<p><strong>ಕುಶಾಲನಗರ:</strong> ಸಮೀಪದ ಬಸಿರುಗುಪ್ಪೆ ಗ್ರಾಮದ ಬಸವೇಶ್ವರ ದೇವಾಲಯ ಸೇವಾ ಟ್ರಸ್ಟ್ ವತಿಯಿಂದ ನೂತನವಾಗಿ ಭದ್ರಕಾಳಿ, ಭಂಟ, ನಾಗರಕಟ್ಟೆ, ಮಾರಿಯಮ್ಮ ಮತ್ತು ಗುಳಿಗ ದೇವರ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ ಬ್ರಹ್ಮಕಲಶೋತ್ಸವದ ಅಂಗವಾಗಿ ಎರಡು ದಿನಗಳ ಧಾರ್ಮಿಕ ಕಾರ್ಯಕ್ರಮಗಳಿಗೆ ಗುರುವಾರ ಚಾಲನೆ ನೀಡಲಾಯಿತು.</p>.<p>ಬೆಳಿಗ್ಗೆ 9 ಗಂಟೆಯಿಂದ ಸಾಮೂಹಿಕ ಪ್ರಾರ್ಥನೆ, ಗಣಪತಿ ಪ್ರಾರ್ಥನೆ, ಪೂಜೆ, ಶುದ್ಧ ಪುಣ್ಯಾಹ, ಮಂಡಲ ರಚನೆ, ನಾಗ ಪ್ರಾರ್ಥನೆ, ಗಣಪತಿ ಹೋಮ, ನಾಗ ದೇವರಿಗೆ ಆಶ್ಲೇಷ ಬಲಿ ಪೂಜೆ, ಹೋಮ ಹಾಗೂ ಗೋವು ಪೂಜೆ ಮೊದಲಾದ ಧಾರ್ಮಿಕ ವಿದಿಗಳು ಜರುಗಿದವು.</p>.<p>ಶಾಂತಳ್ಳಿಯ ಗಣೇಶ ಭಟ್ ನೇತೃತ್ವದಲ್ಲಿ ಸೋಮವಾರಪೇಟೆಯ ಜಗದೀಶ್ ಉಡುಪ, ಕೂತಿಯ ವೇದವ್ಯಾಸ್, ವಾದಿರಾಜ್, ಬೆಂಗಳೂರಿನ ವೆಂಕಟೇಶ್ ಹೊಳ್ಳ, ಕುಶಾಲನಗರದ ಕೃಷ್ಣಮೂರ್ತಿ ಭಟ್, ಮಣಿ ಬಜೆಗುಂಡಿ ಧಾರ್ಮಿಕ ಪೂಜಾ ಕೈಂಕಾರ್ಯಗಳು ನಡೆದವು. ಮಹಾಂಮಗಳಾರತಿಯೊಂದಿಗೆ ಭಕ್ತರಿಗೆ ಪ್ರಸಾದ ಹಾಗೂ ಅನ್ನಸಂತರ್ಪಣೆ ನಡೆಸಲಾಯಿತು.<br /> ಬಸವೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಸಿ.ಎಸ್.ಶಶಿಕುಮಾರ್, ಸ್ಥಾಪಕ ಅಧ್ಯಕ್ಷ ಧನಂಜಯ, ಕಾರ್ಯದರ್ಶಿ ಹೆಚ್.ಆರ್.ಉದಯಕುಮಾರ್, ಕೆ.ಎಲ್. ಜಸ್ಮಿ,ಶಿಕ್ಷಕರಾದ ಹುಲುಸೆ ಬಸವರಾಜು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ:</strong> ಸಮೀಪದ ಬಸಿರುಗುಪ್ಪೆ ಗ್ರಾಮದ ಬಸವೇಶ್ವರ ದೇವಾಲಯ ಸೇವಾ ಟ್ರಸ್ಟ್ ವತಿಯಿಂದ ನೂತನವಾಗಿ ಭದ್ರಕಾಳಿ, ಭಂಟ, ನಾಗರಕಟ್ಟೆ, ಮಾರಿಯಮ್ಮ ಮತ್ತು ಗುಳಿಗ ದೇವರ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ ಬ್ರಹ್ಮಕಲಶೋತ್ಸವದ ಅಂಗವಾಗಿ ಎರಡು ದಿನಗಳ ಧಾರ್ಮಿಕ ಕಾರ್ಯಕ್ರಮಗಳಿಗೆ ಗುರುವಾರ ಚಾಲನೆ ನೀಡಲಾಯಿತು.</p>.<p>ಬೆಳಿಗ್ಗೆ 9 ಗಂಟೆಯಿಂದ ಸಾಮೂಹಿಕ ಪ್ರಾರ್ಥನೆ, ಗಣಪತಿ ಪ್ರಾರ್ಥನೆ, ಪೂಜೆ, ಶುದ್ಧ ಪುಣ್ಯಾಹ, ಮಂಡಲ ರಚನೆ, ನಾಗ ಪ್ರಾರ್ಥನೆ, ಗಣಪತಿ ಹೋಮ, ನಾಗ ದೇವರಿಗೆ ಆಶ್ಲೇಷ ಬಲಿ ಪೂಜೆ, ಹೋಮ ಹಾಗೂ ಗೋವು ಪೂಜೆ ಮೊದಲಾದ ಧಾರ್ಮಿಕ ವಿದಿಗಳು ಜರುಗಿದವು.</p>.<p>ಶಾಂತಳ್ಳಿಯ ಗಣೇಶ ಭಟ್ ನೇತೃತ್ವದಲ್ಲಿ ಸೋಮವಾರಪೇಟೆಯ ಜಗದೀಶ್ ಉಡುಪ, ಕೂತಿಯ ವೇದವ್ಯಾಸ್, ವಾದಿರಾಜ್, ಬೆಂಗಳೂರಿನ ವೆಂಕಟೇಶ್ ಹೊಳ್ಳ, ಕುಶಾಲನಗರದ ಕೃಷ್ಣಮೂರ್ತಿ ಭಟ್, ಮಣಿ ಬಜೆಗುಂಡಿ ಧಾರ್ಮಿಕ ಪೂಜಾ ಕೈಂಕಾರ್ಯಗಳು ನಡೆದವು. ಮಹಾಂಮಗಳಾರತಿಯೊಂದಿಗೆ ಭಕ್ತರಿಗೆ ಪ್ರಸಾದ ಹಾಗೂ ಅನ್ನಸಂತರ್ಪಣೆ ನಡೆಸಲಾಯಿತು.<br /> ಬಸವೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಸಿ.ಎಸ್.ಶಶಿಕುಮಾರ್, ಸ್ಥಾಪಕ ಅಧ್ಯಕ್ಷ ಧನಂಜಯ, ಕಾರ್ಯದರ್ಶಿ ಹೆಚ್.ಆರ್.ಉದಯಕುಮಾರ್, ಕೆ.ಎಲ್. ಜಸ್ಮಿ,ಶಿಕ್ಷಕರಾದ ಹುಲುಸೆ ಬಸವರಾಜು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>