ನಾಪೋಕ್ಲು: ‘ವಿದ್ಯಾರ್ಥಿಗಳಲ್ಲಿ ಓದುವುದರ ಜೊತೆಗೆ ಇತರೆ ಚಟುವಟಿಕೆಗಳು ಇದ್ದಾಗ ಮಾತ್ರ ದೈಹಿಕ ಮತ್ತು ಮಾನಸಿಕವಾಗಿ ಉತ್ಸುಕತೆಯಿಂದ ಇರಲು ಸಾಧ್ಯ’ ಎಂದು ಎಸ್ಪಿ ಕೆ.ರಾಮರಾಜನ್ ಹೇಳಿದರು.
ಇತ್ತೀಚೆಗೆ ಆಯೋಜಿಸಲಾಗಿದ್ದ ಜ್ಞಾನಜ್ಯೋತಿ ವಿದ್ಯಾಸಂಸ್ಥೆ ಶಾಲಾ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು.
‘ಗ್ರಾಮೀಣ ಪ್ರದೇಶದಲ್ಲಿರುವ ಈ ಶಾಲೆಯ ಶೈಕ್ಷಣಿಕ ವ್ಯವಸ್ಥೆ ನಗರಗಳ ಅಂತರಾಷ್ಟ್ರೀಯ ಮಟ್ಟದ ಶೈಕ್ಷಣಿಕ ವ್ಯವಸ್ಥೆಯನ್ನೂ ಮೀರಿಸುವಂತಿದೆ. ಕ್ರೀಡೆಯು ಜೀವನದಲ್ಲಿ ಹೆಚ್ಚು ಚಟುವಟಿಕೆಯಿಂದರಲು ಸಹಾಯ ಮಾಡುತ್ತದೆ. ಹಾಗಾಗಿ ಶಾಲೆಗಳಲ್ಲಿ ಕ್ರೀಡೆಗೆ ಹೆಚ್ಚು ಆದ್ಯತೆ ನೀಡಬೇಕು. ಕ್ರೀಡೆಗಳಲ್ಲಿ ಸೋಲು ಧೈರ್ಯ ತುಂಬುತ್ತದೆ. ತರಗತಿಗಳಲ್ಲಿ ಹೆಚ್ಚು ಅಂಕ ಪಡೆಯುವುದು ಮಾತ್ರ ಶಾಲಾ ಜೀವನವಾಗದೆ ಅದಕ್ಕೂ ಮೀರಿ ಸಮುದಾಯದ ಬಗ್ಗೆ ಅರಿವು ಮೂಡಿಸುವ ವ್ಯವಸ್ಥೆಯನ್ನು ಶಾಲಾ ಶಿಕ್ಷಣವು ಒಳಗೊಂಡಿರಬೇಕು’ ಎಂದರು.