<p><strong>ಸೋಮವಾರಪೇಟೆ</strong>: ಗ್ರಾಮೀಣ ಭಾಗಗಳಲ್ಲಿ ಹೆಚ್ಚಾಗಿ ಕ್ರೀಡಾಕೂಟ ಆಯೋಜಿಸುವುದರಿಂದ ಸ್ಥಳೀಯ ಪ್ರತಿಭೆಗಳಿಗೆ ಹೆಚ್ಚು ಅನುಕೂಲವಾಗಲಿದ್ದು, ಸ್ಥಳೀಯ ಕ್ರೀಡೆಗಳಿಗೆ ಹೆಚ್ಚಿನ ಒತ್ತು ನೀಡಬೇಕೆಂದು ಶಾಸಕ ಡಾ.ಮಂತರ್ ಗೌಡ ಹೇಳಿದರು.</p>.<p>ತಾಲ್ಲೂಕಿನ ಕುಸುಬೂರು-ಕೆಂಚಮ್ಮನಬಾಣೆ ಭಾರತ್ ಮಾತಾ ಸೇವಾ ಸಂಘದಿಂದ ಶನಿವಾರ ಸಂಜೆ ಆಯೋಜಿಸಿದ್ದ ಗ್ರಾಮೀಣ ಕ್ರೀಡಾಕೂಟದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.</p>.<p>ಕ್ರೀಡಾ ಚಟುಟಿಕೆಗಳಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವಿಕಸನಗೊಳ್ಳಲು ಸಾಧ್ಯ. ಕ್ರೀಡಾ ಕ್ಷೇತ್ರವೂ ಹೆಚ್ಚಿನವರಿಗೆ ಜೀವನ ಕಲ್ಪಿಸಿಕೊಟ್ಟಿದ್ದು, ಗ್ರಾಮೀಣ ಭಾಗದ ಕ್ರೀಡಾಪ್ರತಿಭೆಗಳನ್ನು ಇಂತಹ ಕ್ರೀಡಾಕೂಟಗಳಲ್ಲಿ ಗುರುತಿಸಿ ಪ್ರೋತ್ಸಾಹ ನೀಡಬೇಕು. ಕ್ರೀಡೆಯಲ್ಲಿ ಆಸಕ್ತಿ ಇರುವ ಯುವಕರು ಈ ಕ್ಷೇತ್ರ ಆಯ್ಕೆ ಮಾಡಿಕೊಳ್ಳಬಹುದು. ಸಂಘ ಕಳೆದ ಮೂವತ್ತು ವರ್ಷಗಳಿಂದ ಕ್ರೀಡಾಕೂಟ ನಡೆಸಿಕೊಂಡು ಬಂದಿರುವುದು ಶ್ಲಾಘನೀಯ. ಕೆಂಚಮ್ಮನ ಬಾಣೆ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಹಾಗೂ ಸಮುದಾಯ ಭವನದ ಮುಂದುವರಿದ ಕಾಮಗಾರಿಗೆ ₹5ಲಕ್ಷ ಅನುದಾನ ನೀಡುವುದಾಗಿ ಭರವಸೆ ನೀಡಿದರು.</p>.<p>ಸೇವಾಸಂಘದ ಅಧ್ಯಕ್ಷ ಕೆ.ಜೆ.ಸುನಿಲ್ ಮಾತನಾಡಿ, ರಸ್ತೆ ಹಾಗೂ ರಂಗಮಂದಿರ ಕಾಮಗಾರಿಗೆ ಅನುದಾನ ಕಲ್ಪಿಸುವಂತೆ ಶಾಸಕರಿಗೆ ಮನವಿ ಮಾಡಿದರು. ಗ್ರಾಮೀಣಭಿವೃದ್ದಿಗೆ ಸೇವಾ ಸಂಘ ಹೆಚ್ಚಿನ ಪಾತ್ರ ವಹಿಸಿದೆ. ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ ಎಂದರು.</p>.<p>ಇದೇ ಸಂದರ್ಭ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗ್ರಾಮದ ಕೆ.ಪಿ.ಸುದರ್ಶನ್(ರಾಜಕೀಯ ಕ್ಷೇತ್ರ), ಬಿ.ಎ.ಯೋಗೇಶ್(ಉದ್ದಿಮೆ), ವಿ.ಜಿ.ವಿಕೇಶ್(ಆರೋಗ್ಯ), ಬಿ.ಎಸ್.ಭರತ್(ಉದ್ದಿಮೆ), ಜೋಸ್ಮಿತಾ ಪ್ರಮಿತ್(ನ್ಯಾಯಾಂಗ), ಬಿ.ಎಸ್.ಆನಂದ್(ರಾಜಕೀಯ) ಅವರುಗಳನ್ನು ಸನ್ಮಾನಿಸಲಾಯಿತು.</p>.<p>ವೇದಿಕೆಯಲ್ಲಿ ಗ್ರಾಮದ ಬಲಮುರಿ ಗಣಪತಿ ದೇವಾಲಯ ಸಮಿತಿ ಅಧ್ಯಕ್ಷ ಕೆ.ಪಿ.ಸೋಮಶೇಖರ್, ಬಿ.ಸಿ.ಪೂಣಚ್ಚ, ಹಾಲಿ ಉಪಾಧ್ಯಕ್ಷ ಕೆ.ಜಿ.ವಿಜಯಕುಮಾರ್, ಶ್ರೀ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷ ಬಿ.ಎ.ಭಾಸ್ಕರ್, ಪ್ರಮುಖರಾದ ಬಿ.ಬಿ.ಸತೀಶ್, ಮಿಥುನ್ ಹಾನಗಲ್, ಚೇತನ್, ಕೆ.ಪಿ.ಉಲ್ಲಾಸ್, ಅರುಣ್ ಕಾಳಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೋಮವಾರಪೇಟೆ</strong>: ಗ್ರಾಮೀಣ ಭಾಗಗಳಲ್ಲಿ ಹೆಚ್ಚಾಗಿ ಕ್ರೀಡಾಕೂಟ ಆಯೋಜಿಸುವುದರಿಂದ ಸ್ಥಳೀಯ ಪ್ರತಿಭೆಗಳಿಗೆ ಹೆಚ್ಚು ಅನುಕೂಲವಾಗಲಿದ್ದು, ಸ್ಥಳೀಯ ಕ್ರೀಡೆಗಳಿಗೆ ಹೆಚ್ಚಿನ ಒತ್ತು ನೀಡಬೇಕೆಂದು ಶಾಸಕ ಡಾ.ಮಂತರ್ ಗೌಡ ಹೇಳಿದರು.</p>.<p>ತಾಲ್ಲೂಕಿನ ಕುಸುಬೂರು-ಕೆಂಚಮ್ಮನಬಾಣೆ ಭಾರತ್ ಮಾತಾ ಸೇವಾ ಸಂಘದಿಂದ ಶನಿವಾರ ಸಂಜೆ ಆಯೋಜಿಸಿದ್ದ ಗ್ರಾಮೀಣ ಕ್ರೀಡಾಕೂಟದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.</p>.<p>ಕ್ರೀಡಾ ಚಟುಟಿಕೆಗಳಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವಿಕಸನಗೊಳ್ಳಲು ಸಾಧ್ಯ. ಕ್ರೀಡಾ ಕ್ಷೇತ್ರವೂ ಹೆಚ್ಚಿನವರಿಗೆ ಜೀವನ ಕಲ್ಪಿಸಿಕೊಟ್ಟಿದ್ದು, ಗ್ರಾಮೀಣ ಭಾಗದ ಕ್ರೀಡಾಪ್ರತಿಭೆಗಳನ್ನು ಇಂತಹ ಕ್ರೀಡಾಕೂಟಗಳಲ್ಲಿ ಗುರುತಿಸಿ ಪ್ರೋತ್ಸಾಹ ನೀಡಬೇಕು. ಕ್ರೀಡೆಯಲ್ಲಿ ಆಸಕ್ತಿ ಇರುವ ಯುವಕರು ಈ ಕ್ಷೇತ್ರ ಆಯ್ಕೆ ಮಾಡಿಕೊಳ್ಳಬಹುದು. ಸಂಘ ಕಳೆದ ಮೂವತ್ತು ವರ್ಷಗಳಿಂದ ಕ್ರೀಡಾಕೂಟ ನಡೆಸಿಕೊಂಡು ಬಂದಿರುವುದು ಶ್ಲಾಘನೀಯ. ಕೆಂಚಮ್ಮನ ಬಾಣೆ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಹಾಗೂ ಸಮುದಾಯ ಭವನದ ಮುಂದುವರಿದ ಕಾಮಗಾರಿಗೆ ₹5ಲಕ್ಷ ಅನುದಾನ ನೀಡುವುದಾಗಿ ಭರವಸೆ ನೀಡಿದರು.</p>.<p>ಸೇವಾಸಂಘದ ಅಧ್ಯಕ್ಷ ಕೆ.ಜೆ.ಸುನಿಲ್ ಮಾತನಾಡಿ, ರಸ್ತೆ ಹಾಗೂ ರಂಗಮಂದಿರ ಕಾಮಗಾರಿಗೆ ಅನುದಾನ ಕಲ್ಪಿಸುವಂತೆ ಶಾಸಕರಿಗೆ ಮನವಿ ಮಾಡಿದರು. ಗ್ರಾಮೀಣಭಿವೃದ್ದಿಗೆ ಸೇವಾ ಸಂಘ ಹೆಚ್ಚಿನ ಪಾತ್ರ ವಹಿಸಿದೆ. ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ ಎಂದರು.</p>.<p>ಇದೇ ಸಂದರ್ಭ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗ್ರಾಮದ ಕೆ.ಪಿ.ಸುದರ್ಶನ್(ರಾಜಕೀಯ ಕ್ಷೇತ್ರ), ಬಿ.ಎ.ಯೋಗೇಶ್(ಉದ್ದಿಮೆ), ವಿ.ಜಿ.ವಿಕೇಶ್(ಆರೋಗ್ಯ), ಬಿ.ಎಸ್.ಭರತ್(ಉದ್ದಿಮೆ), ಜೋಸ್ಮಿತಾ ಪ್ರಮಿತ್(ನ್ಯಾಯಾಂಗ), ಬಿ.ಎಸ್.ಆನಂದ್(ರಾಜಕೀಯ) ಅವರುಗಳನ್ನು ಸನ್ಮಾನಿಸಲಾಯಿತು.</p>.<p>ವೇದಿಕೆಯಲ್ಲಿ ಗ್ರಾಮದ ಬಲಮುರಿ ಗಣಪತಿ ದೇವಾಲಯ ಸಮಿತಿ ಅಧ್ಯಕ್ಷ ಕೆ.ಪಿ.ಸೋಮಶೇಖರ್, ಬಿ.ಸಿ.ಪೂಣಚ್ಚ, ಹಾಲಿ ಉಪಾಧ್ಯಕ್ಷ ಕೆ.ಜಿ.ವಿಜಯಕುಮಾರ್, ಶ್ರೀ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷ ಬಿ.ಎ.ಭಾಸ್ಕರ್, ಪ್ರಮುಖರಾದ ಬಿ.ಬಿ.ಸತೀಶ್, ಮಿಥುನ್ ಹಾನಗಲ್, ಚೇತನ್, ಕೆ.ಪಿ.ಉಲ್ಲಾಸ್, ಅರುಣ್ ಕಾಳಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>