ಮಡಿಕೇರಿ: ಮಹಾರಾಷ್ಟ್ರದ ಪುಣೆಯಲ್ಲಿ ಕೇಂದ್ರ ಜಲಶಕ್ತಿ ಸಚಿವಾಲಯ, ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮತ್ತು ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಇವರ ಸಹಯೋಗದಲ್ಲಿ ಸೆ. 22 ರಿಂದ 3 ದಿನಗಳ ಕಾಲ ನಡೆಯಲಿರುವ ಸ್ಥಳೀಯವಾಗಿ ಸುಸ್ಥಿರ ಅಭಿವೃದ್ಧಿಯ ಗುರಿಗಳು ಕುರಿತ 3 ದಿನಗಳ ಕಾರ್ಯಾಗಾರಕ್ಕೆತಾಲ್ಲೂಕಿನ ಭಾಗಮಂಡಲ ಗ್ರಾಮ ಪಂಚಾಯಿತಿ ಆಯ್ಕೆಯಾಗಿದೆ.
ದೇಶದಲ್ಲಿಯೇ ಗುಜರಾತ್, ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ ಮತ್ತು ಉತ್ತರಪ್ರದೇಶ ರಾಜ್ಯದ 5 ಗ್ರಾಮ ಪಂಚಾಯಿತಿಗಳು ಮಾತ್ರ ಈ ಕಾರ್ಯಾಗಾರದಲ್ಲಿ ಭಾಗಿಯಾಗುತ್ತಿವೆ.
ಭಾಗಮಂಡಲ ಗ್ರಾಮ ಪಂಚಾಯಿತಿಯಲ್ಲಿ ನಿರ್ಮಿಸಲಾಗಿರುವ ಮಲತ್ಯಾಜ್ಯ ಸಂಸ್ಕರಣಾ ಘಟಕ ಕುರಿತಂತೆ ಮಾಹಿತಿ ಮತ್ತು ಕಾರ್ಯವಿಧಾನವನ್ನು ಕಾರ್ಯಾಗಾರದಲ್ಲಿ ಪ್ರಸ್ತುತಪಡಿಸಲಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಂವರಸಿಂಗ್ ಮೀನಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.