ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಡಿವೈಎಸ್ಪಿ ಗಜೇಂದ್ರಪ್ರಸಾದ್, ‘ಬಿರುಕು ಬಿಟ್ಟಿರುವ ರಸ್ತೆಯಲ್ಲಿ ಬ್ಯಾರಿಕೇಡ್ ಅಳವಡಿಸಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸದ್ಯ, ಖಾಸಗಿ ಭಾರಿ ವಾಹನಗಳನ್ನು ಸಂಚರಿಸಲು ಬಿಟ್ಟಿಲ್ಲ. ಕೆಎಸ್ಆರ್ಟಿಸಿಯ ಪ್ರಯಾಣಿಕ ವಾಹನಗಳಿಗೆ ಅವಕಾಶ ನೀಡಲಾಗಿದೆ’ ಎಂದರು.