<p><strong>ಮಡಿಕೇರಿ</strong>: ನಗರ ಸೇರಿದಂತೆ ಕೊಡಗು ಜಿಲ್ಲೆಯಾದ್ಯಂತ ಮುಸ್ಲಿಮರು ಸೋಮವಾರ ಶ್ರದ್ದಾ ಭಕ್ತಿಯಿಂದ ಬಕ್ರೀದ್ ಆಚರಿಸಿದರು.</p><p>ಮಳೆಯ ಕಾರಣಕ್ಕೆ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ನಡೆಸಲಿಲ್ಲ. ಆದರೆ ಎಲ್ಲ ಮಸೀದಿಗಳಲ್ಲೂ ಬೆಳಿಗ್ಗೆಯಿಂದಲೇ ವಿಶೇಷ ಪ್ರಾರ್ಥನೆಗಳು ನಡೆದವು.</p><p>ಬಡವರಿಗೆ ಕುರಿ ಮಾಂಸವನ್ನು ಹಂಚಿದರು. ಮಕ್ಕಳು ಹೊಸಬಟ್ಟೆ ತೊಟ್ಟು ಸಂಭ್ರಮಿಸಿದರು.</p><p><strong>ಗಡಿಭಾಗದಲ್ಲಿ ಆಚರಣೆ</strong> </p><p>ಕೊಡಗಿನ ಗಡಿಭಾಗವಾದ ಪೇರಡ್ಕ ಮೋಹಿದ್ದಿನ್ ಜುಮಾ ಮಸೀದಿಯಲ್ಲಿ ಬಕ್ರೀದ್ ಹಬ್ಬದ ಮಹತ್ವ ಬಗ್ಗೆ ಸಮಾಜದಲ್ಲಿ ಮತ್ತು ಊರಿನಲ್ಲಿ ಸಹಬಾಳ್ವೆ ಅಗತ್ಯದ ಬಗ್ಗೆ ಖತೀಬ್ ನಹೀಮ್ ಫೈಜಿ ಮಾತನಾಡಿದರು.</p><p>ದೇಶದ ಜನರ ಒಳಿತಿಗೆ, ಅಭಿವೃದ್ಫಿ, ಶಾಂತಿಗಾಗಿ ವಿಶೇಷ ಪ್ರಾರ್ಥನೆ ನಡೆಸಿದರು. ಎಲ್ಲರು ಪರಸ್ಪರ ಬಕ್ರೀದ್ ಹಬ್ಬದ ಶುಭಾಶಯ ವಿನಿಮಯ ಮಾಡಿ ಖಬರಸ್ಥಾನದಲ್ಲಿ ಮತ್ತು ಪೇರಡ್ಕ ಗೂನಡ್ಕ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ನಡೆಸಲಾಯಿತು.</p><p> ಜುಮಾ ಮಸ್ಜಿದ್ ಪೇರಡ್ಕ ಗೂನಡ್ಕ ಸಂಪಾಜೆ ಅಧ್ಯಕ್ಷರಾದ ಮೋಹಿದ್ದಿನ್, ತೆಕ್ಕಿಲ್ ಪ್ರತಿಷ್ಟಾನದ ಸ್ಥಾಪಕ ಅಧ್ಯಕ್ಷ ಟಿ ಎಂ ಶಾಹಿದ್ ತೆಕ್ಕಿಲ್ ಸಂಪಾಜೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗು ಎಂ ಆರ್ ಡಿ ಎ ಅಧ್ಯಕ್ಷ ಜಿ ಕೆ ಹಮೀದ್ ಗೂನಡ್ಕ, ಟಿ ಬಿ ಹನೀಫ್ ತೆಕ್ಕಿಲ್ ಪಿ ಕೆ ಉಮ್ಮರ್ , ಮೊಹಮ್ಮದ್ ಕುಂಞಿ ತೆಕ್ಕಿಲ್ ಪೇರಡ್ಕ , ಜಮಾತಿನ ಊರಿನ ಹಲವು ಮಂದಿ ಭಾಗವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ನಗರ ಸೇರಿದಂತೆ ಕೊಡಗು ಜಿಲ್ಲೆಯಾದ್ಯಂತ ಮುಸ್ಲಿಮರು ಸೋಮವಾರ ಶ್ರದ್ದಾ ಭಕ್ತಿಯಿಂದ ಬಕ್ರೀದ್ ಆಚರಿಸಿದರು.</p><p>ಮಳೆಯ ಕಾರಣಕ್ಕೆ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ನಡೆಸಲಿಲ್ಲ. ಆದರೆ ಎಲ್ಲ ಮಸೀದಿಗಳಲ್ಲೂ ಬೆಳಿಗ್ಗೆಯಿಂದಲೇ ವಿಶೇಷ ಪ್ರಾರ್ಥನೆಗಳು ನಡೆದವು.</p><p>ಬಡವರಿಗೆ ಕುರಿ ಮಾಂಸವನ್ನು ಹಂಚಿದರು. ಮಕ್ಕಳು ಹೊಸಬಟ್ಟೆ ತೊಟ್ಟು ಸಂಭ್ರಮಿಸಿದರು.</p><p><strong>ಗಡಿಭಾಗದಲ್ಲಿ ಆಚರಣೆ</strong> </p><p>ಕೊಡಗಿನ ಗಡಿಭಾಗವಾದ ಪೇರಡ್ಕ ಮೋಹಿದ್ದಿನ್ ಜುಮಾ ಮಸೀದಿಯಲ್ಲಿ ಬಕ್ರೀದ್ ಹಬ್ಬದ ಮಹತ್ವ ಬಗ್ಗೆ ಸಮಾಜದಲ್ಲಿ ಮತ್ತು ಊರಿನಲ್ಲಿ ಸಹಬಾಳ್ವೆ ಅಗತ್ಯದ ಬಗ್ಗೆ ಖತೀಬ್ ನಹೀಮ್ ಫೈಜಿ ಮಾತನಾಡಿದರು.</p><p>ದೇಶದ ಜನರ ಒಳಿತಿಗೆ, ಅಭಿವೃದ್ಫಿ, ಶಾಂತಿಗಾಗಿ ವಿಶೇಷ ಪ್ರಾರ್ಥನೆ ನಡೆಸಿದರು. ಎಲ್ಲರು ಪರಸ್ಪರ ಬಕ್ರೀದ್ ಹಬ್ಬದ ಶುಭಾಶಯ ವಿನಿಮಯ ಮಾಡಿ ಖಬರಸ್ಥಾನದಲ್ಲಿ ಮತ್ತು ಪೇರಡ್ಕ ಗೂನಡ್ಕ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ನಡೆಸಲಾಯಿತು.</p><p> ಜುಮಾ ಮಸ್ಜಿದ್ ಪೇರಡ್ಕ ಗೂನಡ್ಕ ಸಂಪಾಜೆ ಅಧ್ಯಕ್ಷರಾದ ಮೋಹಿದ್ದಿನ್, ತೆಕ್ಕಿಲ್ ಪ್ರತಿಷ್ಟಾನದ ಸ್ಥಾಪಕ ಅಧ್ಯಕ್ಷ ಟಿ ಎಂ ಶಾಹಿದ್ ತೆಕ್ಕಿಲ್ ಸಂಪಾಜೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗು ಎಂ ಆರ್ ಡಿ ಎ ಅಧ್ಯಕ್ಷ ಜಿ ಕೆ ಹಮೀದ್ ಗೂನಡ್ಕ, ಟಿ ಬಿ ಹನೀಫ್ ತೆಕ್ಕಿಲ್ ಪಿ ಕೆ ಉಮ್ಮರ್ , ಮೊಹಮ್ಮದ್ ಕುಂಞಿ ತೆಕ್ಕಿಲ್ ಪೇರಡ್ಕ , ಜಮಾತಿನ ಊರಿನ ಹಲವು ಮಂದಿ ಭಾಗವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>