ಸಂಜೆ ದೀಪಾರಾಧನೆ ಹಾಗೂ ಎಡಮಕ್ಕಿ ಸಾರ್ವಜನಿಕ ಮೈದಾನದಿಂದ ತಾಲಪ್ಪೊಲಿ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸಿದ್ದರು. ರಾತ್ರಿ ಮಾನಂದವಾಡಿ ಭಗವತಿ ಚಂಡೆ ವಾದ್ಯಮ್ ತಂಡದಿಂದ ಸೇವೆ ನಡೆದು, ಮಹಾಪೂಜೆ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆದವು. ಸ್ಥಳೀಯ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು. ರಾತ್ರಿ ಸಿಡಿಮದ್ದಿನ ಪ್ರದರ್ಶನ ನಡೆಯಿತು. ಉತ್ಸವದಲ್ಲಿ ಕೊಡಗು ಜಿಲ್ಲೆ, ಕೇರಳ, ತಮಿಳುನಾಡಿನ ಭಕ್ತರು ಭಾಗವಹಿಸಿದ್ದರು.
ಪೂಜಾ ಕಾರ್ಯಕ್ರಮಗಳ ನೇತೃತ್ವವನ್ನು ದೇವಸ್ಥಾನದ ಮುಖ್ಯ ತಂತ್ರಿಗಳಾದ ಬ್ರಹ್ಮಶ್ರೀ ಮುಳ್ಳಪಲ್ಲಿ ಕೃಷ್ಣನ್ ನಂಬೂದಿರಿ ಮತ್ತು ದೇವಸ್ಥಾನದ ಪ್ರಧಾನ ಅರ್ಚಕ ವೇಣುಗೋಪಾಲ್ ಭಟ್ ವಹಿಸಿದ್ದರು. ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿಯವರು ಪದಾಧಿಕಾರಿಗಳು ಹಾಗೂ ಭಕ್ತರು ಭಾಗವಹಿಸಿದ್ದರು.