ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಿರಾಜಪೇಟೆ: ಬಂಟರ ಕ್ರೀಡಾಕೂಟಕ್ಕೆ ಚಾಲನೆ

Published 19 ಮೇ 2024, 16:26 IST
Last Updated 19 ಮೇ 2024, 16:26 IST
ಅಕ್ಷರ ಗಾತ್ರ

ವಿರಾಜಪೇಟೆ: ಜಿಲ್ಲಾ ಮಟ್ಟದ ಬಂಟರ ಕ್ರೀಡಾಕೂಟ ‘ಬಂಟರ ಸಂಗಮ-2024’‌ಕ್ಕೆ ಶನಿವಾರ ಪಟ್ಟಣದ ಸಂತ ಅನ್ನಮ್ಮ ವಿದ್ಯಾಸಂಸ್ಥೆಯ ಮೈದಾನದಲ್ಲಿ ಚಾಲನೆ‌ ನೀಡಲಾಯಿತು.

ಬಂಟರ ಸಂಘದ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕು ಘಟಕದ ವತಿಯಿಂದ ನಡೆಯುತ್ತಿರುವ ಕ್ರೀಡಾಕೂಟಕ್ಕೆ ಉದ್ಯಮಿ ಸುಧಾಕರ್ ರೈ ಚಾಲನೆ ನೀಡಿ ಶುಭ ಕೋರಿದರು.

ಬಂಟರ ಸಂಘದ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಎಸ್.ಲೀಲಾಧರ್ ರೈ ಅವರು ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಪ್ರಕಾಶ್ ರೈ, ಕಾರ್ಯದರ್ಶಿ ಸಂಪತ್ ಶೆಟ್ಟಿ, ಖಜಾಂಚಿ ಮದನ್ ಶೆಟ್ಟಿ, ನಿರ್ದೇಶಕರಾದ ಡಾ.ಹೇಮಂತ್ ಶೆಟ್ಟಿ, ಸುರೇಶ್ ರೈ, ಸುದೇಶ್ ರೈ, ಪ್ರದೀಪ್ ರೈ, ಮಹಿಳಾ ಘಟಕದ ಅಧ್ಯಕ್ಷೆ ನೀತು ರೈ, ಗೌರವಾಧ್ಯಕ್ಷೆ ಕುಸುಮ ಎನ್.ಶೆಟ್ಟಿ, ಕಾರ್ಯದರ್ಶಿ ಶಶಿಕಲಾ ಶೆಟ್ಟಿ ಸೇರಿದಂತೆ ಎಲ್ಲ ಪದಾಧಿಕಾರಿಗಳು ಹಾಜರಿದ್ದರು.
ಶನಿವಾರ ನಡೆದ ಕ್ರಿಕೇಟ್ ಪಂದ್ಯಾಟದಲ್ಲಿ ಜಿಲ್ಲೆಯ ವಿವಿಧ ಭಾಗದ ಸುಮಾರು 20 ತಂಡಗಳು ಭಾಗವಹಿಸಿದ್ದವು.

ವಿರಾಜಪೇಟೆಯಲ್ಲಿ ಶನಿವಾರ ಆರಂಭಗೊಂಡ ಜಿಲ್ಲಾ ಮಟ್ಟದ ಬಂಟರ ಕ್ರೀಡಾಕೂಟ
ವಿರಾಜಪೇಟೆಯಲ್ಲಿ ಶನಿವಾರ ಆರಂಭಗೊಂಡ ಜಿಲ್ಲಾ ಮಟ್ಟದ ಬಂಟರ ಕ್ರೀಡಾಕೂಟ
ವಿರಾಜಪೇಟೆಯಲ್ಲಿ ಶನಿವಾರ ಆರಂಭಗೊಂಡ ಜಿಲ್ಲಾ ಮಟ್ಟದ ಬಂಟರ ಕ್ರೀಡಾಕೂಟ
ವಿರಾಜಪೇಟೆಯಲ್ಲಿ ಶನಿವಾರ ಆರಂಭಗೊಂಡ ಜಿಲ್ಲಾ ಮಟ್ಟದ ಬಂಟರ ಕ್ರೀಡಾಕೂಟ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT