<p><strong>ಸೋಮವಾರಪೇಟೆ:</strong> ‘ಇಲ್ಲಿನ ವಾಹನ ಚಾಲಕರು ಮತ್ತು ಮೋಟಾರು ಕೆಲಸಗಾರರ ಸಂಘದ ವತಿಯಿಂದ ಅದ್ದೂರಿಯಾಗಿ ಆಯುಧ ಪೂಜೆ ಅ.11ರಂದು ನಡೆಸಲಾಗುವುದು’ ಎಂದು ಸಂಘದ ಅಧ್ಯಕ್ಷ ಬಾಲಕೃಷ್ಣ ಪೂಜಾರಿ ತಿಳಿಸಿದರು.</p>.<p>ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಂದು ಬೆಳಿಗ್ಗೆ 7 ಗಂಟೆಗೆ ಸಂಘದ ಕಚೇರಿಯಲ್ಲಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿ, ನಂತರ ಪಟ್ಟಣದ ಎಲ್ಲಾ ಪ್ರತಿಮೆಗಳಿಗೆ ಮಾಲಾರ್ಪಣೆ, 8-30ಕ್ಕೆ ಆಸ್ಪತ್ರೆಯ ಹಣ್ಣು ಹಂಪಲು ವಿತರಣೆ ಮಾಡಲಾಗುವುದು. 9 ಗಂಟೆಗೆ ಕಾರ್ಯಕ್ರಮವನ್ನು ಖಾಸಗಿ ಬಸ್ ನಿಲ್ದಾಣದ ವೇದಿಕೆಯಲ್ಲಿ ಸಂಸದ ಯುದುವೀರ್ ಒಡೆಯರ್, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಬಿಜೆಪಿ ಮುಖಂಡ ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದಾರೆ. ಈ ಸಂದರ್ಭ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್, ಪ್ರಮುಖರಾದ ಕೆ.ಪಿ. ಚಂದ್ರಕಲಾ, ಎಸ್.ಜಿ. ಮೇದಪ್ಪ, ಆಯಾತಾನ್ ರೆಸಾರ್ಟ್ ಟೋನಿ ವಿನ್ಸೆಂಟ್, ಬಿ.ಜೆ. ದೀಪಕ್,ಕೆ.ಎಂ. ಲೋಕೇಶ್, ತಹಶೀಲ್ದಾರ್ ಶ್ರೀಧರ್ ಕಂಕನವಾಡಿ ಉಪಸ್ಥಿತರಿರುವರು. 10-30ಕ್ಕೆ ಸಾರ್ವಜನಿಕರಿಗೆ ಜಿಲ್ಲಾ ಮಟ್ಟದ ನೃತ್ಯ ಸ್ಪರ್ಧೆ ನಡೆಯುವುದು. ಮಧ್ಯಾಹ್ನ ಸಾರ್ವಜನಿಕರಿಗೆ ಅನ್ನದಾನ, ಸಂಜೆ 4-30ಕ್ಕೆ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ ಎಂದರು.</p>.<p>ಸಂಜೆ 6ಕ್ಕೆ ನಡೆಯುವ ಸಮಾರೋಪ ಸಮಾರಂಭವನ್ನು ಶಾಸಕ ಡಾ.ಮಂತರ್ ಗೌಡ ಹಾಗೂ ಹುಣಸೂರು ಕ್ಷೇತ್ರದ ಶಾಸಕ ಹರೀಶ್ ಉದ್ಘಾಟಿಸಲಿದ್ದಾರೆ. ಈ ಸಂದರ್ಭ ರಾಜ್ಯ ಒಕ್ಕಲಿಗರ ಸಂಘದ ಕಾರ್ಯಾಧ್ಯಕ್ಷ ಹರಪಳ್ಳಿ ರವೀಂದ್ರ, ಮೈಸೂರಿನ ಗೋಪಾಲಗೌಡ ಆಸ್ಪತ್ರೆ ಡಾ.ಶುಶ್ರುತ್ ಗೌಡ, ಉದ್ಯಮಿಗಳಾದ ಜಯರಾಮ್, ಸತೀಶ್, ಮಿಥುನ್ ಹಾನಗಲ್ಲು ಪಾಲ್ಗೊಳ್ಳಲಿದ್ದಾರೆ. ನಂತರ 8 ಗಂಟೆಗೆ ಬೆಂಗಳೂರಿನ ರಿಶು ಪುರುಷೋತ್ತಮ್ ತಂಡದವರಿಂದ ರಸಮಂಜರಿ ಕಾರ್ಯಕ್ರಮ ನಡೆಯುವುದು.</p>.<p>ಕಾರ್ಯಕ್ರಮದ ಪ್ರಯುಕ್ತ ಸಂಘದ ಹಿರಿಯ ಸದಸ್ಯರಾದ ವಿದ್ಯಾ ನರ್ಸಿಂಗ್ ಇನ್ ಸ್ಟಿಟ್ಯೂಟ್ ಕೆ.ಇ.ಸುಲೈಮಾನ್, ಸ್ವಾಮಿ ಟ್ರಾವೆಲ್ಸ್ ರಾಮಚಂದ್ರ, ಸೆಸ್ಕ್ ಲೈನ್ ಮೆನ್ ಸದಾಶಿವು ಜಾದವ್, ರಾಷ್ಟ್ರೀಯ ಜೂನಿಯರ್ ಹಾಕಿ ತಂಡದ ತರಬೇತುದಾರ ಜನಾರ್ಧನ್ ಅವರನ್ನು ಸನ್ಮಾನಿಸಲಾಗುವುದು.</p>.<p>ಆಯುಧಾ ಪೂಜಾ ಕಾರ್ಯಕ್ರಮದ ಪ್ರಯುಕ್ತ ಸಂಘದ ಸದಸ್ಯರಿಗೆ ಸೆ.29ರಂದು ವಿವಿಧ ಆಟೋಟ ಸ್ಪರ್ಧೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ 9844461134, 9740508181 ಸಂಪರ್ಕಿಸಲು ಮನವಿ ಮಾಡಿದ್ದಾರೆ.</p>.<p>ಗೋಷ್ಟಿಯಲ್ಲಿ ಸಂಘದ ಉಪಾಧ್ಯಕ್ಷ ಬಿ.ಎನ್. ರಂಗಸ್ವಾಮಿ, ಕಾರ್ಯದರ್ಶಿ ಮಣಿ ಕುಶಾಲಪ್ಪ, ಸಹ ಕಾರ್ಯದರ್ಶಿ ಎಂ.ಎಂ. ಕಿರಣ್, ಖಜಾಂಚಿ ಡೋಮಿನಿಕ್ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೋಮವಾರಪೇಟೆ:</strong> ‘ಇಲ್ಲಿನ ವಾಹನ ಚಾಲಕರು ಮತ್ತು ಮೋಟಾರು ಕೆಲಸಗಾರರ ಸಂಘದ ವತಿಯಿಂದ ಅದ್ದೂರಿಯಾಗಿ ಆಯುಧ ಪೂಜೆ ಅ.11ರಂದು ನಡೆಸಲಾಗುವುದು’ ಎಂದು ಸಂಘದ ಅಧ್ಯಕ್ಷ ಬಾಲಕೃಷ್ಣ ಪೂಜಾರಿ ತಿಳಿಸಿದರು.</p>.<p>ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಂದು ಬೆಳಿಗ್ಗೆ 7 ಗಂಟೆಗೆ ಸಂಘದ ಕಚೇರಿಯಲ್ಲಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿ, ನಂತರ ಪಟ್ಟಣದ ಎಲ್ಲಾ ಪ್ರತಿಮೆಗಳಿಗೆ ಮಾಲಾರ್ಪಣೆ, 8-30ಕ್ಕೆ ಆಸ್ಪತ್ರೆಯ ಹಣ್ಣು ಹಂಪಲು ವಿತರಣೆ ಮಾಡಲಾಗುವುದು. 9 ಗಂಟೆಗೆ ಕಾರ್ಯಕ್ರಮವನ್ನು ಖಾಸಗಿ ಬಸ್ ನಿಲ್ದಾಣದ ವೇದಿಕೆಯಲ್ಲಿ ಸಂಸದ ಯುದುವೀರ್ ಒಡೆಯರ್, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಬಿಜೆಪಿ ಮುಖಂಡ ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದಾರೆ. ಈ ಸಂದರ್ಭ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್, ಪ್ರಮುಖರಾದ ಕೆ.ಪಿ. ಚಂದ್ರಕಲಾ, ಎಸ್.ಜಿ. ಮೇದಪ್ಪ, ಆಯಾತಾನ್ ರೆಸಾರ್ಟ್ ಟೋನಿ ವಿನ್ಸೆಂಟ್, ಬಿ.ಜೆ. ದೀಪಕ್,ಕೆ.ಎಂ. ಲೋಕೇಶ್, ತಹಶೀಲ್ದಾರ್ ಶ್ರೀಧರ್ ಕಂಕನವಾಡಿ ಉಪಸ್ಥಿತರಿರುವರು. 10-30ಕ್ಕೆ ಸಾರ್ವಜನಿಕರಿಗೆ ಜಿಲ್ಲಾ ಮಟ್ಟದ ನೃತ್ಯ ಸ್ಪರ್ಧೆ ನಡೆಯುವುದು. ಮಧ್ಯಾಹ್ನ ಸಾರ್ವಜನಿಕರಿಗೆ ಅನ್ನದಾನ, ಸಂಜೆ 4-30ಕ್ಕೆ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ ಎಂದರು.</p>.<p>ಸಂಜೆ 6ಕ್ಕೆ ನಡೆಯುವ ಸಮಾರೋಪ ಸಮಾರಂಭವನ್ನು ಶಾಸಕ ಡಾ.ಮಂತರ್ ಗೌಡ ಹಾಗೂ ಹುಣಸೂರು ಕ್ಷೇತ್ರದ ಶಾಸಕ ಹರೀಶ್ ಉದ್ಘಾಟಿಸಲಿದ್ದಾರೆ. ಈ ಸಂದರ್ಭ ರಾಜ್ಯ ಒಕ್ಕಲಿಗರ ಸಂಘದ ಕಾರ್ಯಾಧ್ಯಕ್ಷ ಹರಪಳ್ಳಿ ರವೀಂದ್ರ, ಮೈಸೂರಿನ ಗೋಪಾಲಗೌಡ ಆಸ್ಪತ್ರೆ ಡಾ.ಶುಶ್ರುತ್ ಗೌಡ, ಉದ್ಯಮಿಗಳಾದ ಜಯರಾಮ್, ಸತೀಶ್, ಮಿಥುನ್ ಹಾನಗಲ್ಲು ಪಾಲ್ಗೊಳ್ಳಲಿದ್ದಾರೆ. ನಂತರ 8 ಗಂಟೆಗೆ ಬೆಂಗಳೂರಿನ ರಿಶು ಪುರುಷೋತ್ತಮ್ ತಂಡದವರಿಂದ ರಸಮಂಜರಿ ಕಾರ್ಯಕ್ರಮ ನಡೆಯುವುದು.</p>.<p>ಕಾರ್ಯಕ್ರಮದ ಪ್ರಯುಕ್ತ ಸಂಘದ ಹಿರಿಯ ಸದಸ್ಯರಾದ ವಿದ್ಯಾ ನರ್ಸಿಂಗ್ ಇನ್ ಸ್ಟಿಟ್ಯೂಟ್ ಕೆ.ಇ.ಸುಲೈಮಾನ್, ಸ್ವಾಮಿ ಟ್ರಾವೆಲ್ಸ್ ರಾಮಚಂದ್ರ, ಸೆಸ್ಕ್ ಲೈನ್ ಮೆನ್ ಸದಾಶಿವು ಜಾದವ್, ರಾಷ್ಟ್ರೀಯ ಜೂನಿಯರ್ ಹಾಕಿ ತಂಡದ ತರಬೇತುದಾರ ಜನಾರ್ಧನ್ ಅವರನ್ನು ಸನ್ಮಾನಿಸಲಾಗುವುದು.</p>.<p>ಆಯುಧಾ ಪೂಜಾ ಕಾರ್ಯಕ್ರಮದ ಪ್ರಯುಕ್ತ ಸಂಘದ ಸದಸ್ಯರಿಗೆ ಸೆ.29ರಂದು ವಿವಿಧ ಆಟೋಟ ಸ್ಪರ್ಧೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ 9844461134, 9740508181 ಸಂಪರ್ಕಿಸಲು ಮನವಿ ಮಾಡಿದ್ದಾರೆ.</p>.<p>ಗೋಷ್ಟಿಯಲ್ಲಿ ಸಂಘದ ಉಪಾಧ್ಯಕ್ಷ ಬಿ.ಎನ್. ರಂಗಸ್ವಾಮಿ, ಕಾರ್ಯದರ್ಶಿ ಮಣಿ ಕುಶಾಲಪ್ಪ, ಸಹ ಕಾರ್ಯದರ್ಶಿ ಎಂ.ಎಂ. ಕಿರಣ್, ಖಜಾಂಚಿ ಡೋಮಿನಿಕ್ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>