ಭಗಂಡೇಶ್ವರ ದೇವಾಲಯದಲ್ಲಿ ತೀರ್ಥೋದ್ಭವದ ಹಿನ್ನೆಲೆಯಲ್ಲಿ ಅಕ್ಟೋಬರ್ 15ರಂದು ಭಾನುವಾರ 11.45ಕ್ಕೆ ಧನುರ್ ಲಗ್ನದಲ್ಲಿ ಅಕ್ಷಯ ಪಾತ್ರೆ ಇರಿಸಲಾಗುವುದು. ಅದೇ ದಿನ ಸಂಜೆ 4.5ಕ್ಕೆ ಕುಂಭಲಗ್ನದಲ್ಲಿ ಕಾಣಿಕೆ ಡಬ್ಬಿ ಇಡುವ ಕಾರ್ಯಕ್ರಮ ನೆರವೇರಲಿದೆ.
ತಲಕಾವೇರಿ ದೇವಾಲಯದ ತಕ್ಕರಾದ ಕೋಡಿ ಮೋಟಯ್ಯ, ಆಡಳಿತಾಧಿಕಾರಿ ಚಂದ್ರಶೇಖರ್, ಪಾರುಪತ್ತೆಗಾರ ಪೊನ್ನಣ್ಣ, ಹರೀಶ್ ಭಟ್ ನಿಡ್ಯ ಮಲೆ ರವಿ, ಕುದುಕುಳಿ ಭರತ್, ಕುದುಪಜೆ ಪ್ರಕಾಶ್ ಇದ್ದರು.