<p>ವಿರಾಜಪೇಟೆ: 2024-25ನೇ ಶೈಕ್ಷಣಿಕ ಸಾಲಿನ ಅತ್ಯುತ್ತಮ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್ಡಿಎಂಸಿ) ಪ್ರಶಸ್ತಿಯನ್ನು ಸಮೀಪದ ಬೇಟೋಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡೆದುಕೊಂಡಿದೆ.</p>.<p>ಸಾರ್ವಜನಿಕ ಶಿಕ್ಷಣ ಇಲಾಖೆಯ ಪುಷ್ಟಿ ಯೋಜನೆಯಡಿ ಸಮೀಕ್ಷೆ ಕೈಗೊಂಡು ಜಿಲ್ಲೆಯಿಂದ ಆಯ್ಕೆ ಮಾಡಿದ ಮೂರು ಶಾಲೆಗಳ ಪೈಕಿ ಬೇಟೋಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿರಾಜಪೇಟೆ ತಾಲ್ಲೂಕಿನ ಏಕೈಕ ಶಾಲೆಯಾಗಿದೆ.</p>.<p>ಶಾಲೆಯು ಪ್ರಶಸ್ತಿಗೆ ಆಯ್ಕೆಗೊಂಡ ಹಿನ್ನೆಲೆಯಲ್ಲಿ ಶಾಲೆಯ ಅಭಿವೃದ್ಧಿಗಾಗಿ ಇಲಾಖೆ ₹1 ಲಕ್ಷ ಮೊತ್ತದ ಬಹುಮಾನವನ್ನು ಬಿಡುಗಡೆಗೊಳಿಸಿದೆ. ಇಲಾಖೆಯ ಸೂಚನೆಯಂತೆ ಬಹುಮಾನದ ಹಣದಲ್ಲಿ ಖರೀದಿಸಿದ ಲ್ಯಾಪ್ ಟಾಪ್ನ್ನು ಬುಧವಾರ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಮೀತಲತಂಡ ಎಂ.ಇಸ್ಮಾಯಿಲ್ ಅವರು ಶಾಲೆಯ ಮುಖ್ಯ ಶಿಕ್ಷಕಿ ಸೀತಾಗೆ ಹಸ್ತಾಂತರಿಸಿದರು.</p>.<p>ಈ ಸಂದರ್ಭ ಮಾತನಾಡಿದ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಮೀತಲತಂಡ ಎಂ.ಇಸ್ಮಾಯಿಲ್, ಮೊದಲಿನಿಂದಲೂ ಗುಣಮಟ್ಟದ ಶಿಕ್ಷಣದ ಮೂಲಕ ಬೇಟೋಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗಮನ ಸೆಳೆದಿದೆ. ಈ ಕಾರಣದಿಂದ ಖಾಸಗಿ ಶಾಲೆಗೆ ಪೈಪೋಟಿ ನೀಡುವ ಹಂತಕ್ಕೆ ಬೆಳೆದು ನಿಂತಿದೆ. ಇಚ್ಛಾಶಕ್ತಿಯೊಂದಿದ್ದರೆ ಸರ್ಕಾರಿ ಶಾಲೆ ಸರ್ವತೋಮುಖವಾಗಿ ಅಭಿವೃದ್ಧಿಗೊಳಿಸಬಹುದು ಎಂಬುದಕ್ಕೆ ಈ ಶಾಲೆಯ ಉತ್ತಮ ಉದಾಹರಣೆಯಾಗಿದೆ ಎಂದರು.</p>.<p>ವಿರಾಜಪೇಟೆಯ ಜಯಪ್ರಕಾಶ್ ನಾರಾಯಣ್ ಪ್ರೌಢಶಾಲೆಯ ಶಿಕ್ಷಕಿ ಸೀತಾ, ಎಸ್ಡಿಎಂಸಿ ಸದಸ್ಯ ವನಿತಾ ಕುಮಾರ, ಶಾಲೆಯ ದೈಹಿಕ ಶಿಕ್ಷಕ ತಿಮ್ಮಯ್ಯ, ಸಹ ಶಿಕ್ಷಕ ಶ್ರೀನಿವಾಸ್, ಸುಜಾತ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿರಾಜಪೇಟೆ: 2024-25ನೇ ಶೈಕ್ಷಣಿಕ ಸಾಲಿನ ಅತ್ಯುತ್ತಮ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್ಡಿಎಂಸಿ) ಪ್ರಶಸ್ತಿಯನ್ನು ಸಮೀಪದ ಬೇಟೋಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡೆದುಕೊಂಡಿದೆ.</p>.<p>ಸಾರ್ವಜನಿಕ ಶಿಕ್ಷಣ ಇಲಾಖೆಯ ಪುಷ್ಟಿ ಯೋಜನೆಯಡಿ ಸಮೀಕ್ಷೆ ಕೈಗೊಂಡು ಜಿಲ್ಲೆಯಿಂದ ಆಯ್ಕೆ ಮಾಡಿದ ಮೂರು ಶಾಲೆಗಳ ಪೈಕಿ ಬೇಟೋಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿರಾಜಪೇಟೆ ತಾಲ್ಲೂಕಿನ ಏಕೈಕ ಶಾಲೆಯಾಗಿದೆ.</p>.<p>ಶಾಲೆಯು ಪ್ರಶಸ್ತಿಗೆ ಆಯ್ಕೆಗೊಂಡ ಹಿನ್ನೆಲೆಯಲ್ಲಿ ಶಾಲೆಯ ಅಭಿವೃದ್ಧಿಗಾಗಿ ಇಲಾಖೆ ₹1 ಲಕ್ಷ ಮೊತ್ತದ ಬಹುಮಾನವನ್ನು ಬಿಡುಗಡೆಗೊಳಿಸಿದೆ. ಇಲಾಖೆಯ ಸೂಚನೆಯಂತೆ ಬಹುಮಾನದ ಹಣದಲ್ಲಿ ಖರೀದಿಸಿದ ಲ್ಯಾಪ್ ಟಾಪ್ನ್ನು ಬುಧವಾರ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಮೀತಲತಂಡ ಎಂ.ಇಸ್ಮಾಯಿಲ್ ಅವರು ಶಾಲೆಯ ಮುಖ್ಯ ಶಿಕ್ಷಕಿ ಸೀತಾಗೆ ಹಸ್ತಾಂತರಿಸಿದರು.</p>.<p>ಈ ಸಂದರ್ಭ ಮಾತನಾಡಿದ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಮೀತಲತಂಡ ಎಂ.ಇಸ್ಮಾಯಿಲ್, ಮೊದಲಿನಿಂದಲೂ ಗುಣಮಟ್ಟದ ಶಿಕ್ಷಣದ ಮೂಲಕ ಬೇಟೋಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗಮನ ಸೆಳೆದಿದೆ. ಈ ಕಾರಣದಿಂದ ಖಾಸಗಿ ಶಾಲೆಗೆ ಪೈಪೋಟಿ ನೀಡುವ ಹಂತಕ್ಕೆ ಬೆಳೆದು ನಿಂತಿದೆ. ಇಚ್ಛಾಶಕ್ತಿಯೊಂದಿದ್ದರೆ ಸರ್ಕಾರಿ ಶಾಲೆ ಸರ್ವತೋಮುಖವಾಗಿ ಅಭಿವೃದ್ಧಿಗೊಳಿಸಬಹುದು ಎಂಬುದಕ್ಕೆ ಈ ಶಾಲೆಯ ಉತ್ತಮ ಉದಾಹರಣೆಯಾಗಿದೆ ಎಂದರು.</p>.<p>ವಿರಾಜಪೇಟೆಯ ಜಯಪ್ರಕಾಶ್ ನಾರಾಯಣ್ ಪ್ರೌಢಶಾಲೆಯ ಶಿಕ್ಷಕಿ ಸೀತಾ, ಎಸ್ಡಿಎಂಸಿ ಸದಸ್ಯ ವನಿತಾ ಕುಮಾರ, ಶಾಲೆಯ ದೈಹಿಕ ಶಿಕ್ಷಕ ತಿಮ್ಮಯ್ಯ, ಸಹ ಶಿಕ್ಷಕ ಶ್ರೀನಿವಾಸ್, ಸುಜಾತ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>