ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮೂಲ ಸೌಕರ್ಯ ಒದಗಿಸುವಂತೆ ಜಿಲ್ಲಾಧಿಕಾರಿ ಸೂಚನೆ’

ಪುನರ್ವಸತಿ ಕೇಂದ್ರ ಮೂಲ ಸೌಕರ್ಯಗಳ ಪ್ರಗತಿ ಪರಿಶೀಲನಾ ಸಭೆ
Last Updated 25 ಜೂನ್ 2018, 14:02 IST
ಅಕ್ಷರ ಗಾತ್ರ

ಮಡಿಕೇರಿ: ಸೋಮವಾರಪೇಟೆ ತಾಲ್ಲೂಕಿನ ಬಸವನಹಳ್ಳಿ ಮತ್ತು ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರಗಳಲ್ಲಿ ವಾಸಿಸುವ ಗಿರಿಜನ ಕಟುಂಬಗಳಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಶೀಘ್ರ ಒದಗಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಪುನರ್ವಸತಿ ಕೇಂದ್ರ ಮೂಲ ಸೌಕರ್ಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಪುನರ್ವಸತಿ ಕೇಂದ್ರಗಳಲ್ಲಿ ತಾತ್ಕಾಲಿಕ ಶೌಚಾಲಯಕ್ಕೆ ನಿರ್ಮಿಸಿರುವ ಗುಂಡಿಗಳು ಮಳೆಯ ನೀರಿನಿಂದ ಬೇಗನೆ ತುಂಬುತ್ತಿರುವ ದೂರುಗಳು ಕೇಳಿಬಂದಿವೆ. ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಮುಂಚೆಯೇ ಅವುಗಳನ್ನು ಸ್ವಚ್ಚಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

‘ಬಸವನಹಳ್ಳಿಯ 101 ಮತ್ತು ಬ್ಯಾಡಗೊಟ್ಟದ 99 ಮನೆಗಳ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿದ್ದು, ಅವುಗಳನ್ನು ಒಂದು ತಿಂಗಳ ಅವಧಿಯೊಳಗೆ ಮುಕ್ತಾಯಗೊಳಿಸಬೇಕು. ಕುಟುಂಬಗಳಿಗೆ ಆಧಾರ್ ಕಾರ್ಡ್, ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ, ಜಾತಿ ಪ್ರಮಾಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ತ್ವರಿತಗತಿಯಲ್ಲಿ ಮಾಡಿಕೊಡಬೇಕು’ ಎಂದು ಎಂದು ಶ್ರೀವಿದ್ಯಾ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ಪ್ರಶಾಂತ್ ಕುಮಾರ್ ಮಿಶ್ರ, ಕೌಶಲ ಅಭಿವೃದ್ಧಿ ಯೋಜನೆಯಡಿ ಸ್ವ ಉದ್ಯೋಗ ಪಡೆಯುವಂತಾಗಲು ಕುಟುಂಬ ಸದಸ್ಯರ ಹೆಸರು ನೋಂದಾಯಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಐಟಿಡಿಪಿ ಇಲಾಖೆ ಅಧಿಕಾರಿಗಳಿಗೆ ಸಲಹೆ ಮಾಡಿದರು.

ಉಪ ವಿಭಾಗಾಧಿಕಾರಿ ರಮೇಶ್ ಪಿ.ಕೋನರೆಡ್ಡಿ, ಐಟಿಡಿಪಿ ಇಲಾಖೆ ಅಧಿಕಾರಿ ಶಿವಕುಮಾರ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಸಚಿನ್ ಹಲವು ಮಾಹಿತಿಯನ್ನು ನೀಡಿದರು. ಸಭೆಯಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಉಪನಿರ್ದೇಶಕ ಪುಟ್ಟಸ್ವಾಮಿ, ಸೆಸ್ಕ್ ಎಂಜಿನಿಯರ್ ಸೋಮಶೇಖರ್, ಕುಶಾಲನಗರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶ್ರೀಧರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT