ಪಡೆಯುವುದಕ್ಕೆ ಯಾವುದೇ ಜಾತಿ, ಮತ, ಧರ್ಮಗಳ ಭೇದವಿಲ್ಲ. ನಾವೆಲ್ಲ ಮನುಷ್ಯರೇ ಎನ್ನುವ ಉದಾತ್ತ ಚಿಂತನೆಯಡಿ, ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸಲು ಸಾಧ್ಯವಾದ ನೆರವನ್ನು ಒದಗಿಸುವುದು ನಮ್ಮ ಸಂಕಲ್ಪ’ ಎಂದರು.</p>.<p>ಮ್ಯಾನೇಜಿಂಗ್ ಟ್ರಸ್ಟಿ ಎಂ.ಪಿ. ಕೇಶವ ಕಾಮತ್ ಮಾತನಾಡಿ, ‘ನೆರವು ಪಡೆದವರು, ಅದನ್ನು ಸದ್ವಿನಿಯೋಗ ಪಡೆದುಕೊಳ್ಳುವುದರೊಂದಿಗೆ, ಮುಂಬರುವ ದಿನಗಳಲ್ಲಿ ತಾವು ಸಹ ಸಮಾಜಕ್ಕೆ ಕೊಡುಗೆಯನ್ನು ನೀಡಬೇಕು ಎನ್ನುವ ಮನೋಭಾವ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಎಸ್.ಜಿ.ಉಮೇಶ್, ಖಜಾಂಚಿ ಕೆ.ತಿಮ್ಮಪ್ಪ, ಟ್ರಸ್ಟಿ ಮುಲ್ಲೇಂಗಡ ಮಧೋಶ್ ಪೂವಯ್ಯ, ಹಿರಿಯ ಪತ್ರಕರ್ತರಾದ ಶ್ರೀಧರ ನೆಲ್ಲಿತ್ತಾಯ, ಎಚ್.ಟಿ.ಅನಿಲ್, ಉಷಾ ಪ್ರೀತಂ, ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ.ಮುರಳೀಧರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>