<p><strong>ಮಡಿಕೇರಿ:</strong> ಗಾಂಧಿ ಭವನದ ಸಭಾಂಗಣ ಭಾನುವಾರ ಗುಲಾಬಿ ಬಣ್ಣಕ್ಕೆ ತಿರುಗಿತ್ತು. ಸಭಾಂಗಣ ಮಹಿಳೆಯರಿಂದ ಸಂಪೂರ್ಣ ತುಂಬಿತ್ತು. 13 ಮಳಿಗೆಗಳಲ್ಲಿ ಮಹಿಳೆಯರು ತಾವೇ ತಯಾರಿಸಿದ ವಸ್ತುಗಳನ್ನು ಮಾರಾಟಕ್ಕಿರಿಸಿದ್ದರು.</p>.<p>ಈ ದೃಶ್ಯಗಳು ಇಲ್ಲಿನ ಗಾಂಧಿ ಭವನದಲ್ಲಿ ಭಾನುವಾರ ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಡಿಕೇರಿ ತಾಲ್ಲೂಕು ಪಂಚಾಯಿತಿ ಸಹಯೋಗದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಕಂಡು ಬಂತು.</p>.<p>ಮುಖ್ಯ ಭಾಷಣ ಮಾಡಿದ ಲೇಖಕಿ ಸ್ಮಿತಾ ಅಮೃತರಾಜ್, ಮಹಿಳೆಯರಿಗೆ ಆರ್ಥಿಕ ಸ್ವಾತಂತ್ರ್ಯದ ಜೊತೆಗೆ ಆರ್ಥಿಕ ಜ್ಞಾನ, ನಿರ್ಧಾರ ಕೈಗೊಳ್ಳುವ ಶಕ್ತಿ ಹಾಗೂ ಸಾಮಾಜಿಕ ಬೆಂಬಲವೂ ಬೇಕು. ಆಗ ಮಾತ್ರ ಆರ್ಥಿಕ ಸ್ವಾತಂತ್ರ್ಯಕ್ಕೆ ಅರ್ಥ ಬರುತ್ತದೆ’ ಎಂದು ತಿಳಿಸಿದರು.</p>.<p>ಮಹಿಳಾ ದಿನಾಚರಣೆ ಎಂದರೆ ಅದು ಸಂಭ್ರಮಿಸಲು ಹಾಗೆ ನೀಡಿದ ದಿನವಲ್ಲ. 20ನೇ ಶತಮಾನದ ಆರಂಭದಲ್ಲಿ ಮಹಿಳಾ ಕಾರ್ಮಿಕರು ಉತ್ತಮ ವೇತನ, ಕಡಿಮೆ ಕೆಲಸದ ಅವಧಿ ಮತ್ತು ಮತದಾನದ ಹಕ್ಕಿಗಾಗಿ ನಡೆಸಿದ ಬೃಹತ್ ಹೋರಾಟಗಳ ಫಲವಾಗಿ ಈ ದಿನಾಚರಣೆ ಬಂದಿದೆ ಎಂದರು</p>.<p>ಅನಾದಿ ಕಾಲದಿಂದಲೂ ಮಹಿಳೆಯರನ್ನು ಎರಡನೇ ದರ್ಜೆಯ ನಾಗರಿಕರಂತೆ ಪರಿಗಣಿಸಿ ಕಡೆಗಣಿಸಲಾಗುತ್ತಿದೆ. ಆದರೂ ಪ್ರಸ್ತುತ ದಿನಗಳಲ್ಲಿ ಶಿಕ್ಷಣ ಹಾಗೂ ಆರ್ಥಿಕ ಸ್ವಾತಂತ್ರ್ಯದಿಂದ ಸಬಲೀಕರಣಗೊಳ್ಳುತ್ತಿರುವುದು ಶ್ಲಾಘನೀಯ ಎಂದರು.</p>.<p>ಮಹಿಳೆಯರಿಗೆ ಅಕ್ಷರದ ವಾರಸುದಾರಿಕೆ ಕೊಟ್ಟಂತ ಶ್ರೇಯಸ್ಸು ಸಾವಿತ್ರಿ ಬಾಪುಲೆ ಅವರಿಗೆ ಸಲ್ಲುತ್ತದೆ. ಮಹಿಳಾ ಸಮಾಜಕ್ಕೆ ಇದ್ದ ಧಾರ್ಮಿಕ ಕಟ್ಟುಪಾಡುಗಳ ವಿರೋಧದ ನಡುವೆ ಅಕ್ಷರವನ್ನು ಬಿತ್ತಿ ಮಹಿಳಾ ಸಬಲೀಕರಣಕ್ಕೆ ನಾಂದಿ ಹಾಡಿದವರು ಸಾವಿತ್ರಿ ಬಾಯಿಪುಲೆ ಎಂದು ಹೇಳಿದರು.</p>.<p>ಮಹಿಳೆಯರನ್ನು ಗೌರವಿಸುವ ಕಾರ್ಯ ಸಮಾಜ ಮಾಡಬೇಕಿದೆ. ಮಹಿಳೆಯರಿಗೆ ಶಿಕ್ಷಣ, ಉದ್ಯೋಗಾವಕಾಶಗಳಲ್ಲಿ ಸಮಾನವಕಾಶಗಳನ್ನು ನೀಡಬೇಕು. ಮಹಿಳೆಯರು ಸಹ ಇಂದು ವೃತ್ತಿ ಜೀವನದಲ್ಲಾಗಲೀ, ಇತರ ರಂಗಗಳಲ್ಲಾಗಲೀ ಅವಕಾಶಗಳು ಬಂದಾಗ ಕೀಳರಿಮೆಯಿಂದ ಹಿಂದೆ ಸರಿಯದೆ ಪ್ರತಿಯೊಂದನ್ನು ಸವಾಲಾಗಿ ಸ್ವೀಕರಿಸಬೇಕು ಎಂದರು.</p>.<p>ಮಡಿಕೇರಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶೇಖರ್ ಮಾತನಾಡಿ, ‘ನಮ್ಮ ದೇಶದ ಸಂಸ್ಕೃತಿಯಲ್ಲಿ ಅನಾದಿಕಾಲದಿಂದಲೂ ಮಹಿಳೆಯರಿಗೆ ಉನ್ನತ ಸ್ಥಾನಮಾನ ನೀಡಲಾಗಿದೆ. ಅದರಂತೆ ಎಲ್ಲಾ ನಾರಿಯರನ್ನು ಗೌರವದಿಂದ, ಹಕ್ಕು, ಸ್ಥಾನಮಾನ ನೀಡಿ ತೃಪ್ತಿ ಪಡಿಸಿದರೆ ಈ ದೇಶ, ರಾಜ್ಯ ಸಮೃದ್ಧಿಯಾಗುತ್ತದೆ’ ಎಂದು ಹೇಳಿದರು.</p>.<p>ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ರಾಣಿ ಮಾತನಾಡಿ, ಮಹಿಳೆಯರು ಅಬಲೆಯರಲ್ಲ, ಸಬಲೆಯರು. ಪುರುಷರಂತೆ ಮಹಿಳೆಯರು ಕೂಡ ಎಲ್ಲಾ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಮುಂದಿನ ದಿನಗಳಲ್ಲೂ ಎಲ್ಲಾ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.</p>.<p>ಮಡಿಕೇರಿ ತಾಲ್ಲೂಕಿನ 26 ಸಂಜೀವಿನ ಒಕ್ಕೂಟಗಳಿಗೆ ಗೌರವ ಸಮರ್ಪಿಸಲಾಯಿತು.</p>.<p>ಪಂಚಾಯತ್ ರಾಜ್ ಸಹಾಯಕ ನಿರ್ದೇಶಕಿ ಎಂ.ಜಿ.ಸುನಿತಾ, ಎಸ್.ಎಸ್.ಹೇಮಂತ್, ರಮ್ಯ ಮೂರ್ನಾಡು, ಚೆಂಬು ಗ್ರಾಮ ಪಂಚಾಯಿತಿ ಸಂಜೀವಿನಿ ಒಕ್ಕೂಟದ ಸದಸ್ಯೆ ರೇಖಾ, ಹೊದ್ದೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅದಿಕಾರಿ ವತ್ಸಲಾ ಕುಮಾರಿ , ಮೂಕಾಂಬಿಕ ಸಂಜೀವಿನಿ ಒಕ್ಕೂಟದ ಕನಕಾಂಬಿಕೆ ಭಾಗವಹಿಸಿದ್ದರು.</p>.<p>ಸಂಜೀವಿನಿ ಒಕ್ಕೂಟದ 13 ಮಳಿಗೆಗಳು ಅಲ್ಲಿದ್ದವು. ಅವುಗಳಲ್ಲಿ ಮಹಿಳೆಯರು ತಯಾರಿಸಿದ ಕರಕುಶಲ ವಸ್ತುಗಳು ಮತ್ತಿತರ ಉತ್ಪನ್ನಗಳು ಗಮನ ಸೆಳೆದವು.</p>.<p>ಮಹಿಳಾ ದಿನಾಚರಣೆ ಒಂದು ದಿನಕ್ಕೆ ಸಿಮೀತವಾಗಬಾರದು ಎಲ್ಲಾ ರಂಗದಲ್ಲೂ ತೊಡಗಿಕೊಂಡು ಸಮಾಜದ ಅಭಿವೃದ್ಧಿಗೆ ಮುಂದಾಗಬೇಕು ಮಂದ್ರಿರ ಮೋಹನ್ದಾಸ್ ಗ್ಯಾರಂಟಿ ಯೋಜನೆಗಳ ಸಮಿತಿಯ ಮಡಿಕೇರಿ ತಾಲ್ಲೂಕು ಅಧ್ಯಕ್ಷ.</p>.<div><blockquote>ಮಹಿಳೆಯರು ತಮ್ಮ ಜವಾಬ್ದಾರಿಯನ್ನು ಅರಿತು ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಮತ್ತು ಮಹಿಳೆಯರನ್ನು ಪ್ರತಿಯೊಬ್ಬರು ಗೌರವಿಸಬೇಕು</blockquote><span class="attribution">ಪಿ.ಕಲಾವತಿ ಮಡಿಕೇರಿ ನಗರಸಭೆ ಅಧ್ಯಕ್ಷೆ.</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಗಾಂಧಿ ಭವನದ ಸಭಾಂಗಣ ಭಾನುವಾರ ಗುಲಾಬಿ ಬಣ್ಣಕ್ಕೆ ತಿರುಗಿತ್ತು. ಸಭಾಂಗಣ ಮಹಿಳೆಯರಿಂದ ಸಂಪೂರ್ಣ ತುಂಬಿತ್ತು. 13 ಮಳಿಗೆಗಳಲ್ಲಿ ಮಹಿಳೆಯರು ತಾವೇ ತಯಾರಿಸಿದ ವಸ್ತುಗಳನ್ನು ಮಾರಾಟಕ್ಕಿರಿಸಿದ್ದರು.</p>.<p>ಈ ದೃಶ್ಯಗಳು ಇಲ್ಲಿನ ಗಾಂಧಿ ಭವನದಲ್ಲಿ ಭಾನುವಾರ ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಡಿಕೇರಿ ತಾಲ್ಲೂಕು ಪಂಚಾಯಿತಿ ಸಹಯೋಗದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಕಂಡು ಬಂತು.</p>.<p>ಮುಖ್ಯ ಭಾಷಣ ಮಾಡಿದ ಲೇಖಕಿ ಸ್ಮಿತಾ ಅಮೃತರಾಜ್, ಮಹಿಳೆಯರಿಗೆ ಆರ್ಥಿಕ ಸ್ವಾತಂತ್ರ್ಯದ ಜೊತೆಗೆ ಆರ್ಥಿಕ ಜ್ಞಾನ, ನಿರ್ಧಾರ ಕೈಗೊಳ್ಳುವ ಶಕ್ತಿ ಹಾಗೂ ಸಾಮಾಜಿಕ ಬೆಂಬಲವೂ ಬೇಕು. ಆಗ ಮಾತ್ರ ಆರ್ಥಿಕ ಸ್ವಾತಂತ್ರ್ಯಕ್ಕೆ ಅರ್ಥ ಬರುತ್ತದೆ’ ಎಂದು ತಿಳಿಸಿದರು.</p>.<p>ಮಹಿಳಾ ದಿನಾಚರಣೆ ಎಂದರೆ ಅದು ಸಂಭ್ರಮಿಸಲು ಹಾಗೆ ನೀಡಿದ ದಿನವಲ್ಲ. 20ನೇ ಶತಮಾನದ ಆರಂಭದಲ್ಲಿ ಮಹಿಳಾ ಕಾರ್ಮಿಕರು ಉತ್ತಮ ವೇತನ, ಕಡಿಮೆ ಕೆಲಸದ ಅವಧಿ ಮತ್ತು ಮತದಾನದ ಹಕ್ಕಿಗಾಗಿ ನಡೆಸಿದ ಬೃಹತ್ ಹೋರಾಟಗಳ ಫಲವಾಗಿ ಈ ದಿನಾಚರಣೆ ಬಂದಿದೆ ಎಂದರು</p>.<p>ಅನಾದಿ ಕಾಲದಿಂದಲೂ ಮಹಿಳೆಯರನ್ನು ಎರಡನೇ ದರ್ಜೆಯ ನಾಗರಿಕರಂತೆ ಪರಿಗಣಿಸಿ ಕಡೆಗಣಿಸಲಾಗುತ್ತಿದೆ. ಆದರೂ ಪ್ರಸ್ತುತ ದಿನಗಳಲ್ಲಿ ಶಿಕ್ಷಣ ಹಾಗೂ ಆರ್ಥಿಕ ಸ್ವಾತಂತ್ರ್ಯದಿಂದ ಸಬಲೀಕರಣಗೊಳ್ಳುತ್ತಿರುವುದು ಶ್ಲಾಘನೀಯ ಎಂದರು.</p>.<p>ಮಹಿಳೆಯರಿಗೆ ಅಕ್ಷರದ ವಾರಸುದಾರಿಕೆ ಕೊಟ್ಟಂತ ಶ್ರೇಯಸ್ಸು ಸಾವಿತ್ರಿ ಬಾಪುಲೆ ಅವರಿಗೆ ಸಲ್ಲುತ್ತದೆ. ಮಹಿಳಾ ಸಮಾಜಕ್ಕೆ ಇದ್ದ ಧಾರ್ಮಿಕ ಕಟ್ಟುಪಾಡುಗಳ ವಿರೋಧದ ನಡುವೆ ಅಕ್ಷರವನ್ನು ಬಿತ್ತಿ ಮಹಿಳಾ ಸಬಲೀಕರಣಕ್ಕೆ ನಾಂದಿ ಹಾಡಿದವರು ಸಾವಿತ್ರಿ ಬಾಯಿಪುಲೆ ಎಂದು ಹೇಳಿದರು.</p>.<p>ಮಹಿಳೆಯರನ್ನು ಗೌರವಿಸುವ ಕಾರ್ಯ ಸಮಾಜ ಮಾಡಬೇಕಿದೆ. ಮಹಿಳೆಯರಿಗೆ ಶಿಕ್ಷಣ, ಉದ್ಯೋಗಾವಕಾಶಗಳಲ್ಲಿ ಸಮಾನವಕಾಶಗಳನ್ನು ನೀಡಬೇಕು. ಮಹಿಳೆಯರು ಸಹ ಇಂದು ವೃತ್ತಿ ಜೀವನದಲ್ಲಾಗಲೀ, ಇತರ ರಂಗಗಳಲ್ಲಾಗಲೀ ಅವಕಾಶಗಳು ಬಂದಾಗ ಕೀಳರಿಮೆಯಿಂದ ಹಿಂದೆ ಸರಿಯದೆ ಪ್ರತಿಯೊಂದನ್ನು ಸವಾಲಾಗಿ ಸ್ವೀಕರಿಸಬೇಕು ಎಂದರು.</p>.<p>ಮಡಿಕೇರಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶೇಖರ್ ಮಾತನಾಡಿ, ‘ನಮ್ಮ ದೇಶದ ಸಂಸ್ಕೃತಿಯಲ್ಲಿ ಅನಾದಿಕಾಲದಿಂದಲೂ ಮಹಿಳೆಯರಿಗೆ ಉನ್ನತ ಸ್ಥಾನಮಾನ ನೀಡಲಾಗಿದೆ. ಅದರಂತೆ ಎಲ್ಲಾ ನಾರಿಯರನ್ನು ಗೌರವದಿಂದ, ಹಕ್ಕು, ಸ್ಥಾನಮಾನ ನೀಡಿ ತೃಪ್ತಿ ಪಡಿಸಿದರೆ ಈ ದೇಶ, ರಾಜ್ಯ ಸಮೃದ್ಧಿಯಾಗುತ್ತದೆ’ ಎಂದು ಹೇಳಿದರು.</p>.<p>ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ರಾಣಿ ಮಾತನಾಡಿ, ಮಹಿಳೆಯರು ಅಬಲೆಯರಲ್ಲ, ಸಬಲೆಯರು. ಪುರುಷರಂತೆ ಮಹಿಳೆಯರು ಕೂಡ ಎಲ್ಲಾ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಮುಂದಿನ ದಿನಗಳಲ್ಲೂ ಎಲ್ಲಾ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.</p>.<p>ಮಡಿಕೇರಿ ತಾಲ್ಲೂಕಿನ 26 ಸಂಜೀವಿನ ಒಕ್ಕೂಟಗಳಿಗೆ ಗೌರವ ಸಮರ್ಪಿಸಲಾಯಿತು.</p>.<p>ಪಂಚಾಯತ್ ರಾಜ್ ಸಹಾಯಕ ನಿರ್ದೇಶಕಿ ಎಂ.ಜಿ.ಸುನಿತಾ, ಎಸ್.ಎಸ್.ಹೇಮಂತ್, ರಮ್ಯ ಮೂರ್ನಾಡು, ಚೆಂಬು ಗ್ರಾಮ ಪಂಚಾಯಿತಿ ಸಂಜೀವಿನಿ ಒಕ್ಕೂಟದ ಸದಸ್ಯೆ ರೇಖಾ, ಹೊದ್ದೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅದಿಕಾರಿ ವತ್ಸಲಾ ಕುಮಾರಿ , ಮೂಕಾಂಬಿಕ ಸಂಜೀವಿನಿ ಒಕ್ಕೂಟದ ಕನಕಾಂಬಿಕೆ ಭಾಗವಹಿಸಿದ್ದರು.</p>.<p>ಸಂಜೀವಿನಿ ಒಕ್ಕೂಟದ 13 ಮಳಿಗೆಗಳು ಅಲ್ಲಿದ್ದವು. ಅವುಗಳಲ್ಲಿ ಮಹಿಳೆಯರು ತಯಾರಿಸಿದ ಕರಕುಶಲ ವಸ್ತುಗಳು ಮತ್ತಿತರ ಉತ್ಪನ್ನಗಳು ಗಮನ ಸೆಳೆದವು.</p>.<p>ಮಹಿಳಾ ದಿನಾಚರಣೆ ಒಂದು ದಿನಕ್ಕೆ ಸಿಮೀತವಾಗಬಾರದು ಎಲ್ಲಾ ರಂಗದಲ್ಲೂ ತೊಡಗಿಕೊಂಡು ಸಮಾಜದ ಅಭಿವೃದ್ಧಿಗೆ ಮುಂದಾಗಬೇಕು ಮಂದ್ರಿರ ಮೋಹನ್ದಾಸ್ ಗ್ಯಾರಂಟಿ ಯೋಜನೆಗಳ ಸಮಿತಿಯ ಮಡಿಕೇರಿ ತಾಲ್ಲೂಕು ಅಧ್ಯಕ್ಷ.</p>.<div><blockquote>ಮಹಿಳೆಯರು ತಮ್ಮ ಜವಾಬ್ದಾರಿಯನ್ನು ಅರಿತು ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಮತ್ತು ಮಹಿಳೆಯರನ್ನು ಪ್ರತಿಯೊಬ್ಬರು ಗೌರವಿಸಬೇಕು</blockquote><span class="attribution">ಪಿ.ಕಲಾವತಿ ಮಡಿಕೇರಿ ನಗರಸಭೆ ಅಧ್ಯಕ್ಷೆ.</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>