<p>ಮಡಿಕೇರಿ: ಅಲ್ಲಾರಂಡ ವಿಠಲ ನಂಜಪ್ಪ ಅವರ ‘ಬಹುರೂಪಿ’ ಪುಸ್ತಕ ಬಿಡುಗಡೆ ಸಮಾರಂಭವು ಫೆ. 5ರಂದು ಬೆಳಿಗ್ಗೆ 10 ಗಂಟೆಗೆ ಇಲ್ಲಿನ ಗಾಂಧಿ ಭವನದಲ್ಲಿ ನಡೆಯಲಿದೆ.</p>.<p>‘ಅಲ್ಲಾರಂಡ ರಂಗಚಾವಡಿ, ಸಿರಿಗನ್ನಡ ವೇದಿಕೆ ಹಾಗೂ ‘ಚಕೋರ ಕೊಡಗು’ ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ನಡೆಯುವ ಈ ಕಾರ್ಯಕ್ರಮವನ್ನು ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಹಾಗೂ ಜೆಸಿಐ ಇಂಡಿಯಾ ಸಂಸ್ಥೆಯ ರಾಷ್ಟ್ರೀಯ ಅಧ್ಯಕ್ಷ ಅಜ್ಜಿಕುಟ್ಟಿರ ಎಸ್.ನರೇನ್ ಕಾರ್ಯಪ್ಪ ಭಾಗವಹಿಸಲಿದ್ದಾರೆ’ ಎಂದು ಲೇಖಕ ಅಲ್ಲಾರಂಡ ವಿಠಲ ನಂಜಪ್ಪ ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷ ಮನೆಯಪಂಡ ಎ.ಪೊನ್ನಪ್ಪ ವಹಿಸಲಿದ್ದಾರೆ. ಪುಸ್ತಕ ಕುರಿತು ವಕೀಲರಾದ ಬಿ.ಆರ್.ರಂಗಸ್ವಾಮಿ, ಮಂಗಳೂರು ವಿಶ್ವವಿದ್ಯಾಲಯದ ಪ್ರೊ.ಟಿ.ರಂಗಪ್ಪ ಮಾತನಾಡಲಿದ್ದಾರೆ ಎಂದರು.</p>.<p>ಶಿಕ್ಷಣ ತಜ್ಞರಾದ ಕಲ್ಲುಮಾಡಂಡ ಸರಸ್ವತಿ, ಕೊಡವ ತಕ್ ಎಳ್ತ್ಕಾರಡ ಕೂಟದ ಸ್ಥಾಪಕ ಅಧ್ಯಕ್ಷ ಚೆಂಬಾಂಡ ಶಿವಿ ಭೀಮಯ್ಯ, ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ, ಕೃಷ್ಣ ಕಂಪ್ಯೂಟರ್ಸ್ನ ಉಣ್ಣಿಕೃಷ್ಣ ಅವರನ್ನು ಅಭಿನಂದಿಸಲಾಗುವುದು ಎಂದು ಹೇಳಿದರು.</p>.<p>ಈ ಕಾರ್ಯಕ್ರಮ ನಡೆಯುವ ಸುದ್ದಿ ತಿಳಿದು ಶಾಸಕ ಎ.ಎಸ್.ಪೊನ್ನಣ್ಣ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗುವ ಇಂಗಿತ ವ್ಯಕ್ತಪಡಿಸಿದರು ಎಂದರು.</p>.<p>ಒಟ್ಟು 300 ಪುಟಗಳ ಈ ಕೃತಿಯಲ್ಲಿ 56 ಲೇಖನಗಳಿವೆ. ಹಿರಿಯ ಸಾಹಿತಿ ಓ.ಎಲ್.ನಾಗಭೂಷಣಸ್ವಾಮಿ ಅವರು ಬೆನ್ನುಡಿ ಬರೆದಿದ್ದು, ಹಂಪಿಯ ಕನ್ನಡ ವಿಶ್ವವಿದ್ಯಾಲಯದ ವಿಜಯ್ ಪೂಣಚ್ಚ ತಂಬಂಡ ಅವರು ಮುನ್ನುಡಿ ಬರೆದಿದ್ದಾರೆ. ಅನಾದಿ ಕಾಲದ ಕಲೆ ‘ಬೊವೊ ಆರ್ಟ್’ ಈ ಪುಸ್ತಕದ ಹಲವು ಪುಟಗಳಲ್ಲಿರುವುದು ವಿಶೇಷ. ಬೇರೆ ಬೇರೆ ಕಾಲದಲ್ಲಿ ಬರೆದ ಲೇಖನಗಳು ಈ ಪುಸ್ತಕದಲ್ಲಿವೆ ಎಂದು ಮಾಹಿತಿ ನೀಡಿದರು.</p>.<p>ಮಾಜಿ ಸೈನಿಕರ ಘಟಕದ ಜಿಲ್ಲಾ ಘಟಕದ ಅಧ್ಯಕ್ಷ ಬೊಳ್ಳಿಯಂಡ ಗಣೇಶ್, ಗಿರಿಜನ ಸಹಕಾರ ಸಂಘದ ಮಡಿಕೇರಿ ತಾಲ್ಲೂಕು ಘಟಕದ ಅಧ್ಯಕ್ಷ ಮಿಟ್ಟು ರಂಜಿತ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಡಿಕೇರಿ: ಅಲ್ಲಾರಂಡ ವಿಠಲ ನಂಜಪ್ಪ ಅವರ ‘ಬಹುರೂಪಿ’ ಪುಸ್ತಕ ಬಿಡುಗಡೆ ಸಮಾರಂಭವು ಫೆ. 5ರಂದು ಬೆಳಿಗ್ಗೆ 10 ಗಂಟೆಗೆ ಇಲ್ಲಿನ ಗಾಂಧಿ ಭವನದಲ್ಲಿ ನಡೆಯಲಿದೆ.</p>.<p>‘ಅಲ್ಲಾರಂಡ ರಂಗಚಾವಡಿ, ಸಿರಿಗನ್ನಡ ವೇದಿಕೆ ಹಾಗೂ ‘ಚಕೋರ ಕೊಡಗು’ ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ನಡೆಯುವ ಈ ಕಾರ್ಯಕ್ರಮವನ್ನು ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಹಾಗೂ ಜೆಸಿಐ ಇಂಡಿಯಾ ಸಂಸ್ಥೆಯ ರಾಷ್ಟ್ರೀಯ ಅಧ್ಯಕ್ಷ ಅಜ್ಜಿಕುಟ್ಟಿರ ಎಸ್.ನರೇನ್ ಕಾರ್ಯಪ್ಪ ಭಾಗವಹಿಸಲಿದ್ದಾರೆ’ ಎಂದು ಲೇಖಕ ಅಲ್ಲಾರಂಡ ವಿಠಲ ನಂಜಪ್ಪ ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷ ಮನೆಯಪಂಡ ಎ.ಪೊನ್ನಪ್ಪ ವಹಿಸಲಿದ್ದಾರೆ. ಪುಸ್ತಕ ಕುರಿತು ವಕೀಲರಾದ ಬಿ.ಆರ್.ರಂಗಸ್ವಾಮಿ, ಮಂಗಳೂರು ವಿಶ್ವವಿದ್ಯಾಲಯದ ಪ್ರೊ.ಟಿ.ರಂಗಪ್ಪ ಮಾತನಾಡಲಿದ್ದಾರೆ ಎಂದರು.</p>.<p>ಶಿಕ್ಷಣ ತಜ್ಞರಾದ ಕಲ್ಲುಮಾಡಂಡ ಸರಸ್ವತಿ, ಕೊಡವ ತಕ್ ಎಳ್ತ್ಕಾರಡ ಕೂಟದ ಸ್ಥಾಪಕ ಅಧ್ಯಕ್ಷ ಚೆಂಬಾಂಡ ಶಿವಿ ಭೀಮಯ್ಯ, ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ, ಕೃಷ್ಣ ಕಂಪ್ಯೂಟರ್ಸ್ನ ಉಣ್ಣಿಕೃಷ್ಣ ಅವರನ್ನು ಅಭಿನಂದಿಸಲಾಗುವುದು ಎಂದು ಹೇಳಿದರು.</p>.<p>ಈ ಕಾರ್ಯಕ್ರಮ ನಡೆಯುವ ಸುದ್ದಿ ತಿಳಿದು ಶಾಸಕ ಎ.ಎಸ್.ಪೊನ್ನಣ್ಣ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗುವ ಇಂಗಿತ ವ್ಯಕ್ತಪಡಿಸಿದರು ಎಂದರು.</p>.<p>ಒಟ್ಟು 300 ಪುಟಗಳ ಈ ಕೃತಿಯಲ್ಲಿ 56 ಲೇಖನಗಳಿವೆ. ಹಿರಿಯ ಸಾಹಿತಿ ಓ.ಎಲ್.ನಾಗಭೂಷಣಸ್ವಾಮಿ ಅವರು ಬೆನ್ನುಡಿ ಬರೆದಿದ್ದು, ಹಂಪಿಯ ಕನ್ನಡ ವಿಶ್ವವಿದ್ಯಾಲಯದ ವಿಜಯ್ ಪೂಣಚ್ಚ ತಂಬಂಡ ಅವರು ಮುನ್ನುಡಿ ಬರೆದಿದ್ದಾರೆ. ಅನಾದಿ ಕಾಲದ ಕಲೆ ‘ಬೊವೊ ಆರ್ಟ್’ ಈ ಪುಸ್ತಕದ ಹಲವು ಪುಟಗಳಲ್ಲಿರುವುದು ವಿಶೇಷ. ಬೇರೆ ಬೇರೆ ಕಾಲದಲ್ಲಿ ಬರೆದ ಲೇಖನಗಳು ಈ ಪುಸ್ತಕದಲ್ಲಿವೆ ಎಂದು ಮಾಹಿತಿ ನೀಡಿದರು.</p>.<p>ಮಾಜಿ ಸೈನಿಕರ ಘಟಕದ ಜಿಲ್ಲಾ ಘಟಕದ ಅಧ್ಯಕ್ಷ ಬೊಳ್ಳಿಯಂಡ ಗಣೇಶ್, ಗಿರಿಜನ ಸಹಕಾರ ಸಂಘದ ಮಡಿಕೇರಿ ತಾಲ್ಲೂಕು ಘಟಕದ ಅಧ್ಯಕ್ಷ ಮಿಟ್ಟು ರಂಜಿತ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>