<p><strong>ಮಡಿಕೇರಿ:</strong> ಕೊಡಗು ಜಿಲ್ಲೆಯಾದ್ಯಂತ ಪವಿತ್ರ ‘ಈದ್–ಉಲ್–ಅದಾ’ (ಬಕ್ರೀದ್) ಹಬ್ಬವನ್ನು ಶನಿವಾರ ಶ್ರದ್ಧಾಭಕ್ತಿಗಳಿಂದ ಆಚರಿಸಲಾಯಿತು.</p>.<p>ನಾಲ್ಕು ಸಾವಿರ ವರ್ಷಗಳಿಗೂ ಹಿಂದೆ ಜೀವಿಸಿದ್ದ ಪ್ರವಾದಿ ಇಬ್ರಾಹಿಂ ಅವರ ತ್ಯಾಗವನ್ನು ನೆನಪಿಸುವ ಈ ಹಬ್ಬದಲ್ಲಿ ಜಿಲ್ಲೆಯ ಎಲ್ಲ ಮುಸ್ಲಿಮರೂ ಭಾಗಿಯಾದರು. ನಗರದಲ್ಲಿರುವ 10ಕ್ಕೂ ಹೆಚ್ಚಿನ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆಗಳು ನಡೆದವು. ಈದ್ಗಾ ಮೈದಾನದಲ್ಲೂ ವಿಶೇಷ ಪ್ರಾರ್ಥನೆ ನಡೆಯಿತು.</p>.<p>ಮಕ್ಕಳು ಹೊಸಉಡುಗೆ ತೊಟ್ಟು ಪ್ರಾರ್ಥನೆ ಸಲ್ಲಿಸಿದರು. ಮನೆಗಳಲ್ಲಿ ವಿಶೇಷ ಭೋಜನದ ವ್ಯವಸ್ಥೆ ಮಾಡಿ, ಬಂಧು ಬಳಗವನ್ನು, ಸ್ನೇಹಿತರನ್ನು ಭೋಜನಕ್ಕೆ ಆಹ್ವಾನಿಸಿದರು. ಬಡವರಿಗೆ ದಾನ ಮಾಡಿದರು.</p>.<p>ಇಲ್ಲಿನ ಸಿಪಿಸಿ ಲೇಔಟ್ನ ಮಸ್ಜಿದ್ ಉರ್ ರ್ರಹ್ಮಾ ಮಸೀದಿ, ನಗರದ ಜಾಮೀಯಾ ಮಸೀದಿ, ಗಣಪತಿ ಬೀದಿಯಲ್ಲಿನ ಬದ್ರಿಯಾ ಮಸೀದಿ, ಮಲಬಾರ್ ಮಸೀದಿ, ಮಹದೇವಪೇಟೆಯ ಭಟ್ಕಲ್ ಮಸೀದಿ ಸೇರಿದಂತೆ ಎಲ್ಲ ಮಸೀದಿಗಳಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರು. ವಿಶೇಷ ಪ್ರಾರ್ಥನೆ ಸಲ್ಲಿಸಿದರು.</p>.<p>ಸಂಪಾಜೆ ಸಮೀಪದ ಪೇರಡ್ಕ ಗೂನಡ್ಕ ಮೊಹಿಯುದ್ದೀನ್ ಜುಮಾ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರು.</p>.<p>ಬಜೆಗುಂಡಿಯ ಖಿಲಾರಿಯ ಜುಮಾ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ ನಡೆಯಿತು. ಅಧ್ಯಕ್ಷ ಕೆ.ಎ.ಯಾಕೂಬ್, ಕಾರ್ಯದರ್ಶಿ ಸುಲೈಮಾನ್, ಉಪಾಧ್ಯಕ್ಷ ಹನೀಫ, ಸಮಿತಿ ಸದಸ್ಯರೂ ಹಾಗೂ ಹಲವು ಮಂದಿ ಭಾಗವಹಿಸಿದ್ದರು.</p>.<p>ಈ ವೇಳೆ ಮಾತನಾಡಿದ ಯಾಕೂಬ್, ‘ಎಲ್ಲ ಧರ್ಮಗಳೂ ಮಾನವೀಯ ಸಂಬಂಧಗಳನ್ನು ಬೆಸೆಯುವ ಆಶಯಗಳನ್ನು ಎಲ್ಲ ಧರ್ಮಗಳೂ ಪ್ರತಿಪಾದಿಸಿವೆ ಮತ್ತು ಹಿಂಸೆಯನ್ನು ಕಟುವಾಗಿ ವಿರೋಧಿಸಿವೆ. ಇಸ್ಲಾಂ ಮಾನವೀಯ ಸಂಬಂಧಗಳ ಅಡಿಪಾಯದಲ್ಲಿ ಬೇರೂರಿದೆ’ ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಕೊಡಗು ಜಿಲ್ಲೆಯಾದ್ಯಂತ ಪವಿತ್ರ ‘ಈದ್–ಉಲ್–ಅದಾ’ (ಬಕ್ರೀದ್) ಹಬ್ಬವನ್ನು ಶನಿವಾರ ಶ್ರದ್ಧಾಭಕ್ತಿಗಳಿಂದ ಆಚರಿಸಲಾಯಿತು.</p>.<p>ನಾಲ್ಕು ಸಾವಿರ ವರ್ಷಗಳಿಗೂ ಹಿಂದೆ ಜೀವಿಸಿದ್ದ ಪ್ರವಾದಿ ಇಬ್ರಾಹಿಂ ಅವರ ತ್ಯಾಗವನ್ನು ನೆನಪಿಸುವ ಈ ಹಬ್ಬದಲ್ಲಿ ಜಿಲ್ಲೆಯ ಎಲ್ಲ ಮುಸ್ಲಿಮರೂ ಭಾಗಿಯಾದರು. ನಗರದಲ್ಲಿರುವ 10ಕ್ಕೂ ಹೆಚ್ಚಿನ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆಗಳು ನಡೆದವು. ಈದ್ಗಾ ಮೈದಾನದಲ್ಲೂ ವಿಶೇಷ ಪ್ರಾರ್ಥನೆ ನಡೆಯಿತು.</p>.<p>ಮಕ್ಕಳು ಹೊಸಉಡುಗೆ ತೊಟ್ಟು ಪ್ರಾರ್ಥನೆ ಸಲ್ಲಿಸಿದರು. ಮನೆಗಳಲ್ಲಿ ವಿಶೇಷ ಭೋಜನದ ವ್ಯವಸ್ಥೆ ಮಾಡಿ, ಬಂಧು ಬಳಗವನ್ನು, ಸ್ನೇಹಿತರನ್ನು ಭೋಜನಕ್ಕೆ ಆಹ್ವಾನಿಸಿದರು. ಬಡವರಿಗೆ ದಾನ ಮಾಡಿದರು.</p>.<p>ಇಲ್ಲಿನ ಸಿಪಿಸಿ ಲೇಔಟ್ನ ಮಸ್ಜಿದ್ ಉರ್ ರ್ರಹ್ಮಾ ಮಸೀದಿ, ನಗರದ ಜಾಮೀಯಾ ಮಸೀದಿ, ಗಣಪತಿ ಬೀದಿಯಲ್ಲಿನ ಬದ್ರಿಯಾ ಮಸೀದಿ, ಮಲಬಾರ್ ಮಸೀದಿ, ಮಹದೇವಪೇಟೆಯ ಭಟ್ಕಲ್ ಮಸೀದಿ ಸೇರಿದಂತೆ ಎಲ್ಲ ಮಸೀದಿಗಳಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರು. ವಿಶೇಷ ಪ್ರಾರ್ಥನೆ ಸಲ್ಲಿಸಿದರು.</p>.<p>ಸಂಪಾಜೆ ಸಮೀಪದ ಪೇರಡ್ಕ ಗೂನಡ್ಕ ಮೊಹಿಯುದ್ದೀನ್ ಜುಮಾ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರು.</p>.<p>ಬಜೆಗುಂಡಿಯ ಖಿಲಾರಿಯ ಜುಮಾ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ ನಡೆಯಿತು. ಅಧ್ಯಕ್ಷ ಕೆ.ಎ.ಯಾಕೂಬ್, ಕಾರ್ಯದರ್ಶಿ ಸುಲೈಮಾನ್, ಉಪಾಧ್ಯಕ್ಷ ಹನೀಫ, ಸಮಿತಿ ಸದಸ್ಯರೂ ಹಾಗೂ ಹಲವು ಮಂದಿ ಭಾಗವಹಿಸಿದ್ದರು.</p>.<p>ಈ ವೇಳೆ ಮಾತನಾಡಿದ ಯಾಕೂಬ್, ‘ಎಲ್ಲ ಧರ್ಮಗಳೂ ಮಾನವೀಯ ಸಂಬಂಧಗಳನ್ನು ಬೆಸೆಯುವ ಆಶಯಗಳನ್ನು ಎಲ್ಲ ಧರ್ಮಗಳೂ ಪ್ರತಿಪಾದಿಸಿವೆ ಮತ್ತು ಹಿಂಸೆಯನ್ನು ಕಟುವಾಗಿ ವಿರೋಧಿಸಿವೆ. ಇಸ್ಲಾಂ ಮಾನವೀಯ ಸಂಬಂಧಗಳ ಅಡಿಪಾಯದಲ್ಲಿ ಬೇರೂರಿದೆ’ ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>