<p><strong>ಕುಶಾಲನಗರ:</strong> ಕುಶಾಲನಗರ ಕಡೆಯಿಂದ ಹುಣಸೂರು ಕಡೆಗೆ ಪಿಕ್ ಆಪ್ ವಾಹನದಲ್ಲಿ ಅಕ್ರಮವಾಗಿ ಹರಳು ಕಲ್ಲು ಸಾಗಾಟ ಮಾಡುತ್ತಿದ್ದ ವಾಹನವನ್ನು ಸಿನೀಮಿಯ ರೀತಿಯಲ್ಲಿ ಬೆನ್ನಟ್ಟಿ ಮೂವರನ್ನು ಬಂಧಿಸಿ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.</p>.<p>ಕುಶಾಲನಗರ ವಲಯ ಅರಣ್ಯಾಧಿಕಾರಿ ರತನ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಅರಣ್ಯ ಸಿಬ್ಬಂದಿಗಳ ತಂಡ 2,495 ಕೆಜಿ ಹರಳು ಕಲ್ಲು ವಶ ಪಡಿಸಿಕೊಂಡಿದ್ದಾರೆ.</p>.<p>ವಾಹನ ಚಾಲಕ ಅರಣ್ಯ ತಪಾಸಣಾ ಕೇಂದ್ರದ ಸಿಬ್ಬಂದಿಗಳು ನಿಲ್ಲಿಸುವಂತೆ ಸೂಚನೆ ನೀಡಿದರೂ ವೇಗವಾಗಿ ಚಾಲನೆ ಮಾಡಿಕೊಂಡ ಹೋದಾಗ ಆರ್.ಎಫ್.ಒ. ರತನ್ ಕುಮಾರ್ ಹಿಂಬಾಲಿಸಿ ವಾಹನವನ್ನು ತಡೆದು, ಮೂವರನ್ನು ಬಂಧಿಸಿದರು.</p>.<p>ಅಕ್ರಮವಾಗಿ ಬೀಟೆ ನಾಟಾ ವಶ:</p>.<p>ಕುಶಾಲನಗರ ಕಡೆಯಿಂದ ಪಿಕ್ ಆಪ್ ವಾಹನದಲ್ಲಿ ಬೀಟೆ ನಾಟಾಗಳನ್ನು ತುಂಬಿಸಿಕೊಂಡು ಮೈಸೂರು ಕಡೆಗೆ ಹೋಗುತ್ತಿದ್ದ ವಾಹನವನ್ನು ಟೋಲ್ಗೇಟ್ ಬಳಿಯ ಅರಣ್ಯ ತಪಾಸಣಾ ಕೇಂದ್ರದ ಸಿಬ್ಬಂದಿ ತಡೆದು ನಿಲ್ಲಿಸಿ ಪರಿಶೀಲನೆ ನಡೆಸಿದ ವೇಳೆ ಅಕ್ರಮವಾಗಿ ಬೀಟೆ ನಾಟಾ ಸಾಗಾಟ ಮಾಡುತ್ತಿರುವ ಪ್ರಕರಣ ಗೊತ್ತಾಯಿತು. ಈ ವೇಳೆ ಚಾಲಕ ಹಾಗೂ ಮತ್ತೊಬ್ಬ ಪರಾರಿಯಾದರು. ಅರಣ್ಯ ಸಿಬ್ಬಂದಿ ವಾಹನ ಮತ್ತು ಬೀಟೆ ನಾಟಾವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ:</strong> ಕುಶಾಲನಗರ ಕಡೆಯಿಂದ ಹುಣಸೂರು ಕಡೆಗೆ ಪಿಕ್ ಆಪ್ ವಾಹನದಲ್ಲಿ ಅಕ್ರಮವಾಗಿ ಹರಳು ಕಲ್ಲು ಸಾಗಾಟ ಮಾಡುತ್ತಿದ್ದ ವಾಹನವನ್ನು ಸಿನೀಮಿಯ ರೀತಿಯಲ್ಲಿ ಬೆನ್ನಟ್ಟಿ ಮೂವರನ್ನು ಬಂಧಿಸಿ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.</p>.<p>ಕುಶಾಲನಗರ ವಲಯ ಅರಣ್ಯಾಧಿಕಾರಿ ರತನ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಅರಣ್ಯ ಸಿಬ್ಬಂದಿಗಳ ತಂಡ 2,495 ಕೆಜಿ ಹರಳು ಕಲ್ಲು ವಶ ಪಡಿಸಿಕೊಂಡಿದ್ದಾರೆ.</p>.<p>ವಾಹನ ಚಾಲಕ ಅರಣ್ಯ ತಪಾಸಣಾ ಕೇಂದ್ರದ ಸಿಬ್ಬಂದಿಗಳು ನಿಲ್ಲಿಸುವಂತೆ ಸೂಚನೆ ನೀಡಿದರೂ ವೇಗವಾಗಿ ಚಾಲನೆ ಮಾಡಿಕೊಂಡ ಹೋದಾಗ ಆರ್.ಎಫ್.ಒ. ರತನ್ ಕುಮಾರ್ ಹಿಂಬಾಲಿಸಿ ವಾಹನವನ್ನು ತಡೆದು, ಮೂವರನ್ನು ಬಂಧಿಸಿದರು.</p>.<p>ಅಕ್ರಮವಾಗಿ ಬೀಟೆ ನಾಟಾ ವಶ:</p>.<p>ಕುಶಾಲನಗರ ಕಡೆಯಿಂದ ಪಿಕ್ ಆಪ್ ವಾಹನದಲ್ಲಿ ಬೀಟೆ ನಾಟಾಗಳನ್ನು ತುಂಬಿಸಿಕೊಂಡು ಮೈಸೂರು ಕಡೆಗೆ ಹೋಗುತ್ತಿದ್ದ ವಾಹನವನ್ನು ಟೋಲ್ಗೇಟ್ ಬಳಿಯ ಅರಣ್ಯ ತಪಾಸಣಾ ಕೇಂದ್ರದ ಸಿಬ್ಬಂದಿ ತಡೆದು ನಿಲ್ಲಿಸಿ ಪರಿಶೀಲನೆ ನಡೆಸಿದ ವೇಳೆ ಅಕ್ರಮವಾಗಿ ಬೀಟೆ ನಾಟಾ ಸಾಗಾಟ ಮಾಡುತ್ತಿರುವ ಪ್ರಕರಣ ಗೊತ್ತಾಯಿತು. ಈ ವೇಳೆ ಚಾಲಕ ಹಾಗೂ ಮತ್ತೊಬ್ಬ ಪರಾರಿಯಾದರು. ಅರಣ್ಯ ಸಿಬ್ಬಂದಿ ವಾಹನ ಮತ್ತು ಬೀಟೆ ನಾಟಾವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>